ಡಾ| ಗಿರಡ್ಡಿ ತವರಲ್ಲೇ ಗ್ರಂಥಾಲಯಕ್ಕಿಲ್ಲ ಸೂರು


Team Udayavani, Oct 23, 2019, 9:40 AM IST

gadaga-tdy-4

ನರೇಗಲ್ಲ: ಶ್ರೇಷ್ಠ ಸಾಹಿತಿ, ವಿಮರ್ಶಕ ಡಾ| ಗಿರಡ್ಡಿ ಗೋವಿಂದರಾಜ ತವರು ಅಬ್ಬಿಗೇರಿ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಪ್ರಾರಂಭವಾಗಿ 15 ವರ್ಷ ಕಳೆದರೂ ಶಾಶ್ವತ ಸೂರಿಲ್ಲ. ಮೂಲ ಸೌಕರ್ಯಗಳ ಬಗ್ಗೆ ಯಾರೊಬ್ಬರೂ ಚಕಾರ ಎತ್ತುವಂತಿಲ್ಲ. ಹೀಗಾಗಿ ಇದು ಒಂದು ರೀತಿಯ ಅನಾಥ ಗ್ರಂಥಾಲಯವೆನಿಸಿದೆ.

ಸಾರ್ವಜನಿಕ ಗ್ರಂಥಾಲಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾಹಿತ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಮಾನ್ಯ ಜ್ಞಾನದ ಆಲಯ. ಅಪಾರ ಓದುಗರು ಗ್ರಂಥಾಲಯಕ್ಕೆ ಬರುತ್ತಿದ್ದರೂ ಕುಳಿತು ಓದಲು ಸ್ಥಳವಿಲ್ಲ. ಗ್ರಾ.ಪಂ ವಾಣಿಜ್ಯ ಕಟ್ಟಡದ ನೆಲ ಅಂತಸ್ಸಿನಲ್ಲಿ ಈ ಗ್ರಂಥಾಲಯ ನಡೆಯುತ್ತಿದೆ. ಸೂಕ್ತ ಗಾಳಿ, ಬೆಳಕಿನ ಕೊರತೆ ಎದುರಿಸುತ್ತಿದೆ. ಚಿಕ್ಕ ಅಂಗಡಿಯಂತಹ ಒಂದು ಮಳಿಗೆಯಲ್ಲಿ ಗ್ರಂಥಾಲಯವಿದ್ದು, ಬರುವ ಅಪಾರ ಸಂಖ್ಯೆಯ ಓದುಗರಿಗೆ ಈ ವಿಸ್ತೀರ್ಣ ಯಾವುದಕ್ಕೂ ಸಾಲುತ್ತಿಲ್ಲ. ಒಳಗಡೆ ಕುಳಿತರೆ ಉಸಿರುಗಟ್ಟುವ ವಾತಾವರಣ. ಜಾಗವಿಲ್ಲದಕ್ಕೆ ಹೊರಗೆ ನಿಂತು ಓದುವ ಸ್ಥಿತಿ ನಿರ್ಮಾಣವಾಗಿದೆ.

ಮೂಲ ಸೌಕರ್ಯವಿಲ್ಲ : ಗ್ರಾಮದಲ್ಲಿ ಸುಮಾರು 15 ಸಾವಿರಕ್ಕೂ ಅ ಧಿಕ ಜನಸಂಖ್ಯೆ ಹೊಂದಿದೆ. ಅಲ್ಲದೇ ಶ್ರೇಷ್ಠ ಸಾಹಿತಿ ಡಾ| ಗಿರಡ್ಡಿ ಗೋವಿಂದರಾಜ, ಡಿ.ಎ. ಉಪಾಧ್ಯ, ಸೋಮಶೇಖರ ಇಮ್ರಾಪುರ, ಕೆ.ಬಿ. ತಳವಗೇರಿ ಸೇರಿದಂತೆ ಮಹಾನ್‌ ಸಾಹಿತಿಗಳು ಇಲ್ಲಿ ಹುಟ್ಟಿ ಬೆಳೆದಿದ್ದಾರೆ. ಅಷ್ಟೇ ಅಲ್ಲ ಶಾಸನ, ಶಿಲ್ಪ ಕಲೆ, ಪುರಾತನ ದೇವಸ್ಥಾನ, ಕೆಂಪುಕೆರೆ ಗ್ರಾಮದಲ್ಲಿ ಪ್ರಸಿದ್ಧವಾಗಿವೆ. ಗ್ರಂಥಾಲಯಕ್ಕೆ ಬರುವವರಿಗೆ ಕನಿಷ್ಠ ಕುಡಿಯುವ ನೀರಿನ ಸೌಕರ್ಯವಿಲ್ಲ. ಶೌಚಾಲಯವಿಲ್ಲ. ಕಿರಿದಾದ ಸ್ಥಳದಲ್ಲಿ ಗ್ರಂಥಾಲಯ ಇರುವುದರಿಂದ ಓದಲು ಕಿರಿಕಿರಿಯಾಗುತ್ತಿದೆ ಎನ್ನುತ್ತಾರೆ ಓದುಗರು.

