13ರಿಂದ ಮಹಾಂತ ಶ್ರೀಗಳ ಜಾತ್ರೆ
ರಾಣಿಬೆನ್ನೂರಿನ ಗುರುಬಸವ ಸ್ವಾಮೀಜಿ, ಅಧ್ಯಕ್ಷತೆಯನ್ನು ಶಿವಣ್ಣ ನೀಲಗುಂದ ವಹಿಸುವರು.
Team Udayavani, Feb 10, 2022, 6:26 PM IST
ಮುಳಗುಂದ: ಪಟ್ಟಣದ ಆರಾಧ್ಯ ದೈವ, ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 163ನೇ ಸ್ಮರಣೋತ್ಸವದ ಅಂಗವಾಗಿ ಜಾತ್ರಾ ಮಹೋತ್ಸವವನ್ನು ಫೆ.13 ರಿಂದ 15ರ ವರೆಗೆ ಕೋವಿಡ್ ಮಾರ್ಗಸೂಚಿ ಅನ್ವಯ ಸರಳವಾಗಿ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ಸಮ್ಮುಖದಲ್ಲಿ ಆಚರಿಸಲಾಗುವುದು ಎಂದು ಜಾತ್ರಾ ಸಮಿತಿ ಅಧ್ಯಕ್ಷ ಬಸವರಾಜ ಬಡ್ನಿ ಹೇಳಿದರು.
ಈ ಕುರಿತು ಶ್ರೀ ಮಠದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ.13 ರಂದು ಬೆಳಗ್ಗೆ 8.30 ಕ್ಕೆ ಷಟಸ್ಥಲ ಧ್ವಜಾರೋಹಣವನ್ನು ಅಗಡಿ ಗುತ್ತಲ ಪ್ರಭುಸ್ವಾಮಿ ಮಠದ ಗುರುಸಿದ್ಧ ಸ್ವಾಮೀಜಿ ನೆರವೇರಿಸಲಿದ್ದು, ಕಂಪ್ಲಿ ಕಲ್ಮಠದ ಪ್ರಭು ಸ್ವಾಮೀಜಿ, ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು ಸಮ್ಮುಖ ವಹಿಸುವರು ಎಂದು ತಿಳಿಸಿದರು.
ಸಾಯಂಕಾಲ 7 ಗಂಟೆಗೆ ಜಾತ್ರಾ ಮಹೋತ್ಸವ ಉದ್ಘಾಟನೆ ಹಾಗೂ ಅನುಭಾವ ಗೋಷ್ಠಿಯ ಸಾನ್ನಿಧ್ಯವನ್ನು ಯರನಾಳ ವಿರಕ್ತಮಠದ ಅಭಿನವ ರೇವಣ ಸಿದ್ಧೇಶ್ವರ ಸ್ವಾಮೀಜಿ, ರಾಣಿಬೆನ್ನೂರಿನ ಗುರುಬಸವ ಸ್ವಾಮೀಜಿ, ಅಧ್ಯಕ್ಷತೆಯನ್ನು ಶಿವಣ್ಣ ನೀಲಗುಂದ ವಹಿಸುವರು. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಫೆ.14 ರಂದು ಮಧ್ಯಾಹ್ನ 1ಗಂಟೆಗೆ ಮಹಾದಾಸೋಹ, ಸಾಯಂಕಾಲ 5 ಗಂಟೆಗೆ ರಥೋತ್ಸವ, ಸಾಯಂಕಾಲ 7 ಗಂಟೆಗೆ ಅನುಭಾವ
ಗೋಷ್ಠಿ 2 ರ ಸಾನ್ನಿಧ್ಯವನ್ನು ಹುಬ್ಬಳ್ಳಿ ಮೂರುಸಾವಿರ ಮಠದ ಜ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ವಹಿಸುವರು. ಅತಿಥಿಗಳಾಗಿ ಡಿ.ಆರ್. ಪಾಟೀಲ, ಎಸ್.ಎಸ್. ಪಾಟೀಲ ಇತರರು ಭಾಗವಹಿಸುವರು.
ಫೆ.15 ರಂದು ಮಧ್ಯಾಹ್ನ 1ಕ್ಕೆ ಮಹಾ ದಾಸೋಹ, ಸಾಯಂಕಾಲ 5 ಗಂಟೆಗೆ ಮಲ್ಲಿಕಾರ್ಜುನ ಶ್ರೀಗಳಿಂದ ಕಡುಬಿನ ಕಾಳಗ, ಸಾಯಂಕಾಲ 7 ಗಂಟೆಗೆ ಅನುಭಾವಗೋಷ್ಠಿ 3 ರ ಸಾನ್ನಿಧ್ಯವನ್ನು ಗದಗ ತೋಂಟದಾರ್ಯ ಮಠದ ಡಾ| ತೋಂಟದ ಸಿದ್ಧಾರಾಮ ಸ್ವಾಮೀಜಿ ವಹಿಸುವರು. ಸಮ್ಮುಖ ಹಾಗೂ ಗೌರವ ಅಭಿನಂದನೆ ಬಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದೇವರು ನೆರವೇರಿಸುವರು. ಅತಿಥಿಗಳಾಗಿ ಶಿವಕುಮಾರ ಉದಾಸಿ, ಅನಿಲ ಮೆಣಸಿನಕಾಯಿ, ಮಹಾಂತಪ್ಪ ಬಡ್ನಿ ಭಾಗವಹಿಸುವರು. ಅನುಭಾವಗೋಷ್ಠಿ ವಿಶೇಷಿತರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳು ಜರುಗುವವು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಡಾ|ಎಸ್.ಸಿ. ಚವಡಿ, ಬಸವರಾಜ ಹಾರೋಗೇರಿ, ಮಹಾಂತೇಶ ಕೋರಿ, ಬಸವರಾಜ ಬಾತಾಖಾನಿ, ಈರಣ್ಣ ತಡಸದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್