ಭಾವೈಕ್ಯತೆಯ ಪ್ರತೀಕ ಮೆಹಬೂಬ್‌ ಸುಬ್ಹಾನಿ ಉರುಸ್‌


Team Udayavani, Dec 19, 2018, 4:47 PM IST

19-december-19.gif

ಗಜೇಂದ್ರಗಡ: ಮತೀಯ ಭಾವನೆ ಹೋಗಲಾಡಿಸಿ ಭಾತೃತ್ವದ ಮಧುರ ಬಾಂಧವ್ಯದ ಬೆಸುಗೆಯನ್ನು ಗಟ್ಟಿಗೊಳಿಸುವ ಅಪರೂಪದ ತಾಣಗಳಲ್ಲಿ ಒಂದಾದ ಪಟ್ಟಣದ ಗುಡ್ಡದ ಮೇಲ್ಭಾಗದಲ್ಲಿರುವ ಹಜರತ್‌ ಸೈಯ್ಯದ್‌ ಶಹಾ ಮೆಹಬೂಬ ಸುಬ್ಹಾನಿ ಅವರ ಉರುಸು ಸೌಹಾರ್ದತೆಗೆ ಸಾಕ್ಷಿಯಾಗಿದೆ.

ಗಜೇಂದ್ರಗಡ ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಅಲ್ಲದೇ ಭಾತೃತ್ವದ ಕೇಂದ್ರ ಸ್ಥಳವಾಗಿದೆ. ಈ ಪುಣ್ಯ ಭೂಮಿಯಲ್ಲಿ ಆಡಳಿತ ನಡೆಸಿದ ಮರಾಠ ಸಾಮಂತರು ಸರ್ವ ಧರ್ಮಿಯರೂ ಒಟ್ಟಾಗಿ ಬದುಕು ನಡೆಯಬೇಕೆನ್ನುವ ಉದ್ದೇಶದಿಂದ 18 ಮಠ, 18 ಮಸೀದಿ, 18 ಬಾವಿಗಳನ್ನು ನಿರ್ಮಿಸಿದ್ದರು. ಅಂತೆಯೇ ಬೆಟ್ಟದ ಮೇಲ್ಭಾಗದಲ್ಲಿಯೂ ಹಿಂದು ಮತ್ತು ಮುಸ್ಲಿಂ ದೇವಾಲಯ ನಿರ್ಮಾಣ ಮಾಡುವ ಮೂಲಕ ಭಾವೈಕ್ಯತೆಗೆ ಮುನ್ನುಡಿ ಬರೆದಿದ್ದಾರೆ.

ಉರುಸು ಎಂಬಂದು ಸಾಧುಗಳ ಪುಣ್ಯತಿಥಿ. ಹೀಗಾಗಿ ಜಾತ್ರೆಯಂತೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಜಾತೀಯತೆಯ ವಾದ ಪ್ರತಿವಾದಗಳ ಮಧ್ಯೆಯೇ ಪಟ್ಟಣದ ಗುಡ್ಡದ ಮೇಲ್ಭಾಗದಲ್ಲಿ ನಡೆಯುವ ಮೆಹಬೂಬ ಸುಬ್ಹಾನಿ ಉರುಸು ವಿಶೇಷತೆಗಳಿಗೆ ಕಾರಣವಾಗಿದೆ. ಇಲ್ಲಿ ಹಿಂದೂ-ಮುಸ್ಲಿಮರು ಭೇಟಿ ನೀಡಿ ಶರಣರ ಸಮಾಧಿ ಸ್ಥಳಕ್ಕೆ ಭಕ್ತಿ ಭಾವದಿಂದ ಪೂಜೆ ಸಲ್ಲಿಸುತ್ತಾರೆ.

