ಮೂಗು ಮುರಿಯುತ್ತಿದ್ದವರೇ ಓದುಗರಾದರು!


Team Udayavani, Jul 7, 2021, 10:43 AM IST

ಮೂಗು ಮುರಿಯುತ್ತಿದ್ದವರೇ ಓದುಗರಾದರು!

ಗದಗ: ಪುಟ್ಟ ಗುಡಿಸಲು ಎಂಬಂತಿದ್ದ ಗ್ರಂಥಾಲಯದ ಹೆಸರು ಹೇಳಿದರೆ ಸಾಕು ಗ್ರಾಮದ ಬಹುತೇಕರು ಮೂಗು ಮುರಿಯುತ್ತಿದ್ದರು. ಆದರೆ ಇದೀಗ ಪಂಚಾಯತ್‌ ಅಧಿಕಾರಿಗಳ ಕಾಳಜಿಯಿಂದ ನೂತನ ಕಟ್ಟಡದಲ್ಲಿ ತಲೆ ಎತ್ತಿರುವ ವಾಚನಾಲಯ ಅತ್ಯಾಧುನಿಕ ಪೀಠೊಪಕರಣ ಮತ್ತು ಕಂಪ್ಯೂಟರ್‌ಗಳು ಮಾರುದ್ದ ಹೋಗುತ್ತಿದ್ದವರನ್ನೂ ಕೂಡ ಆಕರ್ಷಿಸುತ್ತಿವೆ.

ತಾಲೂಕಿನ ಕದಡಿ ಗ್ರಾಮದಲ್ಲಿ ಹಳೇ ಕಟ್ಟಡದಲ್ಲಿದ್ದ ಗ್ರಂಥಾಲಯ ಅಲ್ಲಲ್ಲಿ ಶಿಥಿಲಗೊಂಡಿತ್ತು. ಗ್ರಂಥಾಲಯದ ಈ ಪರಿಸ್ಥಿತಿ ಅರಿತ ಗ್ರಾಪಂ ಅಧಿಕಾರಿಗಳು ಅದನ್ನು ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸುವ ಜತೆಗೆ ಓದುಗರ ಆಕರ್ಷಣೆ ಹಾಗೂ ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಹೆಚ್ಚಿಸಲು ವಿವಿಧ ಉಪಕ್ರಮ ಕೈಗೊಂಡಿರುವುದರಿಂದ ಓದುಗರನ್ನು ಕೈಬೀಸಿ ಕರೆಯುತ್ತಿದೆ.

ತಾಲೂಕು ಕೇಂದ್ರದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಕದಡಿ ಗ್ರಾಮದಲ್ಲಿ 2001ರಲ್ಲಿ ಪುಟ್ಟದೊಂದು ಹಳೇ ಕೋಣೆಯಲ್ಲಿ ಗ್ರಂಥಾಲಯ ಆರಂಭಗೊಂಡಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಅದು ಅಲ್ಲಲ್ಲಿ ಶಿಥಿಲಗೊಂಡು, ಮಳೆ ಬಂದರೆ ಸೋರುತ್ತಿತ್ತು. ಇದರಿಂದ ಗ್ರಂಥಾಲಯದಲ್ಲಿನ ಪುಸ್ತಕಗಳೂ ಹಾನಿಯಾಗುವ ಸಂಭವವಿತ್ತು.ಹೀಗಾಗಿ, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಗ್ರಂಥಾಲಯಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದರು.ಈ ಬಗ್ಗೆ ಗ್ರಂಥ ಪಾಲಕರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಗಮನ ಸೆಳೆದಿದ್ದರು.

