ಮಕ್ಕಳಿಗಿಲ್ಲ ಸಮವಸ್ತ್ರ ಭಾಗ್ಯ
•ಎರಡು ತಿಂಗಳಾದರೂ ವಿತರಣೆಯಾಗದ ಬಟ್ಟೆ •ಹರಿದ ಬಟ್ಟೆಯಲ್ಲೇ ಬರುತ್ತಿದ್ದಾರೆ ಮಕ್ಕಳು
Team Udayavani, Jul 28, 2019, 11:17 AM IST
ಗಜೇಂದ್ರಗಡ: ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಇನ್ನೂ ಸಮವಸ್ತ್ರ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಮಕ್ಕಳು ಸಾಮಾನ್ಯ ಉಡುಪಿನಲ್ಲೇ ಶಾಲೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೇಸಿಗೆ ರಜೆ ನಂತರ ಮೇ 28ರಂದು ಸರ್ಕಾರಿ ಶಾಲೆಗಳು ಆರಂಭವಾಗಿವೆ. ಶಾಲಾ ಪ್ರಾರಂಭೋತ್ಸವ ನಂತರ ಕೆಲ ದಿನಗಳಲ್ಲಿಯೇ ಪಠ್ಯಪುಸ್ತಕ, ನೋಟ್ಬುಕ್ ವಿತರಣೆ ಮಾಡಿದರು. ವಾರದಲ್ಲಿ ಸಮವಸ್ತ್ರ ವಿತರಣೆ ಮಾಡುವುದಾಗಿ ಮಕ್ಕಳಿಗೆ ಶಿಕ್ಷಕರು ಭರವಸೆ ನೀಡಿದ್ದರು. ಆದರೆ ಜುಲೈ ತಿಂಗಳು ಮುಗಿಯುತ್ತಾ ಬಂದರೂ ಸಮವಸ್ತ್ರ ವಿತರಣೆಯಾಗಿಲ್ಲ. ಸಾರ್ವಜನಿಕ ಶಿಕ್ಷಣ ಇಲಾಖೆ ರೋಣ ಮತ್ತು ಗಜೇಂದ್ರಗಡ ತಾಲೂಕಿನ ಯಾವ ಶಾಲೆಗಳಿಗೂ ಇನ್ನೂ ಸಮವಸ್ತ್ರ ವಿತರಿಸಿಲ್ಲ.
ಎಲ್ಲ ಮಕ್ಕಳಲ್ಲಿ ಸಮಾನತೆ ಕಾಪಾಡುವ ಉದ್ದೇಶದಿಂದ ಸರ್ಕಾರ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದೆ. ಪ್ರತಿ ವರ್ಷವೂ ಸಮವಸ್ತ್ರ ಶೈಕ್ಷಣಿಕ ವರ್ಷ ಆರಂಭದ ದಿನದಲ್ಲಿಯೇ ನೀಡಲಾಗುತ್ತಿತ್ತು. ಆದರೆ ಶಾಲೆ ಆರಂಭವಾಗಿ ಎರಡು ತಿಂಗಳಾದರೂ ಇನ್ನೂ ಸಮವಸ್ತ್ರ ವಿತರಣೆ ಮಾಡದಿರುವುದು ದುರಾದೃಷ್ಟಕರ.
ಕೆಲವೆಡೆ ಪ್ರತ್ಯೇಕ ಸಮವಸ್ತ್ರ: ಎಸ್ಡಿಎಂಸಿ ಸದೃಢವಾಗಿರುವ ಶಾಲೆಗಳಲ್ಲಿ ಪ್ರತ್ಯೇಕ ಸಮವಸ್ತ್ರ ನೀಡಲಾಗಿದೆ. ಆದರೆ ಇದನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ಬಟ್ಟೆ, ಬಿಸಿಯೂಟದ ಸಲುವಾಗಿಯೇ ಸರ್ಕಾರಿ ಶಾಲೆಗೆ ಬರುವ ಮಕ್ಕಳಿದ್ದಾರೆ. ಅವರಿಗೆ ಪ್ರತ್ಯೇಕ ಸಮವಸ್ತ್ರ ಹೊಲಿಸಿಕೊಳ್ಳುವಂತೆ ಒತ್ತಾಯ ಮಾಡಲು ಸಾಧ್ಯವಿಲ್ಲ. ಇಲಾಖೆ ಸಮವಸ್ತ್ರ ವಿತರಣೆ ಮಾಡದ ಕಾರಣ ಮಕ್ಕಳು ಹರಿದ, ಒಗೆಯದ ಬಟ್ಟೆಗಳನ್ನೇ ಧರಿಸಿ ಬರುತ್ತಿದ್ದಾರೆ. ಕೆಲವು ಮಕ್ಕಳ ಬಳಿ ಒಂದೇ ಜೊತೆ ಬಟ್ಟೆ ಇವೆ. ಅದನ್ನು ಒಗೆಯುವ ಕಾರಣಕ್ಕಾಗಿಯೇ ಮಕ್ಕಳು ಶಾಲೆಗೆ ಬರುತ್ತಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಕ್ಕಳ ಸ್ಥಿತಿಯನ್ನು ಕಣ್ಣಿನಿಂದ ನೋಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿದ್ದಾರೆ ಶಿಕ್ಷಕರೊಬ್ಬರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