ಮತದಾರರ ಚೀಟಿಗೆ ಆಧಾರ್‌ ಲಿಂಕ್‌ ಮಾಡಿ

ಆಧಾರ್‌ ಲಿಂಕ್‌ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಸಿದ್ಧತೆಗೆ ಸಹಕಾರಿಯಾಗಲಿದೆ

Team Udayavani, Aug 18, 2022, 6:25 PM IST

ಮತದಾರರ ಚೀಟಿಗೆ ಆಧಾರ್‌ ಲಿಂಕ್‌ ಮಾಡಿ

ಗದಗ: ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ ಕಾರ್ಡ್ ನೊಂದಿಗೆ ಜೋಡಣೆ ಮಾಡುವುದನ್ನು ಸರಳೀಕರಣಗೊಳಿಸಿದೆ. ಗೂಗಲ್‌ ಪ್ಲೇ ಸ್ಟೋರ್‌ ನಿಂದ ವೋಟರ್‌ ಹೆಲ್ಪ್ ಲೈನ್ ಮೊಬೈಲ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡು ಸರಳವಾಗಿ ಆಧಾರ್‌ ಲಿಂಕ್‌ ಮಾಡಿಕೊಳ್ಳಬೇಕು.

ಅಲ್ಲದೇ, ಜನಸಾಮಾನ್ಯರಿಗೂ ಈ ಕುರಿತು ತಿಳಿವಳಿಕೆ ನೀಡಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಸುಶೀಲಾ ಬಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವೀಪ್‌ ನೋಡಲ್‌ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರಲ್ಲಿ ಜಾಗೃತಿ ಮೂಡಿಸಲು ಇಲಾಖಾವಾರು ನೇಮಿಸಲಾದ ನೋಡಲ್‌ ಅಧಿಕಾರಿಗಳು ಮೊದಲು ತಮ್ಮ ಇಲಾಖಾ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿ ಆಧಾರ್‌ ಲಿಂಕ್‌ ಮಾಡಬೇಕು. ನಂತರ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಬೇಕು ಎಂದು ಹೇಳಿದರು.

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್‌ ಲಿಂಕ್‌ ಮಾಡುವುದರಿಂದ ನಕಲಿ ಮತದಾರರನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಡಬಹುದು. ಮತದಾರರ ಪಟ್ಟಿ ಪರಿಷ್ಕರಣೆಗೆ ಈ ಆಧಾರ್‌ ಲಿಂಕ್‌ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಸಿದ್ಧತೆಗೆ ಸಹಕಾರಿಯಾಗಲಿದೆ. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗದ ಸೂಚನೆಯಂತೆ ಆದ್ಯತೆ ಮೇರೆಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆ ನಿರ್ವಹಿಸುವಂತೆ ಸೂಚಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಆಧಾರ್‌ ಜೋಡಣೆ ಕಾರ್ಯವನ್ನು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಮಾಡುವಂತೆ ತಿಳಿಸಿದರು.

ಚುನಾವಣಾ ಆಯೋಗ ಮತದಾರ ಪಟ್ಟಿ ಪರಿಷ್ಕರಣೆಗೆ ಅರ್ಹತಾ ದಿನಾಂಕವನ್ನು ವರ್ಷದಲ್ಲಿ ನಾಲ್ಕು ಬಾರಿ ಪರಿಗಣಿಸಲಿದೆ. ಅಲ್ಲದೇ, ನೋಂದಣಿ, ಪರಿಷ್ಕರಣೆಗೆ
ಕೆಲವು ನಮೂನೆಗಳನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಿದೆ. ಅವುಗಳನ್ನು ಪಾಲಿಸುವ ಮೂಲಕ ಶುದ್ಧ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಬೇಕು ಎಂದರು.ಅರ್ಹ 18 ವರ್ಷ ತುಂಬಿದ ಹೊಸ ಯುವ ಮತದಾರರ ನೋಂದಣಿ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಅಂತಿಮಗೊಳಿಸಬೇಕು.

ಮರಣ ಹೊಂದಿದವರು, ಬೇರೆಡೆ ಸ್ಥಳಾಂತರಗೊಂಡವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ, ಅರಣ್ಯವಾಸಿಗಳು, ದಿವ್ಯಾಂಗರನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡಬೇಕೆಂದು ಹೇಳಿದರು. ಮೊಬೈಲ್‌ನ ಗೂಗಲ್‌ ಆ್ಯಪ್‌ ಸ್ಟೋರ್‌ ನಲ್ಲಿರುವ ವೋಟರ್‌ ಹೆಲ್ಪ್ ಲೈನ್ ಆ್ಯಪ್‌ ಮೂಲಕ 6 ಬಿ ಫಾರ್ಮ್ನಲ್ಲಿ ಚುನಾವಣಾ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಗರುಡ ಆ್ಯಪ್‌ನಲ್ಲಿ ಕಾರ್ಯನಿರ್ವಹಿಸಬೇಕು. ನಿಗದಿಪಡಿಸಿದ ಅವಧಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯಬೇಕೆಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಾಗೀಶ್‌, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಾಂಬ್ಳೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಸರ್ಕಾರಿ ಪಾಲಿಟೆಕ್ನಿಕ್‌ ಪ್ರಾಚಾರ್ಯ ಭರಮಪ್ಪ, ಡಾ|ಜಿ. ಎಸ್‌. ಪಲ್ಲೇದ, ಮುಖ್ಯ ತರಬೇತುದಾರ ಬಸವರಾಜ ಗಿರಿತಿಮ್ಮಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.