ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿ
Team Udayavani, Jun 15, 2020, 4:24 PM IST
ಗಜೇಂದ್ರಗಡ: ರೈತರ ಪರವಾದ ಕಾಯ್ದೆಗಳನ್ನು ತರುವುದರ ಬದಲು ಬಂಡವಾಳ ಶಾಹಿಗಳ ತಾಳಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಕುಣಿಯುವ ಮೂಲಕ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತರುತ್ತಿರುವುದು ಖಂಡನೀಯ. ಕೂಡಲೇ ಸರ್ಕಾರ ಕಾಯ್ದೆಯನ್ನು ಕೈ ಬಿಡಬೇಕು ಎಂದು ತಾಪಂ ಸದಸ್ಯ, ರೈತ ಮುಖಂಡ ಶಶಿಧರ ಹೂಗಾರ ಒತ್ತಾಯಿಸಿದರು.
ರಾಜೂರ ಗ್ರಾಮದ ಸುರೇಶಗೌಡ ಪಾಟೀಲ ಅವರ ಜಮೀನಿನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ರೈತ ಪರವಾದ ಸರ್ಕಾರ ಎಂದು ಹೇಳುತ್ತಾರೆ. ಆದರೆ ಅನ್ನ ನೀಡುವ ರೈತರ ಭೂಮಿಯನ್ನು ಉಳ್ಳವರು ಕಸಿದುಕೊಳ್ಳುವಂತಹ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದಾರೆ. ಇದ್ಯಾವ ರೈತರ ಪರವಾದ ಸರ್ಕಾರ ಎಂದು ಪ್ರಶ್ನಿಸಿದರು.
ರೈತ ಮುಖಂಡ ವಿ.ಬಿ. ಹಪ್ಪಳ ಮಾತನಾಡಿ, ಕೃಷಿ ಭೂಮಿಯನ್ನು ಉಳ್ಳವರು, ಕಾರ್ಪೊರೇಟ್ ಉದ್ಯಮಿಗಳು ಮತ್ತು ಬಲಾಡ್ಯ ಉದ್ಯಮಿಗಳು ಮನಸೋ ಇಚ್ಛೇ ಖರೀದಿ ಮಾಡಿ, ರೈತರನ್ನು ಬೀದಿಗೆ ತಳ್ಳುವ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಪ್ರಗತಿ ಪರ ರೈತ ಮುಖಂಡರಾದ ಸುರೇಶಗೌಡ ಪಾಟೀಲ, ಮುದಿಯಪ್ಪ ಜೋಗಿನ, ಈಶಪ್ಪ ಗೂಳಿ, ಶರಣಪ್ಪ ಹಾದಿಮನಿ, ಹನಮಂತ ಹಿತ್ತಲಮನಿ, ಪ್ರಭು ಹುಡೇದ, ಶೇಖಪ್ಪ ಮಳಗಿ, ಕಳಕಪ್ಪ ಮಾಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