Laxmeshwar: ಅಂಚೆ ಇಲಾಖೆಗಿದೆ ಅತ್ಯುತ್ತಮ ಸಂಪರ್ಕ ಜಾಲ; ಶಾಸಕ ಲಮಾಣಿ

ಅಂಚೆ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

Team Udayavani, Oct 12, 2023, 5:16 PM IST

Laxmeshwar: ಅಂಚೆ ಇಲಾಖೆಗಿದೆ ಅತ್ಯುತ್ತಮ ಸಂಪರ್ಕ ಜಾಲ

ಲಕ್ಷ್ಮೇಶ್ವರ: ಪ್ರಸ್ತುತ ಆಧುನಿಕ ದಿನಮಾನಗಳಲ್ಲಿ ಅಂಚೆ ಇಲಾಖೆ ವಿಶ್ವದಲ್ಲಿಯೇ ಉತ್ತಮ ಸಂಪರ್ಕ ಜಾಲ ಹೊಂದಿದ್ದು, ಜನರ ವಿಶ್ವಾಸ ಗಳಿಸಿರುವ  ಇಲಾಖೆಯಾಗಿದೆ ಎಂದು ಶಾಸಕ ಡಾ| ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.

ಪಟ್ಟಣದ ಚನ್ನಮ್ಮನ ವನ ಕಲ್ಯಾಣ ಮಂಟಪದಲ್ಲಿ ಅಂಚೆ ಇಲಾಖೆ ಗದಗ ವಿಭಾಗ, ಗದಗ ಉಪ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಅಂಚೆ ಜನಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಅಂಚೆ ಅಧಿಕಾರಿಗಳ ಸೇವೆ ಬಹು ದೊಡ್ಡದು. ದಕ್ಷತೆ, ಗೌರವಯುತವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಭ್ರಷ್ಟಾಚಾರ ರಹಿತ ವ್ಯವಸ್ಥೆ ಅಂಚೆ ಇಲಾಖೆಯಲ್ಲಿ ಮಾತ್ರ ಇದೆ. ಅಂಚೆ ಇಲಾಖೆಯ ಕಾರ್ಯ ಸಮಾಜಮುಖೀಯಾಗಿದೆ. ಸ್ಪರ್ಧಾತ್ಮಕ ಯುಗದ ಪೈಪೋಟಿಯಲ್ಲಿ ಅಂತರ್ಜಾಲ ತಂತ್ರಜ್ಞಾನ ಬಳಸಿಕೊಂಡು ಜನರಿಗೆ ಉತ್ತಮ ರೀತಿಯಲ್ಲಿ ಸೌಲಭ್ಯಗಳನ್ನು ನೀಡುತ್ತಿದೆ. ಅದರಲ್ಲೂ ಅಂದಿನ ಯಾವುದೇ ಸೌಲಭ್ಯಗಳಿಲ್ಲದ ದಿನಗಳಲ್ಲಿ ಅಂಚೆಯಣ್ಣ ಮನೆ ಮನೆಗೆ ಪತ್ರ ತಲುಪಿಸುತ್ತಿದ್ದ ಪ್ರಾಮಾಣಿಕ ಸೇವೆ ಮಹತ್ವದ್ದಾಗಿದೆ. ಹೀಗಾಗಿ, ನೂರಾರು ವರ್ಷಗಳು ಕಳೆದರು ಅದರ ಮೇಲಿನ ವಿಶ್ವಾಸ ಕಡಿಮೆಯಾಗಿಲ್ಲ. ಇದೀಗ ಸಾಕಷ್ಟು ಯೋಜನೆಗಳನ್ನು ತಂದಿರುವ ಅಂಚೆ ಇಲಾಖೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಅಂಚೆ ವಿಭಾಗದ ಅಂಚೆ ಅಧಿಧೀಕ್ಷಕ ನಿಂಗನಗೌಡ ಭಂಗಿಗೌಡ್ರ ಮಾತನಾಡಿ, ಅಂಚೆ ಇಲಾಖೆ ಸಿಬ್ಬಂದಿ ಪ್ರಾಮಾಣಿಕವಾಗಿ, ಆದರ್ಶಪ್ರಾಯರಾಗಿ, ನಯ-ವಿನಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೌಲಭ್ಯಗಳಲ್ಲಿ ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಬದಲಾವಣೆ ಅವಶ್ಯವಾಗಿದೆ.

