ಮೇವುಂಡಿ ಗ್ರಂಥಾಲಯ ಒಳಹೊಕ್ಕರೆ ಜೀವ ಭಯ
Team Udayavani, Nov 10, 2019, 4:56 PM IST
ಮುಂಡರಗಿ: ತಾಲೂಕಿನ ಮೇವುಂಡಿ ಗ್ರಾಮದ ಗ್ರಂಥಾಲಯದ ಕಾಂಕ್ರೀಟ್ ಮೇಲ್ಛಾವಣಿ ಉದುರುತ್ತಿದ್ದು, ಓದುಗರು ಭಯದಲ್ಲೇ ಕುಳಿತು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಂಥಾಲಯ ಕಟ್ಟಡ ಇಪ್ಪತ್ತು ವರ್ಷಗಳಷ್ಟು ಪುರಾತನವಾಗಿದ್ದು, ಎರಡು ವಿಭಾಗದಲ್ಲಿದೆ. ಒಂದು ವಿಭಾಗದ ಕಟ್ಟಡ ಮೇಲ್ಛಾವಣಿಯ ಕಾಂಕ್ರೀಟ್ ದಿನಂಪ್ರತಿ ಉದುರುತ್ತಿದ್ದು, ಓದುಗರ ತಲೆಯ ಮೇಲೆಯೇ ಕಾಂಕ್ರೀಟ್ನ ಕಲ್ಲು, ಉಸುಕು ಬೀಳುತ್ತಿರುತ್ತವೆ. ಅಲ್ಲದೇ ಇನ್ನೊಂದು ವಿಭಾಗದ ಮೇಲ್ಛಾವಣಿ ಉತ್ತಮವಾಗಿದ್ದರೂ ಉಬ್ಬಿದೆ.
ಕಳೆದ ಇಪ್ಪತ್ತು ವರ್ಷಗಳಿಂದ ಗ್ರಾಪಂ ಕಟ್ಟಡದಲ್ಲಿ ಸಾರ್ವಜನಿಕ ಗ್ರಂಥಾಲಯವು ಸಾಗಿ ಬಂದಿದೆ. ಗ್ರಾಪಂ ಕಟ್ಟಡದ ಮೇಲ್ಛಾವಣಿ ಶಿಥಿಲಾವಸ್ಥೆ ತಲುಪಿದೆ. ಮೇಲ್ಛಾವಣಿ ಉದುರಿ ಟೇಬಲ್ ಮತ್ತು ಕುರ್ಚಿಗಳ ಮೇಲೆ ಕಾಂಕ್ರೀಟ್ನ ಗಟ್ಟಿಯಾದ ಉಂಡೆಗಳು ಬೀಳುತ್ತಿವೆ. ಗ್ರಂಥಾಲಯದಲ್ಲಿ 4,230 ಗ್ರಂಥಗಳಿವೆ. ಗ್ರಂಥಾಲಯಕ್ಕೆ 254 ಜನ ಕಾಯಂ ಸದಸ್ಯರಿದ್ದಾರೆ. ಗ್ರಂಥಾಲಯದಲ್ಲಿ ಎರಡೇ ಎರಡು ದಿನಪತ್ರಿಕೆಗಳು ಬರುತ್ತಿವೆ. ಆದರೆ ಗ್ರಂಥಾಲಯದ ಮೇಲ್ವಿಚಾರಕರು ಆಸಕ್ತಿ ತಾಳಿ ಕಳೆದ ಮೂರು ವರ್ಷಗಳಿಂದ ಸ್ವಂತ ಹಣದಿಂದಲೇ ಇನ್ನೆರಡು ಪತ್ರಿಕೆ ತರಿಸುತ್ತಿದ್ದಾರೆ. ಇಂತಹ ಗ್ರಾಮೀಣ ಪ್ರದೇಶದ ಗ್ರಂಥಾಲಯ ಕಟ್ಟಡ ಬೀಳುವ ಭೀತಿಯಿದ್ದು, ಶೀಘ್ರ ದುರಸ್ತಿ ಮಾಡಬೇಕಿದೆ.
ಗ್ರಂಥಾಲಯ ಮೇಲ್ಛಾವಣಿ ಉದುರುತ್ತಿರುವ ಬಗ್ಗೆ ಗ್ರಂಥಾಲಯ ಇಲಾಖೆಗೂ, ಗ್ರಾಪಂ ಗಮನಕ್ಕೂ ತರಲಾಗಿದೆ. ಗ್ರಾಪಂನವರು ಮೇಲ್ಛಾವಣಿ ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. –ಹಾಲಪ್ಪ ಕೋರ್ಲಹಳ್ಳಿ,ಗ್ರಂಥಾಲಯ ಮೇಲ್ವಿಚಾರಕ
ದುರಸ್ತಿಗಾಗಿ 14ನೇ ಹಣಕಾಸು ಯೋಜನೆಯಲ್ಲಿ 2 ಲಕ್ಷ ರೂ. ಕ್ರಿಯಾಯೋಜನೆಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಇನ್ನೂ ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೇಗನೆ ಮೇಲ್ಛಾವಣಿ ದುರಸ್ತಿ ಮಾಡಲಾಗುವುದು. –ಸಂತೋಷ್ ಹೂಗಾರ, ಪಿಡಿಒ
-ಹು.ಬಾ. ವಡ್ಡಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು