ಸ್ವಸಹಾಯ ಸಂಘ ಗಳಲ್ಲಿ ಮಾಸ್ಕ್ ತಯಾರಿ


Team Udayavani, Apr 1, 2020, 4:24 PM IST

ಸ್ವಸಹಾಯ ಸಂಘ ಗಳಲ್ಲಿಮಾಸ್ಕ್ ತಯಾರಿ

ಗದಗ: ದೇಶದಲ್ಲಿ ಕೋವಿಡ್ 19 ಭೀತಿ ಶುರುವಾದಾಗಿನಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳಿಗೆ ಬೇಡಿಕೆ ಹೆಚ್ಚಿದೆ. ಮಾಸ್ಕ್ ಪೂರೈಕೆಯಿಲ್ಲದೇ ಗ್ರಾಪಂ ಮಟ್ಟದ ಸ್ವಚ್ಛತಾ ಸಿಬ್ಬಂದಿ ಆತಂಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರಿಗೆ ಮಾಸ್ಕ್ಗಳನ್ನು ತಯಾರಿಸುವ ಮೂಲಕ ಇಲ್ಲಿನ ವಿವಿಧ ಸ್ವಸಹಾಯ ಸಂಘಗಳು ಸಂಜೀವಿನಿಯಾಗಿವೆ. ಮಹಾಮಾರಿ ಕೊರೊನಾ ವೈರಸ್‌ ದೇಶವನ್ನೇ ತಲ್ಲಣಗೊಳಿಸಿದೆ. ವೈರಾಣು ಹರಡುವಿಕೆಯನ್ನು ತಪ್ಪಿಸಲು ಎಲ್ಲೆಡೆ ಜನರು ಮಾಸ್ಕ್ಗಳ ಮೊರೆ ಹೋಗುತ್ತಿದ್ದಾರೆ. ಹಲವು ಔಷಧ  ಮಳಿಗೆಗಳಲ್ಲಿ ನೋ ಸ್ಟಾಕ್‌ ಬೋರ್ಡ್‌ ಕಾಣಿಸಿದರೆ, ಇನ್ನೂ ಕೆಲವೆಡೆ ದುಬಾರಿ ಬೆಲೆ. ಹೀಗಾಗಿ ಗ್ರಾಪಂ ಮಟ್ಟದ ಸ್ವತ್ಛತಾ ಸಿಬ್ಬಂದಿಗೆ ಕೆಲ ದಿನಗಳಿಂದ ಮಾಸ್ಕ್ಗಳನ್ನು ನೀಡುವುದು ಸವಾಲಿನ ಕೆಲಸವಾಗಿತ್ತು.

ಈ ಸಮಸ್ಯೆ ಪರಿಹರಿಸಲು ತಾಪಂ ಇಒ ಡಾ| ಎಚ್‌.ಎಸ್‌. ಜನಗಿ ಅವರು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ(ಸಂಜೀವಿನಿ) ಸ್ಕಿಲ್‌ ಇಂಡಿಯಾ ಅಡಿ ನೋಂದಾಯಿಸಿದ ಮಹಿಳಾ ಸ್ವಸಹಾಯ ಸಂಘಗಳಿಗೆ ತ್ರೀಪಲ್‌ ಲೇಯರ್‌ ಮಾಸ್ಕ್ ತಯಾರಿಸುವಂತೆ ಪ್ರೋತ್ಸಾಹಿಸುತ್ತಿದೆ. ಈ ಮೂಲಕ ಗ್ರಾಪಂ ಸಿಬ್ಬಂದಿಗೆ ಸುರಕ್ಷತಾ ಪರಿಕರ ಒದಗಿಸುವಜೊತೆಗೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಕೆಲಸ ನೀಡುವ ಮಾರ್ಗ ತೋರಿದ್ದಾರೆ.

