ಎಲ್ಲೆಲ್ಲೂ ಮಹಾಲಕ್ಷ್ಮೀ ಆರಾಧನೆ

ದೀಪಾವಳಿ ಆಚರಣೆಗಾಗಿ ಜಿಲ್ಲಾದ್ಯಂತ ಮಹಿಳೆಯರು ಬೆಳಗ್ಗೆಯಿಂದಲೇ ಸಿದ್ಧತೆಯಲ್ಲಿ ತೊಡಗಿದ್ದರು.

Team Udayavani, Nov 5, 2021, 6:25 PM IST

ಎಲ್ಲೆಲ್ಲೂ ಮಹಾಲಕ್ಷ್ಮೀ ಆರಾಧನೆ

ಗದಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಅಮಾವಾಸ್ಯೆ ನಿಮಿತ್ತ ಮನೆ, ಅಂಗಡಿ, ಮುಂಗಟ್ಟುಗಳು ಹಾಗೂ ಹೋಟೆಲ್‌ಗ‌ಳಲ್ಲಿ ಮಹಾಲಕ್ಷ್ಮೀ-ಕುಬೇರ ಪೂಜೆ, ತಾಯಿ ಧನಲಕ್ಷ್ಮೀ ಆರಾಧನೆ ಜೋರಾಗಿತ್ತು. ಮಹಿಳೆಯರು ನೂತನ ವಸ್ತ್ರ, ಚಿನ್ನಾಭರಣಗಳನ್ನು ಧರಿಸಿ ಗಮನ ಸೆಳೆದರೆ, ಮುದ್ದು ಮಕ್ಕಳು, ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ದೀಪಾವಳಿ ಆಚರಣೆಗಾಗಿ ಜಿಲ್ಲಾದ್ಯಂತ ಮಹಿಳೆಯರು ಬೆಳಗ್ಗೆಯಿಂದಲೇ ಸಿದ್ಧತೆಯಲ್ಲಿ ತೊಡಗಿದ್ದರು. ದೀಪಾವಳಿ ಬಲಿಪಾಡ್ಯಮಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಾದ ಪುಟ್ಟರಾಜ ಕವಿ ಗವಾಯಿಗಳ ಆಶ್ರಮ, ಸಾಯಿಬಾಬಾ ದೇವಸ್ಥಾನ, ರಾಚೋಟೇಶ್ವರ ದೇವಸ್ಥಾನ, ಜೋಡು ಮಾರುತಿ, ಗಂಗಾಪುರ ಪೇಟೆ ದುರ್ಗಾದೇವಿ, ಬೆಟಗೇರಿಯ ಬನಶಂಕರಿ ದೇವಸ್ಥಾನ ಸೇರಿದಂತೆ ಅವಳಿ ನಗರದ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ದೀಪಾವಳಿ ಹಬ್ಬದಂದೇ ಹೊಸದಾಗಿ ವಾಹನಗಳ ಖರೀದಿಸಿದವರು ತಮ್ಮ ಇಷ್ಟ ದೇವರ ಸನ್ನಿಧಾನದಲ್ಲಿ ನೂತನ ವಾಹನಗಳಿಗೆ ಪೂಜೆ ನೆರವೇರಿಸಿದರು. ಮನೆ-ಮನ ಬೆಳಗಿದ ದೀವಿಗೆ: ಬಾನಂಗಳದಲ್ಲಿ ಕತ್ತಲೆ ಆವರಿಸುತ್ತಿದ್ದಂತೆ ಎಲ್ಲರ ಮನೆಗಳಲ್ಲೂ ಹಣತೆಯ ದೀಪಗಳು ಮನೆ-ಮನಗಳನ್ನು ಬೆಳಗಿದವು. ದೀಪಾವಳಿ ನಿಮಿತ್ತ ಬಹುತೇಕರು ತಮ್ಮ ಮನೆಯ ಮುಖ್ಯ ಬಾಗಿಲು, ಕಿಟಕಿ ಹಾಗೂ ಕಾಂಪೌಂಡ್‌ ಗೋಡೆಗಳ ಮೇಲೆ ಹಣತೆಗಳನ್ನು ಸಾಲು ಸಾಲಾಗಿ ಹಚ್ಚಿ, ಬೆಳಕು ಮೂಡಿಸಿರುವುದು ನೋಡುಗರಿಗೆ ಮುದ ನೀಡಿತು.

