ಚಿಂಚಲಿ ಗ್ರಾಮದ ಗ್ರಂಥಾಲಯ ಕಟ್ಟಡ ಅರ್ಧಂಬರ್ಧ
Team Udayavani, Nov 4, 2019, 2:38 PM IST
ಮುಳಗುಂದ: ಸಮೀಪದ ಚಿಂಚಲಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಹೊಸ ಕಟ್ಟಡ ಭಾಗ್ಯ ದೊರೆತಿದ್ದರೂ ಕಾಮಗಾರಿ ಅರ್ಧಕ್ಕೆ ನಿಂತಿದೆ. ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕಾಗಿ ಗ್ರಾಮ ವಿಕಾಸ ಯೋಜನೆಯಡಿ ಶೇ.12 ಅನುದಾನ ಮೀಸಲಿಟ್ಟು ಹೊಸ ಸುಸಜ್ಜಿತ ಕಟ್ಟಡ ನಿರ್ಮಿಸಬೇಕೆಂಬ ಯೋಜನೆ ಉದ್ದೇಶ ಈಡೇರದೇ ಅರ್ಧಕ್ಕೆ ನಿಂತ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಸ್ಥಳೀಯ ಗ್ರಾಮ ಪಂಚಾಯತಿ ಜಾಗೆಯಲ್ಲಿ ಸುಮಾರು 12 ಲಕ್ಷ ರೂ.ಗಳ ವೆಚ್ಚದಲ್ಲಿ ಕಟ್ಟಡ ಪ್ರಾರಂಭಿಸಲು ಯೋಜನೆ ರೂಪಿಸಿತ್ತಾದರೂ ಮೀಸಲಾದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿದ್ದರಿಂದ ಕಟ್ಟಡ ಅರ್ಧಂಬರ್ಧವಾಗಿದೆ. ಅಲ್ಲದೆ ಕಾಮಗಾರಿ ಕಳಪೆಯಾಗಿದ್ದರಿಂದ ಎಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. 2001ರಿಂದ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳ ಕಟ್ಟಡದ ಸಣ್ಣ ಕೋಣೆಯಲ್ಲೇ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರ ಇಲ್ಲಿಯೂ ನೆಲೆ ಕಾಣದೆ ಇಂದು ಗ್ರಾಮದ ಸಂಘವೊಂದರ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ 350 ಜನ ಓದುಗ ಸದಸ್ಯರಿದ್ದು, 3093 ಪುಸ್ತಕಗಳಿವೆ. ಮೂರು ಗ್ರಾಮಗಳ ನೂರಾರು ಯುವಕರು, ವಿದ್ಯಾರ್ಥಿಗಳು ಈ ಗ್ರಂಥಾಲಯದ ಸಹಾಯದಿಂದ ಸ್ವಾವಲಂಬಿಗಳಾಗಿದ್ದಾರೆ. ಉನ್ನತ ಹುದ್ದೆಗೇರಲು ಈ ಗ್ರಂಥಾಲಯ ಅನುಕೂಲವಾಗಿದೆ.
ಚಿಂಚಲಿ ಗ್ರಾಪಂ ವತಿಯಿಂದ ಗ್ರಂಥಾಲಯ ಕಟ್ಟಡಕ್ಕೆ ಜಾಗೆ ಮಂಜೂರಾಗಿದ್ದು, ಮೂರು ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ಸುಸಜ್ಜಿತ ಕಟ್ಟಡವಿಲ್ಲದೆ ಓದುಗರಿಗೆ ನಿರಾಶೆಯಾಗಿದೆ. – ಮಂಜುನಾಥ ಹೂಗಾರ, ಗ್ರಂಥಪಾಲಕ
ಚಿಂಚಲಿ ಗ್ರಂಥಾಲಯ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಗ್ರಾಪಂ ಸೇರಿದಂತೆ ಯಾರೊಬ್ಬರೂ ಗಮನ ಹರಿಸುತ್ತಿಲ್ಲ. ಕೂಡಲೇ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು. – ರಾಜು ನದಾಫ, ಓದು
-ಎಂ.ಎಂ. ನೀಲಗುಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