4 ದಿನದಲ್ಲಿ ಸಾವಿರ ಮಾಸ್ಕ್ ಸಿದ್ಧ: ಲಾಕ್‌ಡೌನ್‌ ಜಾರಿಯಿಂದ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟದ ಭಯದಲ್ಲಿದ್ದ ಗ್ರಾಮೀಣ ಮಹಿಳೆಯರಿಗೆ ಈ ಅವಕಾಶ ಚೈತನ್ಯ ಮೂಡಿಸಿದೆ. ತಾಲೂಕಿನ ಕುರ್ತಕೋಟಿಯ ಗಜಗೌರಿ ಸಂಜೀವಿನಿ ಸ್ವಸಹಾಯ ಸಂಘದ ನಾಲ್ವರು, ಲಕ್ಕುಂಡಿಯ ವಾಯುಪುತ್ರ ಸಂಜೀವಿನಿ ಸ್ವಸಹಾಯ ಸಂಘದ ಇಬ್ಬರು, ಕಾರ್ತಿಕ ಸಂಜೀವಿನಿ ಸ್ವಸಹಾಯ ಸಂಘದ ಒಬ್ಬರು ಹಾಗೂ ಬಿಂಕದಕಟ್ಟಿಯ ಮಾಬುಸುಬಾನಿ ಸ್ವಸಹಾಯ ಸಂಘದ ಓರ್ವ ಮಹಿಳೆ ಸೇರಿ ನಾಲ್ಕು ದಿನಗಳಲ್ಲಿ ಒಂದು ಸಾವಿರ ಮಾಸ್ಕ್ ತಯಾರಿಸಿದ್ದಾರೆ.

ಪ್ರತಿ ಮಾಸ್ಕ್ ಹೊಲಿಯಲು ತಲಾ 5 ರೂ. ನಿಗದಿಗೊಳಿಸಲಾಗಿದೆ. ಪ್ರತಿನಿತ್ಯ 80ರಿಂದ 100 ಮಾಸ್ಕ್ ತಯಾರಿಸುತ್ತಿದ್ದು, 300ರಿಂದ 500 ರೂ. ಗಳಿಸುತ್ತಿದ್ದಾರೆ. ಪ್ರತಿ ಮಾಸ್ಕ್ಗೆ 10 ರೂ. ವೆಚ್ಚವಾಗುತ್ತಿದ್ದು, ಅದೇ ದರದಲ್ಲಿ ಗ್ರಾಪಂ ಮೂಲಕ ಸಿಬ್ಬಂದಿಗೆ ಒದಗಿಸಲಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಮಾಸ್ಕ್ಗಳಿಗೆ 30-40 ರೂ. ಬೆಲೆಯಿದೆ. ಆದರೆ, ಎಸ್‌ಎಸ್‌ಜಿ ಸಂಘಗಳು ತಯಾರಿಸಿದ ಮಾಸ್ಕ್ಗಳು ತೊಳೆದು ಮರು ಬಳಕೆ ಮಾಡಬಹುದಾಗಿದೆ. ಜೊತೆಗೆ 10 ರೂ. ಬೆಲೆಯಲ್ಲಿ ದೊರೆಯುತ್ತಿರುವುದರಿಂದ ಗ್ರಾಪಂಗಳಿಗೂ ಅನುಕೂಲವಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸಿರುವ ಅಧಿ ಕಾರಿಗಳ ಕ್ರಮಕ್ಕೆ ಗ್ರಾಮೀಣ ಭಾಗದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಎಸ್‌ಎಸ್‌ಜಿ ಮಹಿಳೆಯರು ತಯಾರಿಸಿದ ಮಾಸ್ಕ್ಗಳನ್ನು ನಮ್ಮ ಸಂಸ್ಥೆ ಮೂಲಕ ಈಗಾಗಲೇ ತಾಲೂಕಿನ ಅಂತೂರು-ಬೆಂತೂರು ಗ್ರಾಪಂಗೆ 100, ಕುರ್ತಕೋಟಿ, ಅಸುಂಡಿ, ಬಿಂಕದಕಟ್ಟಿ, ಹುಯಿಲಗೋಳ, ಶಿರುಂಜ, ಕೋಟುಮಚಗಿ, ಹುಲಕೋಟಿ ಗ್ರಾಪಂ ತಲಾ 50 ಪೂರೈಸಲಾಗಿದೆ. ಇದರ ಬೆನ್ನಲ್ಲೇ ಲಕ್ಕುಂಡಿ ಗ್ರಾಪಂನಿಂದ 100 ಮಾಸ್ಕ್ಗಳಿಗೆ ಬೇಡಿಕೆ ಬಂದಿದೆ ಎನ್ನಲಾಗಿದೆ. ಅಧಿಕಾರಿಗಳ ಈ ಕ್ರಮದಿಂದ ಸರಕಾರ ಮತ್ತು ಮಹಿಳೆಯರಿಗೂ ಅನುಕೂಲವಾಗಿದೆ. ಸಿದ್ದು ಸತ್ಯಣ್ಣವರ, ಎಸ್‌ಎಸ್‌ಜಿ ವಲಯ ವಲಯ ಮೇಲ್ವಿಚಾರಕ

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.