ಅಂಚೆ ಕಚೇರಿಗೆ 250 ವರ್ಷಗಳ ಇತಿಹಾಸವಿದೆ. ವಿಶ್ವಾಸಕ್ಕೆ ಯೋಗ್ಯವಾದದ್ದಾಗಿದೆ. ಶಾಲಾ, ಕಾಲೇಜು ಮಕ್ಕಳಿಗೆ ಅಂಚೆ ಕಚೇರಿ ಸೇವೆ ಇಂದು ತುಂಬಾ ಸಹಾಯಕವಾಗಿದೆ. ಇದೀಗ ಠೇವಣಿ, ವಿಮೆ, ಉಳಿತಾಯ ಖಾತೆ ಇತ್ಯಾದಿಗಳ ಸೌಲಭ್ಯವಿದ್ದು, ಫೋನ್‌ ಮೂಲಕ ತಿಳಿಸಿದರೆ ಖಾತೆಯಲ್ಲಿನ ಹಣವನ್ನು ಮನೆಗೆ ತಲುಪಿಸುವ ಯೋಜನೆ ಸಹ ಇದೆ. ಅಂಚೆ ಇಲಾಖೆಯಲ್ಲಿರುವ ಹೊಸ ಹೊಸ ಯೋಜನೆಗಳ ಬಗ್ಗೆ ಜನರು ತಿಳಿದುಕೊಂಡು ಇಲಾಖೆಯೊಂದಿಗೆ ಕೈಜೋಡಿಸಬೇಕೆಂದರು. ತಹಶೀಲ್ದಾರ್‌ ಕೆ.ಆನಂದಶೀಲ್‌ ಮಾತನಾಡಿದರು.

ಸಹಾಯಕ ಅಂಚೆ ಅಧಿಧೀಕ್ಷಕ ಶ್ರೀಕಾಂತ ಜಾಧವ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದಲ್ಲಿ ಅಂಚೆ ಇಲಾಖೆ ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಮೀಸಲಾಗಿತ್ತು. ಇಲಾಖೆ ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಗ್ರಾಹಕರಿಗೆ ಒದಗಿಸುತ್ತಿರುವುದು
ಜಗತ್ತಿನಲ್ಲಿಯೇ ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಸಿ.ಜಿ.ಹಿರೇಮಠ, ಬಿ.ಎಸ್‌.ಬಾಳೇಶ್ವರಮಠ, ಶಕುಂತಲಾ ಹೊರಟ್ಟಿ, ಐಪಿಪಿಬಿ ವ್ಯವಸ್ಥಾಪಕ ಪಿ.ಆನಂದಸಾಗರ, ಪಟ್ಟಣದ ಅಂಚೆ ಪಾಲಕ ದೊಡ್ಡಪ್ಪ ಇಟಗಿ, ನಿವೃತ್ತ ಅಂಚೆ ಪಾಲಕ ಬಸವರಾಜ ಬಳ್ಳೊಳ್ಳಿ ಸೇರಿದಂತೆ ಅನೇಕರಿದ್ದರು.

ಇದೇ ಸಂದರ್ಭದಲ್ಲಿ ಅಂಚೆ ಕಚೇರಿ ಸಂಪರ್ಕ ಅಭಿಯಾನದ ಅಂಗವಾಗಿ ಸ್ಥಳೀಯ ಪುರಸಭೆ ಪೌರಕಾರ್ಮಿಕರು ಹಾಗೂ ಅಂಚೆ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ದೊಡ್ಡಪ್ಪ ಇಟಗಿ ಸ್ವಾಗತಿಸಿ, ಈಶ್ವರ ಮೆಡ್ಲೆರಿ ನಿರೂಪಿಸಿದರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.