ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಕಮಲ ಕಿಲ ಕಿಲ

ನಗರಸಭೆ ಇತಿಹಾಸದಲ್ಲೇ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿಯಲಿದೆ.

Team Udayavani, Dec 31, 2021, 6:12 PM IST

ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಕಮಲ ಕಿಲ ಕಿಲ

ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ಈ ಮೂಲಕ ನಗರಸಭೆ ಇತಿಹಾಸದಲ್ಲೇ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿಯಲಿದೆ.

35 ವಾರ್ಡ್‌ಗಳ ಪೈಕಿ 18 ಸ್ಥಾನಗಳನ್ನು ಬಾಚಿಕೊಳ್ಳುವ ಮೂಲಕ ಬಿಜೆಪಿ ಸರಳ ಬಹುಮತ ಪಡೆದಿದ್ದು, ಕಾಂಗ್ರೆಸ್‌ 15 ಹಾಗೂ ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಅವ ಧಿಯಲ್ಲಿ ಕಾಂಗ್ರೆಸ್‌ 20, ಬಿಜೆಪಿ 5, ಬಿಎಸ್‌ಆರ್‌ 6, ಕೆಜೆಪಿ 1 ಹಾಗೂ ಇಬ್ಬರು ಪಕ್ಷೇತರರಿದ್ದರು. ಬಹುಮತ ಹೊಂದಿದ್ದ ಕಾಂಗ್ರೆಸ್‌ ಅಧಿಕಾರ ಹಿಡಿದಿತ್ತು. ಆದರೆ, ಬದಲಾದ ಪರಿಸ್ಥಿತಿ ಹಾಗೂ ಆಡಳಿತ ವಿರೋಧಿ ಅಲೆಯಿಂದಾಗಿ ನಗರಸಭೆಯಲ್ಲಿ ಮತ್ತೂಮ್ಮೆ ಅಧಿಕಾರ
ಹಿಡಿಯುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ.

2 ವರ್ಷ ಹಿಂದೆಯೇ ನಗರಸಭೆ ಅವಧಿ ಪೂರ್ಣ ಗೊಂಡಿತ್ತು. ಆದರೆ, ಮೀಸಲಾತಿ ಮತ್ತು ವಾರ್ಡ್‌ ವಿಂಗಡಣೆ ಕಾರಣಗಳಿಂದಾಗಿ ಕೆಲವರು ಕೋರ್ಟ್‌ ಮೊರೆ ಹೋಗಿದ್ದರಿಂದ ಚುನಾವಣೆ ವಿಳಂಬವಾಗಿತ್ತು. ಕೆಲವರು ತಾವು ಬಯಸಿದ ಪಕ್ಷದಿಂದ ಟಿಕೆಟ್‌ ಸಿಗದ್ದರಿಂದ ಸ್ವತಂತವಾಗಿ ಸ್ಪ ರ್ಧಿಸಿದ್ದರಿಂದ ಚುನಾವಣಾ ಫಲಿತಾಂಶದ ಮೇಲೆ ನೇರ ಪ್ರಭಾವ ಬೀರಿತು. ಕೆಲ ವಾರ್ಡ್‌ಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳ ಗೆಲುವಿನ ಹಾದಿ ಸುಗಮವಾಗಿದ್ದರೂ, ಪಕ್ಷೇತರರು
ಅಡ್ಡಿಯಾದರು. ಇದರಿಂದ ಕೆಲವರಿಗೆ ನಿರೀಕ್ಷಿಸಿದಷ್ಟು ಅಂತರ ದೊರೆಯದಿದ್ದರೆ, ಇನ್ನೂ ಕೆಲವರಿಗೆ ಸೋಲಿನ ಕಹಿ ನೀಡಿತು.

