ಬದುಕೇ ಕೊಚ್ಚಿಹೋಯ್ತು

•ಮಲಪ್ರಭಾ ನದಿ ಎರಡೂ ಸೇತುವೆಗಳ ಮಾರ್ಗ ಕಡಿತ •ಜಲಾವೃತಗೊಂಡಿದ್ದ ಕೊಣ್ಣೂರ ಪ್ರವಾಹ ಇಳಿಮುಖ

Team Udayavani, Aug 11, 2019, 12:03 PM IST

gadaga-tdy-1

ನರಗುಂದ: ಮಲಪ್ರಭಾ ಪ್ರವಾಹಕ್ಕೆ ಜಲಾವೃತಗೊಂಡ ಗಡಿಗ್ರಾಮ ಲಖಮಾಪುರ ಮುಖ್ಯರಸ್ತೆಯೇ ಕೊಚ್ಚಿಕೊಂಡು ಹೋಗಿದೆ.

ನರಗುಂದ: ಗದಗ ಮತ್ತು ಬೆಳಗಾವಿ ಜಿಲ್ಲೆಗಳ ಗಡಿಭಾಗವಾಗಿರುವ ತಾಲೂಕಿನ ಲಖಮಾಪುರ ಗ್ರಾಮದ ಗೋಳು ಇನ್ನೂ ತೀರದಾಗಿದೆ. ಮಲಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತಗೊಂಡು ನಡುಗಡ್ಡೆಯಾಗಿರುವ ಈ ಗ್ರಾಮದ ಏಕೈಕ ಮುಖ್ಯ ರಸ್ತೆಯೂ ಕೊಚ್ಚಿಕೊಂಡು ಹೋದ ಪರಿಣಾಮ ಪ್ರವಾಹ ತೀರಿದರೂ ಹೊರಪ್ರಪಂಚಕ್ಕೆ ಇದು ಇನ್ನೂ ದೂರವಾಗಿದೆ.

ನರಗುಂದ ಕೇಂದ್ರ ಸ್ಥಾನದಿಂದ 25 ಕಿಮೀ ದೂರದ ಲಖಮಾಪುರ ಮಲಪ್ರಭಾ ನದಿ ಪ್ರವಾಹಕ್ಕೆ ಪ್ರಥಮವಾಗಿ ಧಕ್ಕೆಯಾಗುವ ಗ್ರಾಮ. ನದಿಯಿಂದ ಕೇವಲ ಅರ್ಧ ಕಿಮೀಗೂ ಕಡಿಮೆ ಅಂತರದಲ್ಲಿರುವ ಗ್ರಾಮ ಮೂರು ದಿನಗಳಿಂದ ಸಂಪೂರ್ಣ ಜಲಾವೃತ ಗೊಂಡಿದೆ. ಗ್ರಾಮದ ಮುಂಭಾಗ ಸೇತುವೆ ಎರಡೂ ಕಡೆಗೆ 100 ಮೀಟರ್‌ಗೂ ಹೆಚ್ಚು ರಸ್ತೆ ಕೊಚ್ಚಿಹೋಗಿದೆ.

ಪ್ರವಾಹ ಪೂರ್ವವೇ ಇಲ್ಲಿನ ಎಲ್ಲ ಗ್ರಾಮಸ್ಥರನ್ನು ಸ್ಥಳಾಂತರ ಮಾಡಿದ್ದರಿಂದ ಜಾನುವಾರು ಸಹಿತ ಒಂದು ನರಪಿಳ್ಳೆಯೂ ಗ್ರಾಮದಲ್ಲಿ ಉಳಿದಿಲ್ಲ. ಪ್ರವಾಹ ತೀರಿದ ಬಳಿಕ ವಾಹನ ಮಾತ್ರವಲ್ಲ ಜನರು ನಡೆದುಕೊಂಡು ಹೋಗಲೂ ಈ ಗ್ರಾಮಕ್ಕೆ ಅವಕಾಶ ಇಲ್ಲದಂತಾಗಿದ್ದು, ಗ್ರಾಮಸ್ಥರನ್ನು ಚಿಂತೆಗೀಡಾಗಿಸಿದೆ.

ಗ್ರಾಮದಲ್ಲಿ 1100 ಜನಸಂಖ್ಯೆ ಹೊಂದಿದ್ದು, 250 ಮನೆಗಳಿವೆ. ಗ್ರಾಮ ವ್ಯಾಪ್ತಿಗೆ 208 ಎಕರೆ ಕೃಷಿ ಭೂಮಿಯಿದ್ದು, ಕಬ್ಬು, ಗೋವಿನಜೋಳ, ಹತ್ತಿ, ಈರುಳ್ಳಿ, ಕಾಯಿಪಲ್ಯೆ ಬೆಳೆ ಸಂಪೂರ್ಣ ಜಲಾವೃತಗೊಂಡಿವೆ.

ಸ್ಥಳಾಂತರ ಬೇಡಿಕೆ: ಹಿಂದಿನಿಂದಲೂ ಗ್ರಾಮ ಸ್ಥಳಾಂತರಕ್ಕೆ ವಿರೋಧಿಸಿದ್ದ ಲಖಮಾಪುರ ಗ್ರಾಮಸ್ಥರು ಈ ಬಾರಿಯ ಪ್ರವಾಹ ಭೀಕರತೆಗೆ ಸ್ಥಳಾಂತರವೇ ಸೂಕ್ತವೆಂಬ ನಿರ್ಧಾರಕ್ಕೆ ಬಂದಿದ್ದಾರೆ. ಗಡಿ ಭಾಗದಲ್ಲಿದ್ದರೂ ನರಗುಂದ ತಾಲೂಕು ವ್ಯಾಪ್ತಿಗೆ ಒಳಪಡುವ ಇಚ್ಛೆ ಹೊಂದಿದ ಗ್ರಾಮಸ್ಥರು ಕೂಡಲೇ ನಮ್ಮ ಗ್ರಾಮ ಸ್ಥಳಾಂತರ ಮಾಡಿ ನಮ್ಮ ಬದುಕು ಕಟ್ಟಿಕೊಡಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

 

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.