ಅಂತರ್ಜಲ ಹೆಚ್ಚಳದಿಂದ ಭೂ ಕುಸಿತ?


Team Udayavani, Nov 11, 2019, 2:07 PM IST

gadaga-tdy-2

ಗದಗ: ಬಯಲು ಸೀಮೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಕೆಲ ವರ್ಷಗಳಿಂದ ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತಿತ್ತು. ಅವಳಿ ನಗರದಲ್ಲಿನ ಐತಿಹಾಸಿಕ ಬಾವಿ, ಹೊಂಡಗಳು ಬತ್ತಿ ಹೋಗಿ ಬರಿದಾಗಿದ್ದವು.

ಆದರೆ, ಇತ್ತೀಚಿನ ವರ್ಷಗಳಲ್ಲಿ ನಗರದ ಐತಿಹಾಸಿಕ ಭೀಷ್ಮ ಕೆರೆಗೆ ನಿರಂತರ ನೀರು ತುಂಬಿಸುವ ಕೆಲಸವಾಗುತ್ತಿದ್ದು, ಅಂತರ್ಜಲ ಮಟ್ಟ ವಿಪರೀತವಾಗಿ ಹೆಚ್ಚಿದೆ. ಇದು ಪರೋಕ್ಷವಾಗಿ ಭೂ ಕುಸಿತಕ್ಕೆ ಕಾರಣವಾಗುತ್ತಿದೆ ಎಂಬುದು ಇದೀಗ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.

ಶನಿವಾರ ಬೆಳಗ್ಗೆ ನಗರದ ಖಾನತೋಟದ ಮನೆಯಲ್ಲಿ ಭೂ ಕುಸಿತ ಉಂಟಾಗಿದ್ದು, ಇಂಥದ್ದೊಂದು ಚರ್ಚೆ ಶುರುವಾಗಿದೆ. ಮಳೆ ಆಶ್ರಿತ ಪ್ರದೇಶವಾಗಿರುವ ನಗರ ಹಲವು ದಶಕಗಳಿಂದ ನಿರೀಕ್ಷಿತ ಮಳೆಯೂ ಇಲ್ಲದೇ ಇಲ್ಲಿನ ಐತಿಹಾಸಿಕ ಭೀಷ್ಮ ಕೆರೆ ಬರಿದಾಗಿತ್ತು. ಅದರೊಂದಿಗೆ ಕೆರೆ ಹರಿದು ಬರುವ ಮಳೆ ನೀರಿನ ಬಫರ್‌ ಪ್ರದೇಶದಲ್ಲಿ ಹೊಸ ಬಡಾವಣೆಗಳಾಗಿ, ಬೃಹತ್‌ ಕಟ್ಟಡಗಳು ತಲೆ ಎತ್ತಿವೆ. ಪರಿಣಾಮ ದಶಕಗಳಿಂದ ಭೀಷ್ಮ ಕೆರೆ ನೀರಿಲ್ಲದೇ ಖಾಲಿ ಮೈದಾನದಂತೆ ಗೋಚರಿಸುತ್ತಿತ್ತು. ಆದರೆ, ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಕಳೆದ ಮೂರು ವರ್ಷಗಳಿಂದ ತುಂಗಭದ್ರಾ ನದಿ ನೀರಿನಿಂದ ನಗರದ ಭೀಷ್ಮ ಕೆರೆ ಒಡಲು ತುಂಬಿಸಲಾಗುತ್ತಿದೆ. ಅದರ ಫಲವಾಗಿ ಹಲವು ವರ್ಷಗಳಿಂದ ಬರಿದಾಗಿದ್ದ ನಗರದ ಕೊಳವೆ ಬಾವಿಗಳಲ್ಲಿ ಕಳೆದ ವರ್ಷದಿಂದ ಜೀವ ಜಲ ಜಿನುಗುತ್ತಿವೆ.