ಸಮುದಾಯ ಭವನಕ್ಕೆ ಶಿಫ್ಟ್‌: ಸಮಸ್ಯೆ ಗಂಭೀರತೆ ಅರಿತ ಗ್ರಾಪಂ ಆಡಳಿತ ಮಂಡಳಿ, ಗ್ರಂಥಾಲಯ ಅಧಿಕಾರಿಗಳ ಅನುಮತಿಯೊಂದಿಗೆ ಪಂಚಾಯಿತಿ ಅಧೀನದಲ್ಲಿರುವ ನೂತನ ಸಮುದಾಯ ಭವನದ ಕಟ್ಟಡಕ್ಕೆ ಗ್ರಂಥಾಲಯ ಸ್ಥಳಾಂತರಿಸಿದೆ. ಅಲ್ಲದೇ, ಸಮುದಾಯ ಭವನದ ಒಂದು ಬೃಹತ್‌ ಕೊಠಡಿಯಲ್ಲಿ ಗ್ರಂಥಾಲಯಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗ್ರಾಪಂನ 14ನೇ ಹಣಕಾಸು ಯೋಜನೆಯಡಿ ಸುಮಾರು 90 ಸಾವಿರ ರೂ. ಖರ್ಚು ಮಾಡಿ, ಓದುಗರ ಅನುಕೂಲಕ್ಕಾಗಿ ಸುಸಜ್ಜಿತ ಕಟ್ಟಿಗೆಯ 12 ಕುರ್ಚಿ, ಮೇಜುಗಳು ಹಾಗೂ ಸಾವಿರಾರು ಪುಸ್ತಕ ಅಚ್ಚುಕಟ್ಟಾಗಿ ಜೋಡಿಸಿಡಲು ರ್ಯಾಕ್‌ಗಳನ್ನೂ ಒದಗಿಸಲಾಗಿದೆ. ಹೀಗಾಗಿ, ಅತ್ಯಾಧುನಿಕವಾಗಿರುವ ಗ್ರಂಥಾಲಯ ಓದುಗರನ್ನು ಆಕರ್ಷಿಸುತ್ತಿದೆ.

ಪ್ರೌಢಶಾಲಾ ಮಕ್ಕಳಿಗೆ ಕಡ್ಡಾಯ: ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಾಲೆಗಳು ಇನ್ನೂ ಬಾಗಿಲು ತೆರೆದಿಲ್ಲ. ಸದ್ಯಕ್ಕೆ ವಿವಿಧ ತರಗತಿಗಳಿಗೆಆನ್‌ಲೈನ್‌ ಮೂಲಕ ಶಿಕ್ಷಣ ಒದಗಿಸಲಾಗುತ್ತಿದೆ.ಆದರೂ, ಮಕ್ಕಳು ಮೊಬೈಲ್‌ ಗೇಮಿಂಗ್‌ ಗೀಳಿಗೆಅಂಟಿಕೊಳ್ಳುತ್ತಿದ್ದಾರೆ. ಮೊಬೈಲ್‌ ಗೇಮಿಂಗ್‌ಗೀಳು ತಪ್ಪಿಸಿ, ಅವರಲ್ಲಿ ಓದುವ ಆಸಕ್ತಿ ಹೆಚ್ಚಿಸಲು ಗ್ರಂಥಾಲಯ ಪರಿಣಾಮಕಾರಿಯಾಗಿ ಬಳಸುವ ಚಿಂತನೆ ನಡೆದಿದೆ.

ಗ್ರಂಥಾಲಯದಲ್ಲಿ ಸುಮಾರು 4443ಕ್ಕಿಂತ ಹೆಚ್ಚಿನ ಪುಸ್ತಕಗಳಿದ್ದು, ಪ್ರತಿನಿತ್ಯ 3 ದಿನ ಪತ್ರಿಕೆಗಳು ಲಭ್ಯವಿದೆ. ಅಗತ್ಯ ಪೀಠೊಪರಕಣ ಕಲ್ಪಿಸಲಾಗಿದ್ದು, ಗ್ರಂಥಾಲಯಸುಸಜ್ಜಿತವಾಗಿದೆ. ಮಕ್ಕಳ ಓದಿಗೆ ಪೂರಕ ವಾತಾವರಣಕಲ್ಪಿಸಲಾಗಿದೆ. ಸದ್ಯ ಶಾಲಾ ಮಕ್ಕಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಭೇಟಿ ನೀಡುವಂತೆ ಸೂಚಿಸಬೇಕು. ಶಾಲಾ ಆರಂಭದ ಬಳಿಕ ವಾರದಲ್ಲಿ ಒಂದು ಅವ ಧಿ ಗ್ರಂಥಾಲಯಕ್ಕೆ ಮೀಸಲಿಡಬೇಕೆಂದು ಸರ್ಕಾರಿ ಪ್ರೌಢಶಾಲೆ ಮುಖ್ಯ ಗುರುಗಳಿಗೆ ಮನವಿ ಮಾಡಲಾಗಿದ್ದು, ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಪಾಳು ಬಿದ್ದಿದ್ದ ಗ್ರಂಥಾಲಯ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸುವ ಮೂಲಕ ಮಹತ್ವದ ಬದಲಾವಣೆಗೆ ಗ್ರಾಪಂ ಆಡಳಿತ ನಾಂದಿ ಹಾಡಿದೆ. ಹಿಂದೆ ಬೆರಳೆಣಿಕೆಯಷ್ಟು ಜನರು ಭೇಟಿ ನೀಡುತ್ತಿದ್ದ ಗ್ರಂಥಾಲಯದಲ್ಲಿ ಇದೀಗ ಓದುಗರ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುತ್ತಾರೆ ಗ್ರಂಥಪಾಲಕ ವೀರಪ್ಪ ಚೋಳಪ್ಪನವರ.

