ಕೋವಿಡ್ ವಿರುದ್ಧ ಸಮರಕ್ಕೆ ಎಚ್ಕೆ ಸಾಥ್
ಸೋಂಕಿತರಲ್ಲಿ ಆತ್ಮಸ್ಥೈರ್ಯ ಆಹಾರ-ಆಹಾರ ಧಾನ್ಯ ಕಿಟ್ ವಿತರಣೆ, ಕಾಲಕಾಲಕ್ಕೆ ಅಧಿಕಾರಿಗಳ ಸಭೆ ನಡೆಸಿದ ಪಾಟೀಲ
Team Udayavani, May 25, 2021, 6:50 PM IST
ಗದಗ: ಜಿಲ್ಲಾದ್ಯಂತ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದೆ. ಅದರೊಂದಿಗೆ ಗದಗ ತಾಲೂಕಿನ ಕೊರೊನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವುದರೊಂದಿಗೆ ಕಾಲಕಾಲಕ್ಕೆ ಅಧಿಕಾರಿಗಳ ಸಭೆ ನಡೆಸಿದ್ದ ಸ್ಥಳೀಯ ಶಾಸಕ ಎಚ್.ಕೆ.ಪಾಟೀಲ ಅವರು ಇದೀಗ ತಮ್ಮದೇ ಆದ ಕೆ.ಎಚ್.ಪಾಟೀಲ ಪ್ರತಿಷ್ಠಾನದಿಂದ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಿದ್ದಾರೆ. ಈ ಮೂಲಕ ಕೋವಿಡ್ ವಿರುದ್ಧದ ಸಮರದಲ್ಲಿ ಸರಕಾರದೊಂದಿಗೆ ಕೈಜೋಡಿಸಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದ್ದಂತೆ ಸರಕಾರವನ್ನು ನಿರಂತರ ಎಚ್ಚರಿಸುವ ಕೆಲಸ ಮಾಡುವುದರೊಂದಿಗೆ ಸೋಂಕು ನಿವಾರಣೆಗೆ ವಿವಿಧ ವಿಶೇಷ ಉಪಕ್ರಮ ಕೈಗೊಂಡಿದ್ದಾರೆ.
ಸೋಂಕಿತರೊಂದಿಗೆ ಸಂವಾದ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಏ.29ರಿಂದ ಹೋಂ ಐಸೋಲೇಷನ್ನಲ್ಲಿರುವ ನೂರಾರು ಸೋಂಕಿತರೊಂದಿಗೆ ನಿರಂತರ ಸಂವಾದ ನಡೆಸುತ್ತಿದ್ದಾರೆ. ಪ್ರತಿನಿತ್ಯ ಬೆಳಗ್ಗೆ 10 ರಿಂದ 12 ಗಂಟೆವರೆಗೆ ಸತತ ಎರಡು ಗಂಟೆಗಳ ಕಾಲ ಸಂವಾದ ನಡೆಸುತ್ತಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬುವುದರ ಜತೆಗೆ ಅಗತ್ಯವಿದ್ದವರಿಗೆ ತಜ್ಞ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿ ಸಿದ ಸಲಹೆ-ಸೂಚನೆ-ಮಾರ್ಗದರ್ಶನ ಕಲ್ಪಿಸುತ್ತಿದ್ದಾರೆ.
ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ: ಸೋಂಕಿತರ ಬೇಕು-ಬೇಡಿಕೆಗಳನ್ನು ಪೂರೈಸಲು ಎಚ್. ಕೆ.ಪಾಟೀಲ ಗದಗ ತಾಲೂಕು ಕೊರೊನಾ ಸೇವಾ ತಂಡ ಮತ್ತು ಸಹಾಯವಾಣಿ ರಚಿಸಿದ್ದಾರೆ. ಪ್ರಮುಖ ನಾಲ್ವರ ಮೊಬೈಲ್ಗಳನ್ನು ಸಹಾಯವಾಣಿಗೆ ನೀಡಿದ್ದು, ಅವರ ಮೂಲಕ 52 ಜನರ ಯುವ ಪಡೆ ಕಾರ್ಯ ನಿರ್ವಹಿಸುವಂತೆ ಮಾಡಿದ್ದಾರೆ. ಇದರಲ್ಲಿ ವೈದ್ಯರು, ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರಿದ್ದು, ಅಗತ್ಯವಿರುವ ಸೋಂಕಿತರ ಮನೆಗೆ ಆಹಾರ, ಆಹಾರ ಧಾನ್ಯ, ಔಷಧ, ಓದುವ ಅಭಿರುಚಿಯಿರುವವರಿಗೆ ಬಯಸಿದ ಪುಸ್ತಕಗಳನ್ನೂ ಒದಗಿಸುವ ಮೂಲಕ ಸೋಂಕಿತರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಸೇವಾಕರ್ತರು ಪ್ರಚಾರಕ್ಕಾಗಿ ಸೋಂಕಿತರೊಂದಿಗೆ ಫೋಟೋ ತೆಗೆದುಕೊಳ್ಳುವುದು, ಸಾಮಾಜಿಕ ತಾಣದಲ್ಲಿ ಹರಿಬಿಡದಂತೆ ಸೂಚಿಸಿರುವುದು ಗಮನಾರ್ಹ.
ಅಧಿಕಾರಿಗಳ ಜತೆ ಶಾಸಕರ ಸಭೆ: ಜಿಲ್ಲೆಯ ಮುಂಡರಗಿಯಲ್ಲಿ ವೆಂಟಿಲೇಟರ್ ಸಿಗದೇ ಮೂವರು ಸಾಯುತ್ತಿದ್ದಂತೆ ಶಾಸಕ ಎಚ್. ಕೆ.ಪಾಟೀಲ, ರೋಣ ಮಾಜಿ ಶಾಸಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗದೊಂದಿಗೆ ಜಿಲ್ಲಾ ಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ಕೊರತೆಯಾಗದಂತೆ ಕ್ರಮ ವಹಿಸಲು ಮನವಿ ಮಾಡಿದ್ದಾರೆ.
ಜಿಮ್ಸ್ಗೆ ಅನುದಾನ ಬಿಡುಗಡೆ: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 20 ಕೆಎಲ್ ಸಾಮರ್ಥ್ಯದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ಸ್ಥಾಪನೆಗಾಗಿ ಶಾಸಕ ಎಚ್.ಕೆ.ಪಾಟೀಲ ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯಡಿ 42ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಜತೆಗೆ ಶಾಸಕರ ನಿಧಿಯಡಿ ಖರೀದಿಸಿದ 10 ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಹಸ್ತಾಂತರಿಸಿದ್ದಾರೆ. ಈ ನಡುವೆ ಜಿಮ್ಸ್ಗೆ ಭೇಟಿ ನೀಡಿದ್ದ ಅವರು ಆಕ್ಸಿಜನ್ ಸಂಗ್ರಹಣ ಘಟಕ ಪರಿಶೀಲಿಸಿ, ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