ದರ್ಗಾಕ್ಕೆ ಪ್ರತಿ ಗುರುವಾರ ಮತ್ತು ಅಮವಾಸೆ ದಿನದಂದು ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಹರಕೆ, ಪೂಜೆ ಸಲ್ಲಿಸುತ್ತಾರೆ. ಸೂಫಿ ಪಂಥದವರಾದ ಹಜರತ್‌ ಸೈಯ್ಯದ್‌ ಶಹಾ ಮೆಹಬೂಬ ಸುಬ್ಹಾನಿ ಅವರು ಹಲವು ದಶಕಗಳ ಹಿಂದೆ ಗಜೇಂದ್ರಗಡಕ್ಕೆ ಭೇಟಿ ನೀಡಿದ್ದರು. ಧರ್ಮ ಪ್ರಚಾರಕ್ಕಿಂತ ಸೌಹಾರ್ದತೆ, ಸಹಬಾಳ್ವೆಗೆ ಒತ್ತು ನೀಡಿ, ಸತ್ಯ ನಿಷ್ಠೆಗೆ ಹೆಸರಾಗಿ ಸಮಾನತೆಯ ಸಂದೇಶ ಸಾರಿದ್ದಾರೆ ಎಂಬುದು ಇತಿಹಾಸ ಪ್ರತೀತ.

ಹಜರತ್‌ ಸೈಯ್ಯದ್‌ ಶಹಾ ಮೆಹಬೂಬ ಸುಬ್ಹಾನಿ ಅವರು ಈ ಭಾಗದ ಹಳ್ಳಿಗಳಲ್ಲಿ ಭಾವೈಕ್ಯತೆಯ ಸಂದೇಶ ಪಸರಿಸಿದ ಕೀರ್ತಿ ಅವರದ್ದಾಗಿದೆ. ನಂತರ ಅವರು ಗಜೇಂದ್ರಗಡ ಬೆಟ್ಟ ಮೇಲೆ ನೆಲೆ ನಿಂತರು. ಅವರ ಕಾಲಾ ನಂತರ ಅಲ್ಲಿಯೇ ಅವರ ಗದ್ದುಗೆ ಸ್ಥಾಪಿಸಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸರ್ವ ಸಮುದಾಯ ಜನರು ಉರುಸು ದಿನದಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಉರುಸು ಆಚರಣೆ
ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಟ್ಟದ ಮೇಲಿನ ಮೆಹಬೂಬ್‌ ಸುಬ್ಹಾನಿ ಅವರ ಭಾವೈಕ್ಯತಾ ಉರುಸು ಕಾರ್ಯಕ್ರಮ ಈಗಾಲೇ ಪ್ರಾರಂಭವಾಗಿದೆ. ಡಿ. 19ರಂದು ಭಾವೈಕ್ಯತಾ ಉರುಸು, ಡಿ. 20 ರಂದು ಜಿಯಾರತ್‌ ನಡೆಯಲಿದೆ. ಇಲ್ಲಿ ಯಾವುದೇ ಜಾತಿ ಮತ್ತು ಧರ್ಮಕ್ಕೆ ಸೀಮಿತವಾಗದೆ ಎಲ್ಲ ಜನಾಂಗ ಮತ್ತು ಧರ್ಮಿಯರು ಒಟ್ಟುಗೂಡಿ ಹತ್ತಾರು ದಶಕದಿಂದ ಉರುಸು ಆಚರಿಸುತ್ತಿದ್ದಾರೆ. 

ಸರ್ವ ಜನಾಂಗದ ಶಾಂತಿಯ ತೋಟದಂತಿರುವ ಗಜೇಂದ್ರಗಡದಲ್ಲಿ ಎಲ್ಲ ಧರ್ಮಿಯರು ಭಾವ್ಯಕ್ಯತೆಯಿಂದ ಜಾತ್ರೆಗಳು, ಉರುಸುಗಳನ್ನು ಆಚರಿಸುತ್ತಾ ಬರಲಾಗಿದೆ. ಅಂತೆಯೇ ಗುಡ್ಡದ ಮೇಲ್ಭಾಗದಲ್ಲಿರುವ ಹಜರತ್‌ ಮೆಹಬೂಬ ಸುಬ್ಹಾನಿ ಅವರ ಉರುಸು ಸೌಹಾರ್ದತೆ ಪ್ರತೀಕವಾಗಿದೆ.
 ಐ.ಎ. ರೇವಡಿ,ಕಸಾಪ ತಾಲೂಕಾಧ್ಯಕ್ಷ 

ಟಾಪ್ ನ್ಯೂಸ್

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.