ಪುಟ್ಟ ಮಳಿಗೆಯಲ್ಲೇ ವಾಚನಾಲಯ


Team Udayavani, Oct 29, 2019, 12:39 PM IST

gadaga-tdy-2

ರೋಣ: ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿರುವ, ಸುಮಾರು ನಾಲ್ಕುವರೆ ಸಾವಿರ ಜನಸಂಖ್ಯೆ ಹೊಂದಿರುವ ಹಿರೇಹಾಳ ಗ್ರಾಮದಲ್ಲಿನ ವಾಚನಾಲಯಕ್ಕೆ ಸ್ವಂತ ಕಟ್ಟಡ, ಸೂಕ್ತ ಆಸನ, ಸಮರ್ಪಕ ವಾತಾವರಣ, ಗಾಳಿ ಬೆಳಕು ಸೇರಿದಂತೆ ಮೂಲ ಸೌಕರ್ಯಗಳಿಲ್ಲದೇ ಓದುಗರಿಗೆ ಗ್ರಂಥಾಲಯ ಇದ್ದು ಇಲ್ಲದಂತಾಗಿದೆ.

1994ರಲ್ಲಿ ಈ ಗ್ರಂಥಾಲಯ ಸ್ಥಾಪನೆಯಾಗಿದೆ. ಅಲ್ಲಿಂದ ಇಲ್ಲಿಯವರೆ ಸ್ವಂತ ಕಟ್ಟಡ ನೀಡುವಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ. ಈ ಗ್ರಾಮಕ್ಕೆ ರಾಜ್ಯಹೆದ್ದಾರಿ ಹಾದು ಹೋಗುವುದರಿಂದ ಏಳೇಂಟು ಗ್ರಾಮಗಳಿಗೆ ಕೇಂದ್ರವಾಗಿದೆ. ಆದರೆ ಇಲ್ಲಿ ಒಂದು ಸುವ್ಯವಸ್ಥಿತವಾದ ಗ್ರಂಥಾಲಯವಿಲ್ಲದೆ ಇರುವುದು ಇಲ್ಲಿನ ಓದುಗರಿಗೆ ತೀವ್ರ ಹಿನ್ನಡೆಯಾಗಿದೆ. ಗ್ರಾಪಂನ 8 ಅಡಿ ಉದ್ದ 8 ಅಗಲದ ಸಣ್ಣ ಮಳಿಗೆಯಲ್ಲಿ ಗ್ರಂಥಾಲಯವಿದೆ. ಅಲ್ಲದೆ ಅದಕ್ಕೆ ನಾಮಫಲಕವಿಲ್ಲದೆ ಇರುವುದರಿಂದ ವಾಚನಾಲಯ ಇರುವುದೇ ಗೊತ್ತಾಗುತ್ತಿಲ್ಲ.

ಮುಂದೆಯೇ ಮೂತ್ರಾಲಯ-ಚರಂಡಿ: ಗ್ರಂಥಾಲಯದಲ್ಲಿ ಜಾಗದ ಜೊತೆಗೆ ಆಸನಗಳ ಕೊರತೆ ತುಂಬಾ ಇದ್ದು, ಇಲ್ಲಿಗೆ ಬರುವ ಎರಡೋ ಮೂರು ದಿನಪ್ರತಿಕೆಗಳನ್ನು ಓದಲು ಇಲ್ಲಿನ ಯುವಕರು, ಹಿರಿಯರು ಹೊರಗಡೆ ಕುಳಿತುಕೊಳ್ಳುತ್ತಾರೆ. ಆದರೆ ವಾಚನಾಲಯದ ಮುಂದೆಯೇ ಮೂತ್ರಾಲಯವಿರುವುದರಿಂದ ಗಬ್ಬು ನಾರುವ ವಾಸನೆಯಲ್ಲಿ ಪತ್ರಿಕೆ ಓದಬೇಕಾದ ಸ್ಥಿತಿ ಇಲ್ಲಿನ ಓದುಗರಿಗಿದೆ. ಅಲ್ಲದೆ ಈ ವಟಾರದ ಜನರು ಇರೋ ಬರೋ ಕಸವನ್ನು ತಂದು ಗ್ರಂಥಾಲಯದ ಮುಂದೆ ರಾಶಿ ಹಾಕಿದ್ದಾರೆ. ಇದರ ಪಕ್ಕದಲ್ಲಿ ಹರಿಯುವ ಚರಂಡಿಗೆ ಕಸಕಡ್ಡಿಗಳು ಬಿದ್ದು ಗಬ್ಬೆದ್ದು ನಾರುತ್ತಿವೆ. ಇದು ಓದುಗರಿಗೆ ಕಿರಿಕಿರಿಯಾಗಿದೆ. ಗ್ರಂಥಾಲಯದ ಗ್ರಂಥಪಾಲಕರು ತಡವಾಗಿ ಬರುವುದರಿಂದ ಓದುಗರಿಗೆ ತೊಂದರೆಯಾಗುತ್ತಿದೆ. ಪತ್ರಿಕೆ ಓದಲು ಬರುವವರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಬೆಳಗ್ಗೆ 8ಕ್ಕೆ ಗ್ರಂಥಾಲಯ ಪ್ರಾರಂಭವಾಗಬೇಕು ಎನ್ನುವುದು ಇಲ್ಲಿನ ಓದುಗರ ಅಭಿಪ್ರಾಯವಾಗಿದೆ.

ಕಳೆದ 25 ವರ್ಷಗಳಿಂದ ಹಿರೇಹಾಳ ಗ್ರಂಥಾಲಯದ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದೇನೆ. ಕಟ್ಟಡದ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ಲಿಖೀತ ಹಾಗೂ ಮೌಖೀಕ ಮನವಿ ಮಾಡಿಕೊಂಡಿದ್ದೇನೆ. ಇಲ್ಲಿಯವರೆಗೆ ಕಟ್ಟಡ ನೀಡಿಲ್ಲ. ಈಗಿರುವ ಜಾಗ ಚಿಕ್ಕದಾಗಿದೆ. ಇದರಲ್ಲಿ 2000 ಪುಸ್ತಕ ಇಟ್ಟುಕೊಳ್ಳಲು ಜಾಗ ಸಾಲುತ್ತಿಲ್ಲ. ಇದರಿದ ಸರ್ಕಾರ ಹಾಗೂ ಇಲಾಖೆ ಸ್ವಂತ ಅಥವಾ ವ್ಯವಸ್ಥಿತವಾದ ಖಾಸಗಿ ಜಾಗವನ್ನು ಬಾಡಿಗೆ ರೂಪದಲ್ಲಿ ನೀಡಿದರೆ ಓದುಗರಿಗೆ ಅನುಕೂಲಕರವಾದ ವಾತವರಣ ಕಲ್ಪಿಸಲು ಸಹಾಯವಾಗುತ್ತದೆ. ಜಿ.ವಿ. ಬಾಗೂರಮಠ, ಗ್ರಂಥಪಾಲಕ

 25 ವರ್ಷಗಳ ಹಿಂದೆ ಸ್ಥಾಪನೆಯಾದ ನಮ್ಮೂರ ಗ್ರಂಥಾಲಯಕ್ಕೆ ಒಂದು ಸ್ವಂತ ಕಟ್ಟಡವಿಲ್ಲ. ಇರುವ ಕಟ್ಟದಲ್ಲಿ ಕಿಡಕಿ, ಗಾಳಿ ಬೆಳಕಿಲ್ಲ. ಜೊತೆಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಗಳು ಇಲ್ಲದೆ ಇರುವುದರಿಂದ ಓದುಗರಿಗೆ ಇದ್ದು ಇಲ್ಲದಂತಾಗಿದೆ.-ಅಭಿಗಾಣಿಗೇರ,ಗ್ರಾಮದ ಯುವಕ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.