ಲಕ್ಷ್ಮೇಶ್ವರದಲ್ಲಿ ಲಾಕಪ್ ಡೆತ್? ಠಾಣೆಗೆ ಬೆಂಕಿ;ನಿಷೇಧಾಜ್ಞೆ ಜಾರಿ
Team Udayavani, Feb 5, 2017, 9:19 AM IST
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನೊಬ್ಬನ ಲಾಕಪ್ ಡೆತ್ ಆಗಿರುವ ಆರೋಪ ಕೇಳಿ ಬಂದಿದ್ದು ಇದೀಗ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಬೆಟೂರ ಗ್ರಾಮದ ಶಿವಪ್ಪ ಗೂಳಿ(21) ಎಂಬ ಲಾರಿ ಚಾಲಕನನ್ನು ಅಕ್ರಮ ಮರಳು ಸಾಗಾಣಿಕೆ ಆರೋಪದಲ್ಲಿ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದು, ಆ ಬಳಿಕ ಪೊಲೀಸರ ಥಳಿತದಿಂದ ತೀವ್ರವಾಗಿ ಗಾಯಗೊಂಡು ಠಾಣೆಯಲ್ಲೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.
ಭಾನುವಾರ ಬೆಳಗ್ಗೆ ಲಕ್ಷ್ಮೇಶ್ವರ ಠಾಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ರಿಕ್ತ ಜನರು ಠಾಣೆಯ ಮೇಲೆಯೆ ದಾಳಿ ನಡೆಸಿದ್ದು ಪೊಲೀಸ್ ಠಾಣೆ,ಜೀಪ್ಗೆ ಬೆಂಕಿ ಹಚ್ಚಿದ್ದಾರೆ. ಠಾಣೆಯ ಪೀಠೊಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ಠಾಣೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.
ಸೂಕ್ಷ್ಮ ಪಟ್ಟಣದಲ್ಲಿ ಈಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಎಸ್ಪಿ ಕೆ.ಸಂತೋಷ್ ಬಾಬು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಾರಣರಾದ ಪೊಲೀಸ್ ಬರಲಿ
ಹತ್ಯೆಗೆ ಕಾರಣರಾದ ಪೊಲೀಸ್ ಪೇದೆ ಮತ್ತು ಜೀಪ್ ಚಾಲಕ ಸ್ಥಳಕ್ಕೆ ಬರುವವರೆಗೆ ಶವವನ್ನು ತೆಗೆಯುವುದಿಲ್ಲ ಎಂದು ಸಾವಿರಾರು ಉದ್ರಿಕ್ತರು ಪಟ್ಟು ಹಿಡಿದಿದ್ದಾರೆ. ಪೊಲೀಸ್ ಬಂದರೆ ಆತನನ್ನೂ ಕೊಂದು ಹಾಕಬೇಕು ಎಂದು ಮೃತನ ಸಹೋದರಿ ಮಾದ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