ಬಾಗಿಲು ಹಾಗೂ ದೇವರ ಮಂಟಪಗಳನ್ನು ಬಾಳೆ ಎಲೆ ಹಾಗೂ ಮಾವಿನ ಎಲೆಗಳಿಂದ ಅಂಲಕರಿಸಲಾಗಿತ್ತು. ಇನ್ನು ಕೆಲವರು ಮನೆ ಹಾಗೂ ಅಂಗಡಿ, ಮುಂಗಟ್ಟುಗಳನ್ನು ವರ್ಣರಂಜಿತ ವಿದ್ಯುತ್‌ ದೀಪಗಳಿಂದ ಅಲಂಕರಿಸಿದ್ದರಿಂದ ಬೆಳಕಿನ ಕಿರಣಗಳ ಮಧ್ಯೆ ಕಟ್ಟಡಗಳು ಝಗಮಗಿಸುತ್ತಿದ್ದವು.

ಎಲ್ಲೆಲ್ಲೂ ಲಕ್ಷ್ಮೀದೇವಿ ಆರಾಧನೆ: ಅವಳಿ ನಗರದ ಸಾವಿರಾರು ಅಂಗಡಿ, ಮುಂಗಟ್ಟುಗಳು, ನೂರಾರು ಹೋಟೆಲ್‌ಗ‌ಳಲ್ಲಿ ಅರ್ಚಕರು ಮಹಾಗಣಪತಿ ಹಾಗೂ ತಾಯಿ ಅಷ್ಟಲಕ್ಷ್ಮೀಯರ ಪೂಜೆ ನೆರವೇರಿಸಿದರು. ಜೊತೆಗೆ ಚಿನ್ನಾಭರಣ, ನೋಟುಗಳನಿಟ್ಟು ಮಹಾಲಕ್ಷ್ಮೀ-ಕುಬೇರ ಪೂಜೆ ನೆರವೇರಿಸಲಾಯಿತು.

ಅಷ್ಟೆ„ಶ್ವರ್ಯಗಳನ್ನೂ ಕರುಣಿಸುವಂತೆ ದೇವರಲ್ಲಿ ಅರಿಕೆ ಮಾಡಿಕೊಂಡರು. ಪೂಜೆಗೆ ನೆಂಟರಿಷ್ಟರು, ಸ್ನೇಹಿತರು ಹಾಗೂ ಅಕ್ಕ-ಪಕ್ಕದವರನ್ನು ಆಹ್ವಾನಿಸಿ, ಬಾಳೆ ಹಣ್ಣು, ಎಲೆ-ಅಡಕೆ ಹಾಗೂ ಉಪಹಾರ ನೀಡಿ ಸತ್ಕರಿಸಿದರು. ಸ್ಥಿತಿವಂತ ಉದ್ಯಮಿಗಳು ಹಬ್ಬದೂಟ ಬಡಿಸಿ, ತಾಯಿ ಲಕ್ಷ್ಮೀದೇವಿ ಕೃಪೆಗೆ ಪಾತ್ರರಾದರು. ಇನ್ನುಳಿದಂತೆ ಮನೆಗಳಲ್ಲೂ ಮುತ್ತೆ$çದೆಯರು ತಾಯಿ ಲಕ್ಷ್ಮೀದೇವಿ, ಗೌವರಮ್ಮನ ಪೂಜೆ ನೆರವೇರಿಸಿದರು. ಮನೆಯ ದೇವರ ಕೋಣೆಯಲ್ಲಿ ಕಳಶ ಹಾಗೂ ಮಡಿ ನೀರು ತುಂಬಿದ್ದ ಕಂಚಿನ ತಂಬಿಗೆಯಲ್ಲಿ ತೆಂಗಿನ ಕಾಯಿಗೆ ಸೀರೆಯನ್ನುಡಿಸಿ, ವಿವಿಧ ಹೂವುಗಳಿಂದ ಲಕ್ಷ್ಮೀ ದೇವಿ ಪ್ರತಿಮೆ ತಯಾರಿಸಿ, ಭಕ್ತಿಯಿಂದ ಪೂಜಿಸಿದರು. ಈ ವೇಳೆ ನೆರೆಹೊರೆಯ ಮಹಿಳೆಯರನ್ನು ಮನೆಗೆ ಆಹ್ವಾನಿಸಿ, ಪರಸ್ಪರ ಅರಿಷಿಣ, ಕುಂಕುಮ ಹಚ್ಚಿಕೊಂಡು ಹಬ್ಬದ ಶುಭ ಕೋರಿದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.