ಅರಳಿದ ಕಮಲ: ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆಯೂ ಎರಡು ಕಡೆ ಪಕ್ಷೇತರರು ಗೆಲುವಿನ ನಗೆ ಬೀರಿದರು. ಅಲ್ಲದೇ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿದ್ದ ವಾರ್ಡ್‌ಗಳ ಪೈಕಿ 7 ವಾರ್ಡ್‌ಗಳಲ್ಲಿ ಕಮಲ ಅರಳಿದೆ. 11, 30, 31, 32, 33, 34 ಹಾಗೂ 35ನೇ ವಾರ್ಡ್‌ ನಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಚೆಲ್ಲಿದ್ದಾರೆ. ಅದರಂತೆ ಬಿಜೆಪಿ ಪ್ರಾಬಲ್ಯ ಹೊಂದಿದ್ದ 6, 8, 10ನೇ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ವಿಜಯ ಪತಾಕೆ ಹಾರಿಸಿದ್ದು, 21ನೇ ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಗೆ ಗೆಲುವಿನ ಮಾಲೆ ಸಂದಿದೆ. ಇನ್ನುಳಿದಂತೆ 1, 2, 3, 4, 5 ಸೇರಿದಂತೆ ಇನ್ನಿತರೆ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ತನ್ನ ಬಿಗಿಪಟ್ಟು ಮುಂದುವರಿಸಿದೆ.

ಸಂಘಟಿತ ಹೋರಾಟ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ನೇತƒತ್ವದಲ್ಲಿ ಬಿಜೆಪಿ ನಾಯಕರು ಸಂಘಟಿತ ಹೋರಾಟ ನಡೆಸಿದ್ದರು. ಈ ಬಾರಿ ನಗರಸಭೆ ವಶಕ್ಕೆ ಪಡೆಯುವುದು ಶತಸಿದ್ಧ ಎಂಬ ಸಂದೇಶ ಸಾರಿದ್ದ ಸಚಿವರು, ಅದಕ್ಕಾಗಿ ರಣತಂತ್ರ ರೂಪಿಸಿದ್ದರು. ಅಭ್ಯರ್ಥಿಗಳ ಆಯ್ಕೆ, ಬಂಡಾಯ ಅಭ್ಯರ್ಥಿಗಳ ಮನವೊಲಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಮೇಲಾಗಿ ಚುನಾವಣಾ ದಿನಾಂಕ ಘೋಷಣೆಯಿಂದ ಮತದಾನ ಮುಗಿಯುವವರೆಗೆ ಬಿಜೆಪಿ ಯುವ ಮುಖಂಡ ಅನಿಲ್‌ ಮೆಣಸಿನಕಾಯಿ ಅಬ್ಬರದ ಪ್ರಚಾರ ನಡೆಸಿದ್ದರು. ಅವರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಕೂಡಾ ಸಾಥ್‌ ನೀಡಿದ್ದರಿಂದ ಹಲವು ವಾರ್ಡ್‌ಗಳಲ್ಲಿ ಫಲಿಸಿದೆ. ಇನ್ನೂ ಚುನಾವಣೆಯಲ್ಲಿ ಪ್ರಚಾರ, ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್‌ ಸಾಕಷ್ಟು ಪರಿಪಕ್ವತೆ ತೋರಿದ್ದರೂ, ಹಲವು ವಾರ್ಡ್‌ಗಳಲ್ಲಿ ಗೆಲುವು ದೊರೆಯಲಿಲ್ಲ.

ಫಲಿತಾಂಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳು, ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರು, ಕಾರ್ಯಕರ್ತರು ಶ್ರೀ ಗುರು ಬಸವ ಆಂಗ್ಲಮಾಧ್ಯಮ ಶಾಲೆ ಎದುರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮ್ಮ ಅಭ್ಯರ್ಥಿ ಗೆಲುವು ಘೋಷಣೆಯಾಗುತ್ತಿದ್ದಂತೆ ಪರಸ್ಪರ ಗುಲಾಲು ಎರಚಿಕೊಂಡು, ಕುಣಿದು ಕುಪ್ಪಳಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.