ಸಂಸತ್ನಲ್ಲಿ ಮಹದಾಯಿ ಕೂಗು ಮೊಳಗಲಿ
Team Udayavani, Jun 8, 2019, 10:15 AM IST
ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಹೋರಾಟ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಹೋರಾಟ ಸಮನ್ವಯ ಸಮಿತಿ ಕೋಶಾಧ್ಯಕ್ಷ ಫಕೀರಪ್ಪ ಜೋಗಣ್ಣವರ ಮಾತನಾಡಿದರು.
ನರಗುಂದ: ಜು. 16ಕ್ಕೆ ಮಹದಾಯಿ ಹೋರಾಟ ನಾಲ್ಕು ವರ್ಷಗಳು ಗತಿಸಿದರೂ ಇದುವರೆಗೆ ಮಹದಾಯಿ ಮಲಪ್ರಭೆಯ ಒಡಲು ಸೇರುತ್ತಿಲ್ಲ. ಇನ್ನಾದರೂ ನಾಡಿನ ಎಲ್ಲ ಸಂಸದರು ಸಂಸತ್ನಲ್ಲಿ ಮಹದಾಯಿಗೆ ಧ್ವನಿಯಾಗಿ ಈ ಭಾಗದ ರೈತರ ನೆರವಿಗೆ ಧಾವಿಸಲಿ ಎಂದು ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಫಕೀರಪ್ಪ ಜೋಗಣ್ಣವರ ಆಗ್ರಹಿಸಿದರು.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನಷ್ಠಾನಕ್ಕೆ ಒತ್ತಾಯಿಸಿ ಸುದೀರ್ಘ 1422ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ಮಹದಾಯಿ ನ್ಯಾಯಾಧಿಕರಣ ನಮ್ಮ ಪಾಲಿನ 13.42 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ 10 ತಿಂಗಳು ಗತಿಸಿದರೂ ಅದರ ಸದ್ಬಳಕೆಗೆ ಸರ್ಕಾರಗಳು ಮುಂದಾಗುತ್ತಿಲ್ಲ ಎಂದು ವಿಷಾದಿಸಿದರು.
ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನ್ಯಾಯಾಧಿಕರಣ 6 ತಿಂಗಳು ಅವಕಾಶ ನೀಡಿ 10 ತಿಂಗಳಾದರೂ ಮಹದಾಯಿ ನೀರು ಬಳಸಿಕೊಳ್ಳುವ ಕಾಮಗಾರಿಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುತ್ತಿಲ್ಲ. ಮತ್ತೂಂದೆಡೆ ರಾಜ್ಯ ಸರ್ಕಾರ ಕೂಡ ಕೈಚೆಲ್ಲಿ ಕುಳಿತಿದೆ. ಇನ್ನಾದರೂ ನಾಡಿನ ಸಂಸದರು ಮುತುವರ್ಜಿ ವಹಿಸಲಿ ಎಂದು ಒತ್ತಾಯಿಸಿದರು.
ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಮಾತನಾಡಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ನಾಲ್ಕು ವರ್ಷದಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಯಾವ ಸರ್ಕಾರಗಳಿಗೂ ಇದರ ಕಾಳಜಿಯಿಲ್ಲ. ಇನ್ನಾದರೂ ರೈತರ ಮೊರೆ ಆಲಿಸಿ ಈ ಭಾಗದಲ್ಲಿ ಹಸಿರು ಕ್ರಾಂತಿಗೆ ಸರ್ಕಾರಗಳು ಸಹಕಾರ ನೀಡಲಿ ಎಂದು ಆಗ್ರಹಿಸಿದರು.
ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಹನಮಂತ ಕೋರಿ, ವೆಂಕಪ್ಪ ಹುಜರತ್ತಿ, ವಿರುಪಾಕ್ಷಿ ಪಾರಣ್ಣವರ, ವಾಸು ಚವ್ಹಾಣ, ಲಕ್ಷ್ಮಣ ಮನೇನಕೊಪ್ಪ, ಮಲ್ಲಪ್ಪ ಐನಾಪುರ, ಕಲ್ಲಪ್ಪ ಮೊರಬದ, ಸುರೇಶ ಸಾತಣ್ಣವರ, ಚನ್ನಪ್ಪಗೌಡ ಪಾಟೀಲ, ದೇವಕ್ಕ ತಾಳಿ, ಅನಸಮ್ಮ ಶಿಂಧೆ, ನಾಗರತ್ನ ಸವಳಭಾವಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