ಗ್ರಂಥಾಲಯದಲ್ಲಿ ಸಾಮಾನ್ಯವಾಗಿ ಕಥೆ, ಕಾದಂಬರಿ ಪುಸ್ತಕಗಳಿವೆ. ಪ್ರೌಢಶಾಲಾ ಪಠ್ಯಕ್ರಮಕ್ಕೆ ಪೂರಕ ಮತ್ತು ವಿದ್ಯಾರ್ಥಿಗಳಲ್ಲಿ ಓದುವ ಸದಭಿರುಚಿ ಬೆಳೆಸುವ ಪುಸ್ತಕ ಪಟ್ಟಿ ಮಾಡಿಕೊಡುವಂತೆ ಶಾಲೆ ಶಿಕ್ಷಕರನ್ನು ಕೋರಲಾಗಿದೆ. ಅದನ್ನು ಹಂತ ಹಂತವಾಗಿ ಪೂರೈಸಲಾಗುತ್ತದೆ. ಸರ್ಕಾರದಿಂದ ಅನುದಾನ ಲಭಿಸಿದರೆ ಪ್ರತ್ಯೇಕ ಗ್ರಂಥಾಲಯ ನಿರ್ಮಿಸಲಾಗುತ್ತದೆ. ಗ್ರಾಮದ ಮಕ್ಕಳು, ಯುವಕರಲ್ಲಿ ಓದುವ ಹವ್ಯಾಸ ಹೆಚ್ಚಿಸಬೇಕೆಂಬುದೇ ನಮ್ಮ ಆಶಯ. –ಜ್ಯೋತಿ ಬ. ಗುಡಗೂರ, ಗ್ರಾಪಂ ಪಿಡಿಒ

ಗ್ರಾಪಂನಲ್ಲಿ ಲಭ್ಯವಿರುವ ಅಲ್ಪಸ್ವಲ್ಪ ಅನುದಾನದಲ್ಲಿಉತ್ತಮ ಗ್ರಂಥಾಲಯ ಮಾಡಿದ್ದಾರೆ. ಇದಕ್ಕೆ ಗ್ರಾಪಂ ಪಿಡಿಒ ಅವರ ವೈಯಕ್ತಿಕ ಆಸಕ್ತಿಯೇ ಮುಖ್ಯ. ಗ್ರಂಥಾಲಯ ಸ್ಥಳಾಂತರ ಕಾರ್ಯಕ್ಕೆ ಗ್ರಾಮಸ್ಥರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿವೆ.– ಡಾ| ಎಚ್‌.ಎಸ್‌. ಜಿನಗಾ, ತಾಪಂ ಇಒ

ಟಾಪ್ ನ್ಯೂಸ್

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

hk-patil

Gadag ಹಿರಿಯ ರಾಜಕಾರಣಿ ಎಚ್.ಕೆ.ಪಾಟೀಲರಿಗೆ 6ನೇ ಬಾರಿಗೆ ಸಚಿವ ಪಟ್ಟ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

kiccha sudeep

ಹೊಸ ಚಿತ್ರದ ಟೀಸರ್‌ ನಿರೀಕ್ಷೆಯಲ್ಲಿ ಸುದೀಪ್‌ ಫ್ಯಾನ್ಸ್‌

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್