ಗೃಹಸ್ಥಾಶ್ರಮದಲ್ಲಿ ಪ್ರೀತಿ- ವಿಶ್ವಾಸವೇ ಪ್ರಮುಖ

ವಿರಕ್ತಮಠ ಕರ್ತೃ ಚನ್ನಬಸವ ಶಿವಯೋಗಿಗಳ ಸ್ಮರಣೋತ್ಸವ

Team Udayavani, May 3, 2022, 10:18 AM IST

5

ನರಗುಂದ: ಗೃಹಸ್ಥಾಶ್ರಮ ಒಂದು ಪವಿತ್ರವಾದ ಸಂಬಂಧ. ಇಲ್ಲಿ ಪ್ರೀತಿ, ವಿಶ್ವಾಸ ಮತ್ತು ಪರಸ್ಪರ ನಂಬಿಕೆ ಪ್ರಮುಖವಾಗಿದೆ. ದಾಂಪತ್ಯಕ್ಕೆ ಕಾಲಿರಿಸಿದ ನೂತನ ವಧು-ವರರ ಸಾಂಸಾರಿಕ ಜೀವನ ಅನ್ಯೋನ್ಯತೆಯಿಂದ ಕೂಡಿರಲಿ ಎಂದು ಸ್ಥಳೀಯ ಸುಕ್ಷೇತ್ರ ವಿರಕ್ತಮಠದ ಶ್ರೀ ಶಿವಕುಮಾರ ಸ್ವಾಮಿಗಳು ನವ ದಂಪತಿಗಳಿಗೆ ಕಿವಿಮಾತು ಹೇಳಿದರು.

ಸೋಮವಾರ ಪಟ್ಟಣದ ಎಡಿಬಿ ಬ್ಯಾಂಕ್‌ ಹಿಂದುಗಡೆ ಚನ್ನಬಸವೇಶ್ವರರ ಆವರಣದಲ್ಲಿ ಸ್ಥಳೀಯ ಜಾಗೃತ ಕೇಂದ್ರ ವಿರಕ್ತಮಠದ ಸರ್ವಧರ್ಮಗಳ ಶ್ರದ್ಧಾಕೇಂದ್ರ ಆಶ್ರಯದಲ್ಲಿ ಕರ್ತೃ ಚನ್ನಬಸವ ಶಿವಯೋಗಿಗಳ 153ನೇ ಸ್ಮರಣೋತ್ಸವ ಹಾಗೂ ಶರಣರ ಜೀವನ ದರ್ಶನ ಪ್ರವಚನ ಅಂಗವಾಗಿ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 16 ಜೋಡಿ ವಧು ವರರನ್ನು ಆಶೀರ್ವದಿಸಿ ಶ್ರೀಗಳು ಆಶೀರ್ವಚನ ನೀಡಿದರು.

ತ್ರಿಕಾಲ ಯೋಗಿ ಕತೃì ಚನ್ನಬಸವ ಶಿವಯೋಗಿಗಳ ಸ್ಮರಣೋತ್ಸವ ಪ್ರಯುಕ್ತ 11 ದಿನಗಳ ಪರ್ಯಂತ ಶರಣರ ಜೀವನ ದರ್ಶನ ಪ್ರವಚನ ಬೋಧಿಸಿದ ಅಂತೂರ ಬೆಂತೂರ ಹಿರೇಮಠದ ಶ್ರೀ ಕುಮಾರ ದೇವರು ಭಕ್ತ ಸಂಕುಲಕ್ಕೆ ಸನ್ಮಾರ್ಗ ತೋರಿದ್ದಾರೆ. ಶರಣರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಭಕ್ತಿಭಾವದ ಜೀವನ ಸಾಗಿಸಿ ಮುಕ್ತಿ ಕಾಣಬೇಕು ಎಂದು ಶ್ರೀ ಶಿವಕುಮಾರ ಸ್ವಾಮಿಗಳು ಭಕ್ತರಿಗೆ ಕರೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಸ್ಥಳೀಯ ಪಂಚಗ್ರಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯರು ಆಶೀರ್ವಚನ ನೀಡಿ, ಸಾಂಸ್ಕಾರಿಕ ಜೀವನಕ್ಕೆ ಕಾಲಿಸಿರಿದ ನವ ಜೋಡಿಗಳು ಧರ್ಮದ ಸಂಸ್ಕಾರವನ್ನು ಅಳವಡಿಸಿಕೊಂಡು ಸುಂದರವಾದ ಬದುಕು ನಡೆಸಬೇಕು. ಹಿರಿಯರಿಗೆ ಸದಾ ಗೌರವಯುತವಾದ ನಡೆ ನುಡಿ ನಿಮ್ಮದಾಗಿರಲಿ ಎಂದು ಹಿತ ನುಡಿದರು.

ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮಿಗಳು, ಹಿರೇಮಲ್ಲನಕೇರಿ ವಿರಕ್ತಮಠದ ಚನ್ನಬಸವ ಸ್ವಾಮಿಗಳು, ಶಿವಪುರ ಶಿವಲಿಂಗೇಶ್ವರ ವಿರಕ್ತಮಠದ ಅಭಿನವ ಸಿದ್ಧಲಿಂಗ ಸ್ವಾಮಿಗಳು, ತುಪ್ಪದಕುರಹಟ್ಟಿ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಅಂತೂರ ಬೆಂತೂರ ಕುಮಾರ ದೇವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಅಂಗವಾಗಿ ಡಾ| ಹೇಮರಡ್ಡಿ ಬೆಟಗೇರಿ ಅವರು ವಿರಚಿತ ಕುಂಡಲಿನಿ ಅನುಭವಿಯ ಆತ್ಮವೃತ್ತಾಂತ ಗ್ರಂಥವನ್ನು ಪೂಜ್ಯರು ಬಿಡುಗಡೆಗೊಳಿಸಿದರು. ಶ್ರೀಮಠದ ಎಲ್ಲ ಹಿರಿಯರು, ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಸಿದ್ಧಲಿಂಗಪ್ಪ ಹೊಸಕೇರಿ ಸ್ವಾಗತಿಸಿದರು. ಆರ್‌.ಬಿ. ಚಿನಿವಾಲರ ಮತ್ತು ಚನ್ನು ನೀಲಗುಂದ ನಿರೂಪಿಸಿದರು.

ಪಲ್ಲಕ್ಕಿ ಉತ್ಸವ: ಇಂದು ಬೆಳಗ್ಗೆ 6ಕ್ಕೆ ಶ್ರೀಮಠದ ಕತೃ ಶ್ರೀ ಚನ್ನಬಸವ ಶಿವಯೋಗಿಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ನೆರವೇರಿತು. ಬಳಿಕ ಸಕಲ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.