ಮರು ಜೀವ ಪಡೆದ ನೀರಿನ ಸೆಲೆ: ಅದರಂತೆ ಸುಮಾರು ಮೂರ್‍ನಾಲ್ಕು ದಶಗಳಿಂದ ನೀರೇ ಕಂಡರಿಯದ ಕೊನೇರಿ ಹೊಂಡದಲ್ಲಿ ನೀರಿನ ಸೆಲೆಗಳು ಮರು ಜೀವ ಪಡೆದಿದ್ದು, ನೀರಿನಿಂದ ತುಂಬಿ ತುಳುಕುತ್ತಿವೆ. ನೀರಿಲ್ಲದೇ ಪಾತಾಳ ಕಂಡಿದ್ದ ಇಲ್ಲಿನ ಐತಿಹಾಸಿಕ ವೀರನಾರಾಯಣ ದೇವಸ್ಥಾನ, ಕಿಲ್ಲಾ ಓಣಿ, ಖಾನ ತೋಟದ ಹೊಸ ಬಾವಿ, ನರಿ ಬಾವಿ, ಹನುಮಾನ ದೇವಸ್ಥಾನ ಬಾವಿಗಳಿಗೆ ಇದೀಗ ಜೀವಕಳೆ ಬಂದಿರುವುದು ನಗರದಲ್ಲಿ ಅಂತರ್ಜಲ ಮಟ್ಟ ಹೆಚ್ಚುತ್ತಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತದೆ.

ನಗರದಲ್ಲಿ ಬಸಿ ನೀರಿನ ಸಮಸ್ಯೆ?: ನಗರದಲ್ಲಿ ಅಂತರ್ಜಲ ಹೆಚ್ಚಳದಿಂದಾಗಿ ನಗರದಲ್ಲಿ ಬಸಿ ನೀರಿನ ಸಮಸ್ಯೆ ಶುರುವಾಗಿದೆ. ಪಂಚರ ಹೊಂಡ, ನಾಮಜೋಶಿ ರೋಡ್‌ ಹಾಗೂ ಸ್ಟೇಷನ್‌ ರಸ್ತೆಯ ಹಲವು ನೆಲಮಹಡಿ (ಅಂಡರ್‌ ಗ್ರೌಂಡ್‌ ಬಿಲ್ಡಿಂಗ್‌) ಕಟ್ಟಡಗಳಲ್ಲಿ ನೆಲಹಾಸು ಹಾಗೂ ಬಿರುಕು ಬಿಟ್ಟಿರುವ ಗೋಡೆಗಳಿಂದ ನೀರು ಜಿನುಗ್ಗುತ್ತಿವೆ. ಅದರಲ್ಲೂ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಬಸಿ ನೀರಿನ ಸಮಸ್ಯೆ ಹೆಚ್ಚುತ್ತಿದೆ ಎಂಬುದು ವರ್ತಕರ ಅಳಲು.

1.5 ಅಡಿಗೂ ಹೆಚ್ಚು ನೀರು ಸಂಗ್ರಹ: ಕೆಲವೆಡೆ ಪ್ರತಿದಿನ ಬೆಳಗಾಗುತ್ತಿದ್ದಂತೆ ಸುಮಾರು ಒಂದೂವರೆ ಅಡಿಗೂ ಹೆಚ್ಚು ನೀರು ಸಂಗ್ರಹವಾಗುತ್ತಿವೆ. ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಒಂದೆರಡು ಗಂಟೆಗಳಲ್ಲಿ ನೀರು ಖಾಲಿಯಾದರೆ, ಇನ್ನೂ ಕೆಲವೆಡೆ ದಿನವಿಡೀ ಪಂಪ್‌ ಮಾಡಿದರೂ, ಬಸಿ ನೀರು ಬರುತ್ತಿರುವುದು ಆಯಾ ಕಟ್ಟಡಗಳ ವರ್ತಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿದ್ದರಿಂದ ಭೂಮಿ ಸಡಿಲಗೊಳ್ಳುತ್ತಿದ್ದು, ಭೂ ಕುಸಿತಕ್ಕೆ ಕಾರಣವಾಗಿದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಅಲ್ಲದೇ, ಶನಿವಾರ ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ದಶಕಗಳ ಹಿಂದೆ ಹಗೆಗಳು, ಬಾವಿಗಳಿದ್ದವು. ಅವುಗಳಿಗೆ ಮಣ್ಣು ತುಂಬಿ ನೆಲಸಮಗೊಳಿಸಿದ್ದು, ಇದೀಗ ಮತ್ತೆ ಅವು ಬಾಯೆ¤ರೆಯುತ್ತಿವೆ ಎಂಬ ಮಾತು ಕೇಳಿ ಬಂದಿವೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.