ರಸ್ತೆ ದುರಸ್ಥಿ  ಮಾಡಿಸಿ-ನಿರಾಶ್ರಿತರಿಗೆ ಸೂರು ನೀಡಿ


Team Udayavani, Jan 5, 2022, 8:51 PM IST

್ಗಹಜಕಜಹಗ್ದಸಅ

ಹೊಳೆಆಲೂರ: ಮಲಪ್ರಭಾ ಹಾಗೂ ಬೆಣ್ಣೆ ಹಳ್ಳದ ಭೀಕರ ಪ್ರವಾಹದಿಂದ 11 ವರ್ಷಗಳಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿರುವ ನರಗುಂದ ಮತಕ್ಷೇತ್ರದ 17 ಗ್ರಾಮಗಳ ಸಾವಿರಾರು ನಿರಾಶ್ರಿತರಿಗೆ 11 ವರ್ಷಗಳಿಂದ ಮನೆ ಹಂಚಿಕೆ ಮಾಡದೆ ಕಾಲಹರಣ ಮಾಡಿದ್ದಲ್ಲದೇ, ಹಿಂದಿನ ನನ್ನ ಅವ ಧಿಯಲ್ಲಿ ಮಂಜೂರಾದ ಹಲವು ಜನಪರ ಯೋಜನೆಗಳಿಗೆ ಏಕೆ ಕೊಕ್ಕೆ ಹಾಕುತ್ತಿದ್ದೀರಿ ಎಂದು ಮಾಜಿ ಸಚಿವ ಬಿ.ಆರ್‌.ಯಾವಗಲ್ಲ ಸಚಿವ ಸಿ.ಸಿ.ಪಾಟೀಲ ಅವರನ್ನು ಪ್ರಶ್ನಿಸಿದರು.

ನರಗುಂದ ಮತಕ್ಷೇತ್ರದ ಅಭಿವೃದ್ಧಿಯಲ್ಲಾದ ವಂಚನೆ ಖಂಡಿಸಿ ಮಂಗಳವಾರ ಹೊಳೆಆಲೂರಿನಲ್ಲಿ ಹೊಳೆಆಲೂರ ಹಾಗೂ ನರಗುಂದ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಭಾಗದವರೇ ಲೋಕೋಪಯೋಗಿ ಸಚಿವರಾಗಿದ್ದಾರೆ. ಈ ಭಾಗದ ರಸ್ತೆಗಳು ಸುಂದರವಾಗುತ್ತವೆ ಎಂದು ಜನರು ಕನಸು ಕಂಡಿದ್ದರು.

ಆದರೆ, ಕೊಣ್ಣೂರ ಹೊಳೆಆಲೂರ, ರೋಣ ಹೊಳೆಆಲೂರ, ಹೊಳೆಆಲೂರ ಬೆಳವಣಕಿ ಸೇರಿದಂತೆ ಬಹುತೇಕ ಗ್ರಾಮೀಣ ರಸ್ತೆಗಳು ಹದಗೆಟ್ಟು ವಾಹನ ಸಂಚಾರವೇ ಅಯೋಮಯವಾಗಿದೆ. ಆದರೂ ಸಚಿವರು ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ. ಗಾಡಗೋಳಿ, ಹೊಳೆಮಣ್ಣೂರ, ಹೊಳೆಹಡಗಲಿ ಸೇರಿದಂತೆ ಮತಕ್ಷೇತ್ರದ 17 ನವ ಗ್ರಾಮಗಳಲ್ಲಿ ನನೆಗುದಿಗೆ ಬಿದ್ದಿರುವ ಮನೆ ಹಂಚಿಕೆ ಮಾಡುವಂತೆ ಜನರು ಪ್ರತಿಭಟನೆ ಮಾಡಿದರೆ ಬೆದರಕಿ ಹಾಕುತ್ತಾರೆ. ಅವರ ಪರವಾಗಿ ಕಾಂಗ್ರೆಸ್‌ ಕಾರ್ಯಕರ್ತರು ಬೆಂಬಲ ನೀಡಿದರೆ ರಾಜಕೀಯ ಮಾಡುತ್ತೀರಿ ಎನ್ನುತ್ತಾರೆ.