ನಾಮಫಲಕವಿಲ್ಲ: ಇಲ್ಲಿ ಗ್ರಂಥಾಲಯವಿದೆ ಎಂದು ತಿಳಿಸುವ ಕನಿಷ್ಠ ನಾಮಫಲಕವೂ ಇಲ್ಲ. ಇಲ್ಲಿ 164 ಮಂದಿ ಸದಸ್ಯರು ನೊಂದಾಯಿಸಿಕೊಂಡಿದ್ದು, ನಿತ್ಯ ಸುಮಾರು 500ಕ್ಕೂ ಹೆಚ್ಚು ಮಂದಿ ಗ್ರಂಥಾಯಲಕ್ಕೆ ಭೇಟಿ ನೀಡುತ್ತಾರೆ. 3 ದಿನಪತ್ರಿಕೆಗಳು ಮಾತ್ರ ಬರುತ್ತಿದ್ದು, ಇದಕ್ಕೆ ಸರ್ಕಾರದಿಂದ ತಿಂಗಳಿಗೆ 400 ರೂ. ಮಾತ್ರ ಅನುದಾನ. ವಾರಪತ್ರಿಕೆ, ಮಾಸಿಕ ಪತ್ರಿಕೆಗಳು ಲಭ್ಯವಿಲ್ಲ.

3 ಸಾವಿರಕ್ಕೂ ಹೆಚ್ಚು ಪುಸ್ತಕ ಸಂಗ್ರಹ: 2004ರಲ್ಲಿ ಪ್ರಾರಂಭವಾದ ಈ ಗ್ರಂಥಾಲಯದಲ್ಲಿ ಸುಮಾರು ಒಂದು ಸಾವಿರ ಪುಸ್ತಕಗಳಿದ್ದವು. ನಂತರದಲ್ಲಿ ಇಲಾಖೆಯಿಂದ ಆಗೊಮ್ಮೆ-ಈಗೊಮ್ಮೆ ಬರುವ ಪುಸ್ತಕಗಳು ಸೇರಿ 3 ಸಾವಿರಕ್ಕೂ ಹೆಚ್ಚು ಪುಸ್ತಕ ಸಂಗ್ರಹವಿದೆ. ಅವುಗಳನ್ನು ಎಲ್ಲಿಡಬೇಕು? ಎಂಬುದೇ ಸಿಬ್ಬಂದಿಗೆ ಸವಾಲಾಗಿದೆ. ಗ್ರಂಥಾಲಯವನ್ನು ಆಧುನೀಕರಣ ಮತ್ತು ಡಿಜಿಟಲೀಕರಣಗೊಳಿಸುವ ಮಾತು ದೂರ. ಹಳೆಯ ಕಾಲದ ಮಾದರಿಯಲ್ಲಿ ಇರುವ ಪುಸ್ತಕಗಳನ್ನು ಓದುಗರಿಗೆ ನೀಡಲಾಗುತ್ತಿದೆ.

ಸಾಹಿತಿ ಅಳಿದರೂ ಸಾಹಿತ್ಯ ಉಳಿಯುವುದು. ಗ್ರಂಥಾಲಯಗಳೇ ಜ್ಞಾನಾರ್ಜನೆ ಸಾಗರ. ಓದುಗರಿಲ್ಲದೇ ಲೇಖಕರು ಇರಲು ಅಸಾಧ್ಯ. ಜೀವನ ಕಟ್ಟುವಲ್ಲಿ ಗ್ರಂಥಾಲಯ ಅವಶ್ಯ. ಬದುಕು ಕಟ್ಟಲು ಅನೇಕ ಕಾದಂಬರಿ ಓದಬೇಕು. ಅದಕ್ಕಾಗಿ ಗ್ರಂಥಾಲಯ ಅಭಿವೃದ್ಧಿ ಅನಿವಾರ್ಯವಾಗಿದೆ.ಸೋಮಣ್ಣ ಹರ್ಲಾಪುರ, ಹಿರಿಯ ಓದುಗ

 

-ಸಿಕಂದರ ಅಲಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.