ಎಸ್ಎಸ್ಕೆ ಸಮಾಜದಿಂದ ಬೃಹತ್ ರ್ಯಾಲಿ
Team Udayavani, Apr 20, 2019, 2:47 PM IST
ಗದಗ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರಿಗೆ ಬೆಂಬಲ ಸೂಚಿಸಿ ನಗರದಲ್ಲಿ ಎಸ್ಎಸ್ಕೆ ಸಮಾಜದಿಂದ ಗುರುವಾರ ಸಂಜೆ ಬೃಹತ್ ಪಾದಯಾತ್ರೆ ನಡೆಸಲಾಯಿತು.
ನಗರದ ಹಳೇ ಸರಾಫ್ ಬಜಾರ್ನಿಂದ ಅಂಬಾ ಭವಾನಿ ದೇವಸ್ಥಾನದಿಂದ ಚೌವಡಿ ಕೂಟ, ಟಾಂಗಾಕೂಟ, ನಾಮಜೋಶಿ ರಸ್ತೆ, ವೀರೇಶ್ವರ ಲೈಬ್ರರಿ, ಹಳೇ ಬಸ್ ನಿಲ್ದಾಣ, ಬ್ಯಾಂಕ್ ರೋಡ್, ಟಾಂಗಾ ಕೂಟ, ಸ್ಟೇಷನ್ ರಸ್ತೆ, ಗಾಂಧಿ ವೃತ್ತ ಮಾರ್ಗವಾಗಿ ಬಿಜೆಪಿ ಚುನಾವಣಾ ಸಂಪರ್ಕ ಕಚೇರಿಗೆ ತಲುಪುವ ಮೂಲಕ ಮುಕ್ತಾಯಗೊಂಡಿತು.
ಮೆರವಣಿಗೆಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಭಾರತ ಮಾತಾಕಿ ಜೈ ಎಂಬ ಘೊಷಣೆ ಕೂಗಿದರು. ಬಿಜೆಪಿ ಮುದ್ರಿಸಿದ್ದ ಕರ ಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಬಿಜೆಪಿಗೆ ಮತಯಾಚಿಸಿದರು.
ಇದಕ್ಕೂ ಮುನ್ನ ಜಗದಂಬಾ ದೇವವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಹುಬ್ಬಳ್ಳಿಯ ಮಾಜಿ ಶಾಸಕ ಅಶೋಕ ಕಾಟವೆ ಮಾತನಾಡಿದರು. ಸೊಲ್ಲಾಪುರ ಮಾಜಿ ಶಾಸಕ ನರಸಿಂಗ ಮೆಲಜಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀಕಾಂತ ಖಟವಟೆ, ನಗರಸಭೆ ಮಾಜಿ ಉಪಾಧ್ಯಕ್ಷ ಶ್ರೀನಿವಾಸ ಭಾಂಡಗೆ, ಪ್ರಕಾಶ ಬಾಕಳೆ, ಬಿಜೆಪಿ ಶಹರ ಘಟಕದ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸುಧೀರ ಕಾಟಿಗರ, ಕಿಶನ ಮೆರವಾಡೆ, ವಿನಾಯಕ ಹಬೀಬ, ದತ್ತು ಪವಾರ, ಮಾಧುಸಾ ಮೇರವಾಡೆ, ತೋಟೋಸಾ ಭಾಂಡಗೆ, ಬಿ.ಎಚ್.ಲದ್ವಾ, ಶಂಕರ ಪವಾರ, ಅನಿಲ ಖಟವಟೆ, ಪಕ್ಕೀರಸಾ ಭಾಂಡಗೆ, ಜಯಶ್ರೀ ಖಟವಟೆ, ರೇಣುಕಾ ಕಲಬುರ್ಗಿ, ಪ್ರಶಾಂತ ಕಾಟವಾ ಹಾಗೂ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