ಹೀಗಾದರೆ, ನಿರ್ಗತಿಕರು ಬೀದಿ ಪಾಲಾಗಬೇಕೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಪಾಟೀಲ ಮಾತನಾಡಿ, ನರಗುಂದ ಪಟ್ಟಣದ ಬಡವರಿಗಾಗಿ ಹಿಂದಿನ ಶಾಸಕ ಬಿ.ಆರ್‌. ಯಾವಗಲ್ಲ 110 ಕೋಟಿ ವೆಚ್ಚದಲ್ಲಿ ರೂಪಿಸಿದ್ದ 2 ಸಾವಿರ ಆಶ್ರಯ ಮನೆ ಯೋಜನೆ, 58 ಕೋಟಿ ವೆಚ್ಚದ ನರಗುಂದದ ಎಂಜಿನಿಯರಿಂಗ್‌ ಕಾಲೇಜು, ಹೊಳೆಆಲೂರ ಹಾಗೂ ಕೊಣ್ಣೂರಿನ ವಸತಿ ಶಾಲೆಗಳು, ಹೊಳೆಆಲೂರ ಬದಾಮಿ ಸಂಪರ್ಕಿಸುವ 25 ಕೋಟಿ ವೆಚ್ಚದ ಮಲಪ್ರಭಾ ಬ್ಯಾರೇಜ್‌ ಕಾಮಗಾರಿಗಳು ಅರ್ಧಕ್ಕೇ ನಿಲ್ಲಲು ಸಿ.ಸಿ.ಪಾಟೀಲ ಅವರೇ ಕಾರಣ.

ಈ ಭಾಗದ ಎಲ್ಲ ರಸ್ತೆಗಳು ಹಾಳಾಗಲು ಸಚಿವ ಸಿ.ಸಿ.ಪಾಟೀಲ ಬೆಂಬಲಿಗರ ಅಕ್ರಮ ಮರುಳು ತುಂಬಿದ ಲಾರಿಗಳೇ ಕಾರಣ ಎಂದು ಆರೋಪಿಸಿದರು. ಶಿರಹಟ್ಟಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಅಚ್ಛೇದಿನ್‌ ಆಯೇಗಾ ಎಂದು ಜನರಿಗೆ ಮಂಕು ಬೂದಿ ಎರಚಿ ಅಧಿ ಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ, ಜನರಿಗೆ ಬೇಕಾದ ಅಗತ್ಯ ಮೂಲಭೂತ ವಸ್ತುಗಳ ಬೆಲೆ ಗಗನಕ್ಕೆ ಏರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜುಗೌಡ್ರ ಕೆಂಚನಗೌಡ್ರ, ತಾಪಂ ಮಾಜಿ ಅಧ್ಯಕ್ಷ ತಿ.ಬಿ.ಶಿರಯಪ್ಪಗೌಡ್ರ, ರಾಜ್ಯ ಯುವ ಕಾಂಗ್ರೇಸ್‌ ಪ್ರಧಾನ ಕಾರ್ಯದರ್ಶಿ ವಿವೇಕ ಯಾವಗಲ್ಲ, ಹೊಳೆಆಲೂರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ.ಕೋಳೇರಿ, ನರಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ಲ, ಶಾರದಾ ಹಿರೇಗೌಡ್ರ, ಉಮಾ ದ್ಯಾವನೂರ, ಪ್ರಕಾಶ ಬಜಂತ್ರಿ, ಬಸವರಾಜ ಪಾಟೀಲ, ರವೀಂದ್ರ ಹಿರೇಮಠ, ವೀರಯ್ಯ ಸೋಮನಕಟ್ಟಿ, ರಾಜು ಕಲಾಲ, ಪ್ರವೀಣ ಜಡಮಳಿ, ಕಾಶಪ್ಪ ಬಳಗಾನೂರ, ಮಹಾಬಳೇಶ ಗಾಣಿಗೇರ, ಕಲ್ಲಪ್ಪ ಬೇಲಿ ಇತರರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.