ಕನ್ಯೆ ನೋಡಲು ಹೋಗಿದ್ದ ಯುವಕ; ಬೈಕ್ ಸಹಿತ ನೀರಿನಲ್ಲಿ ಕೊಚ್ಚಿಹೋದ
Team Udayavani, May 20, 2022, 4:27 PM IST
ಮುಂಡರಗಿ: ಭಾರೀ ಮಳೆಯ ಕಾರಣದಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗುರುವಾರ ತಡರಾತ್ರಿ ಬೈಕ್ ಸಮೇತ ಯುವಕನೋರ್ವ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಏಕ್ಲಾಸಪೂರ ಗ್ರಾಮದಲ್ಲಿ ಜರುಗಿದೆ.
ಮೃತ ಯುವಕನನ್ನು ಏಕ್ಲಾಸಪೂರ ಗ್ರಾಮದ ಯುವಕ ಟಿಪ್ಪು ಸುಲ್ತಾನ ಅಕ್ಬರಸಾಬ ದೊಡ್ಡಮನಿ (28) ಎಂದು ಗುರುತಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮಕ್ಕೆ ಕನ್ಯೆ ನೋಡಲು ಹೋಗಿದ್ದ ಟಿಪ್ಪು ಸುಲ್ತಾನನು ಮರಳಿ ಗ್ರಾಮಕ್ಕೆ ಬರುವಾಗ ಮಳೆಯ ಕಾರಣದಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರಾತ್ರಿಯ ಕತ್ತಲೆಯಲ್ಲಿ ಬೈಕ್ ಸಮೇತ ನೀರಿನ ರಭಸದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಟಿಪ್ಪು ಸುಲ್ತಾನನ ಮ್ರತ ದೇಹವು ಸುಮಾರು ಮೂರು ಕಿ.ಮೀ ದೂರದವರೆಗೂ ಕೊಚ್ಚಿಕೊಂಡು ಹೋಗಿ ಗಿಡಗಂಟೆಯಲ್ಲಿ ಸಿಕ್ಕಿಕೊಂಡಿರುವುದು ಶುಕ್ರವಾರ ಪತ್ತೆಯಾಗಿದೆ. ಮ್ರತದೇಹವು ಸಿಕ್ಕ ಸಮೀಪದಲ್ಲಿಯೇ ಬೈಕ್ ಕೂಡಾ ದೊರಕಿದೆ.
ಗ್ರಾಮದ ಮೇಲಿರುವ ಕೋತಿ ಹಳ್ಳವು ಏಕ್ಲಾಸಪೂರ-ಹೈತಾಪೂರ ಗ್ರಾಮಕ್ಕೆ ಸಂಪರ್ಕವನ್ನು ಕಲ್ಪಿಸುವ ಸೇತುವೆಯು ಕೆಳಹಂತದ ಸೇತುವೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ
Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು
Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ
Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!
ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು