ಸರ್ವೋಚ್ಛ ನ್ಯಾಯಾಲಯದಲ್ಲಿ 23ರಂದು ಮಹದಾಯಿ ವಿಚಾರಣೆ


Team Udayavani, Jan 15, 2020, 3:07 PM IST

gadaga-tdy-2

ನರಗುಂದ: ಈಗಾಗಲೇ ಗೋವಾ ಮತ್ತು ಕರ್ನಾಟಕ ರಾಜ್ಯಗಳ ಮೇಲ್ಮನವಿ ಸರ್ವೋತ್ಛ ನ್ಯಾಯಾಲಯದಲ್ಲಿವೆ. ಹೀಗಾಗಿ ಜ. 23ರಂದು ಮಹದಾಯಿ ಯೋಜನೆಗೆ ಗೆಜೆಟ್‌ ನೋಟಿಫಿಕೇಶನ್‌ ಕುರಿತಾಗಿ ಸರ್ವೋತ್ಛ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ನಮಗೆ ನ್ಯಾಯ ದೊರಕುವ ವಿಶ್ವಾಸವಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.

ಮಂಗಳವಾರ ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ 1643ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯದೇವತೆಯಿಂದ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪರಿಸರಕ್ಕೆ ಧಕ್ಕೆಯಾಗುತ್ತದೆ ಎಂದು ಆರೋಪಿಸಿ ಹಾಗೂ ಹೆಚ್ಚಿನ ನೀರು ಕೇಳಿ ಗೋವಾ ರಾಜ್ಯ ಮೇಲ್ಮನವಿ ಸಲ್ಲಿಸಿದೆ. ಅದರಂತೆ ಕರ್ನಾಟಕ ಕೂಡ ಹಂಚಿಕೆಯಾದ ನೀರು ಬಳಕೆಗೆ ಅನುಮತಿ ಕೋರಿ ಮತ್ತು ಹೆಚ್ಚುವರಿ ನೀರಿನ ಬೇಡಿಕೆಯೊಂದಿಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ಹಂತದಲ್ಲಿ ನಮಗೆ ನ್ಯಾಯ ದೊರೆತು ಮಹದಾಯಿ ನೀರು ಒದಗುವ ಭರವಸೆ ಮೂಡಿಸಿದೆ ಎಂದು ಹೇಳಿದರು. ಈ ಯೋಜನೆಯಲ್ಲಿ ರಾಜಕಾರಣಿಗಳಿಂದ ನಮಗೆ ಸಹಕಾರ ಸಿಗುವ ಭರವಸೆ ಉಳಿದಿಲ್ಲ. ಯಾಕೆಂದರೆ ಅವರು ನಮಗೆ ಸಹಕಾರ ನೀಡುವುದಾಗಿದ್ದರೆ ಮಹದಾಯಿ ನ್ಯಾಯಾ ಧಿಕರಣ ತೀರ್ಪು ಹೊರಬಿದ್ದ ಕೂಡಲೇ ನಮ್ಮ ಪಾಲಿನ ನೀರು ಒದಗಿಸಿಕೊಡುತ್ತಿದ್ದರು. ಆದ್ದರಿಂದ ನ್ಯಾಯದೇವತೆ ಮೊರೆ ಹೋಗಿದ್ದೇವೆ ಎಂದು ಸೊಬರದಮಠ ಸ್ವಾಮೀಜಿ ಆರೋಪಿಸಿದರು.

ನಾಳೆ ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಅವರಿಗೆ ಮನವಿ ಸಲ್ಲಿಸುವ ಬಗ್ಗೆ ನಮ್ಮನ್ನು ಕೇಳುತ್ತಿದ್ದಾರೆ. ಆದರೆ ಯಾರಿಗೂ ಮನವಿ ಸಲ್ಲಿಸುವ ಪ್ರಮೇಯ ನಮಗಿಲ್ಲ. ಇಲ್ಲೀವರೆಗೂ ಎಲ್ಲರಿಗೂ ಮನವಿ ಸಲ್ಲಿಸಿ ಸಾಕಾಗಿದೆ. ಇನ್ನೇನಿದ್ದರೂ ನ್ಯಾಯದೇವತೆಯೇ ನಮಗೆ ನ್ಯಾಯ ನೀಡಬೇಕಾಗಿದೆ ಎಂದು ಸೊಬರದಮಠ ಸ್ವಾಮೀಜಿ ಹೇಳಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ, ರಾಮಪ್ಪ ಸಾಬಳೆ, ಪುಂಡಲಿಕಪ್ಪ ಯಾದವ, ಬಸವರಾಜ ಮುದೇನಗುಡಿ, ರಾಮಕೃಷ್ಣ ನಿಗಡೆ, ಶಂಕ್ರಪ್ಪ ಜಾಧವ, ಕಲ್ಲಪ್ಪ ಮೊರಬದ, ವೆಂಕಪ್ಪ ಹುಜರತ್ತಿ, ಪರಮೇಶಪ್ಪ ಅಣ್ಣಿಗೇರಿ, ರುದ್ರಗೌಡ ಮುದಿಗೌಡ್ರ, ಶಿವಪ್ಪ ಸಾತನ್ನವರ, ವಿಜಯಕುಮಾರ ಹೂಗಾರ, ಜಯಪಾಲ ಮುತ್ತಿನ, ಚಂದ್ರಪ್ಪ ಮುದಕನ್ನವರ, ಚನ್ನಪ್ಪಗೌಡ ಪಾಟೀಲ, ಶಿವಾನಂದ ಹಳಕಟ್ಟಿ, ಅರ್ಜುನ ಮಾನೆ, ಹನಮಂತ ಸರನಾಯ್ಕರ, ಅನಸಮ್ಮ ಶಿಂಧೆ, ಎಸ್‌ಕೆ. ಗಿರೆಣ್ಣವರ, ಮಾರುತಿ ಬಡಿಗೇರ, ಗಿರಡ್ಡಿ ಕಿಲಬನೂರ, , ಚನ್ನಬಸಪ್ಪ ಕತ್ತಿ ಮುಂತಾದವರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.