ಧರ್ಮದ ಹಾದಿಯಿಂದ ಬದುಕು ಹಸನು-ಜಗದ್ಗುರು ಶಿವಾಚಾರ್ಯರು


Team Udayavani, Feb 6, 2024, 4:47 PM IST

ಧರ್ಮದ ಹಾದಿಯಿಂದ ಬದುಕು ಹಸನು-ಜಗದ್ಗುರು ಶಿವಾಚಾರ್ಯರು

ಉದಯವಾಣಿ ಸಮಾಚಾರ
ಬಂಕಾಪುರ: ಮನುಷ್ಯನ ನಡೆ, ನುಡಿ ಶುದ್ಧವಾಗಿದ್ದಾಗ, ಅಧ್ಯಾತ್ಮವನ್ನು ಮೈಗೂಡಿಸಿಕೊಂಡು ಧರ್ಮದ ದಾರಿಯಲ್ಲಿ ನಡೆಯುವವನ ಬದುಕು ಹಸನಾಗಲು ಸಾಧ್ಯವಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಅರಳೆಲೆಮಠದ ಲಿಂ. ರುದ್ರಮುನಿ ಶಿವಾಚಾರ್ಯರ 50ನೇ ಸುವರ್ಣ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಧರ್ಮ ಬೋಧನೆ ಮಾಡಿದ ಶ್ರೀಗಳು, ಮನುಷ್ಯ ಭಕ್ತಿಯ ಮಾರ್ಗ ಕಂಡುಕೊಂಡು, ಧರ್ಮದ ದಾರಿ, ಶಾಸ್ತ್ರದ ನೆರಳಿನಲ್ಲಿ ನಡೆದಾಗ ಮಾತ್ರ ಎಲ್ಲ ವೈಭೋಗಗಳು ಅರಸಿ ಬರಲಿವೆ. ಇತಿಹಾಸ ಈ ಹಿಂದೆ ಸುಖವಿತ್ತು ಎಂದು ಹೇಳಿದರೆ, ವಿಜ್ಞಾನ ಮುಂದೆ ಸುಖವಿದೆ ಎಂದು ಹೇಳುತ್ತದೆ. ಧರ್ಮ, ಸತ್ಯ, ಪ್ರಾಮಾಣಿಕತೆಯಿಂದ ನಡೆಯುವಾತ ನಿತ್ಯ, ನಿರಂತರ ಸುಖವಾಗಿರಲು ಸಾಧ್ಯ. ಆ ನಿಟ್ಟಿನಲ್ಲಿ ಸಂತ, ಶರಣ, ಮಠಾಧೀಶರ ಹಿತೋಪದೇಶವನ್ನು ಮೈಗೂಡಿಸಿಕೋಳ್ಳುವುದು ಮುಖ್ಯವಾಗಿದೆ ಎಂದು ಹೇಳಿದರು.

ಆನಂದಯ್ಯ ಗಡ್ಡದದೇವರಮಠ ಮಾತನಾಡಿ, ಸಮಾಜದ ಸವಾಂಗೀಣ ಅಭಿವೃದ್ಧಿಗಾಗಿ ರಾಜಕಾರಣಿಗಳ ನಡೆ ದಿಟ್ಟತನದಿಂದ ಕೂಡಿದಾಗ ಸಮಾಜ ಸುಧಾರಣೆಯಾಗಲು ಸಾಧ್ಯವಿದೆ. ಕೃಷಿ ಕಾಯಕ ಯೋಗಿಗಳಾಗಿ, ಲಿಂಗೈಕ್ಯ ರುದ್ರಮುನೀಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಭಕ್ತ ಸಮೂಹವನ್ನು ಕೊಂಡೊಯ್ಯುತ್ತಿರುವ ಅರಳೆಲೆಮಠದ ರೇವಣಸಿದ್ದೇಶ್ವರ ಶ್ರೀಗಳವರ
ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಮಾಜಿ ಸಂಸದ ಮಂಜುನಾಥ ಕುನ್ನೂರ ಮಾತನಾಡಿ, ಅರಳೆಲೆಮಠದ ಅಭಿವೃದ್ಧಿಯ ಪರ್ವ ಮಠದ ಪೀಠಾಧಿಪತಿ ರೇವಣಸಿದ್ದೇಶ್ವರ ಶ್ರೀಗಳಿಂದ ನಿರಂತರವಾಗಿ ಮುಂದುವರಿದುಕೊಂಡು ಬರುತ್ತಿದೆ ಎಂದು ಹೇಳಿದರು.

ಲೇಖಕ ವೀರೇಶ ಪುರಾಣಿಕಮಠ ರಚಿಸಿದ “ಮನದ ಮನೆಯ ಹೂದಾನಿ’ ಪುಸ್ತಕ ಬಿಡುಗಡೆಗೊಳಿಸಲಾಯಿತು. ಅರಳೆಲೆಮಠದ ಶ್ರೀ
ರೇವಣಸಿದ್ದೇಶ್ವರ ಸ್ವಾಮೀಜಿ ಸಭೆಯ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು.

ಮುಕ್ತಿಮಂದಿದ ವಿಮಲ ರೇಣುಕ ವೀರಮುಕ್ತಿಮುನಿ ಸ್ವಾಮೀಜಿ, ಸವಣೂರಿನ ಚನ್ನಬಸವ ಸ್ವಾಮೀಜಿ, ಸೂಡಿ ಬಸವೇಶ್ವರ ಸ್ವಾಮೀಜಿ, ಮಳಲಿಮಠದ ಡಾ| ನಾಗಭೂ‚ಣ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಶಿವಯೋಗಿ ಸ್ವಾಮೀಜಿ, ಸಂಗನಬಸವ ಸ್ವಾಮೀಜಿ, ಹಾವೇರಿ ನಗರಸಭಾಧ್ಯಕ್ಷ ಸಂಜೀವ ನೀರಲಗಿ, ಡಾ| ಆರ್‌.ಎಸ್‌. ಅರಳೆಲೆಮಠ, ಯಾಸೀರಖಾನ್‌ ಪಠಾಣ, ವಿಶ್ವನಾಥ ಹಿರೇಗೌಡ್ರ, ಲೇಖಕ ವೀರೇಶ ಪುರಾಣಿಕಮಠ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.