ಗಾನಯೋಗಿ ಪುಟ್ಟರಾಜ ಗವಾಯಿ ಸ್ಮರಣೆ
Team Udayavani, Mar 4, 2020, 3:21 PM IST
ಗದಗ: ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಪಂ| ಪುಟ್ಟರಾಜ ಗವಾಯಿಗಳ 106ನೇ ಜಯಂತ್ಯುತ್ಸವ ಆಚರಿಸಲಾಯಿತು. ಪಂ| ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಾನಗಲ್ ಕುಮಾರೇಶ್ವರ ಗದ್ದುಗೆ, ಪಂ| ಪಂಚಾಕ್ಷರಿ ಗವಾಯಿಗಳು ಹಾಗೂ ಪಂ| ಪುಟ್ಟರಾಜ ಗವಾಯಿಗಳ ಕತೃì ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ವಿಶೇಷ ಪೂಜೆ ನೆರವೇರಿಸಲಾಯಿತು.
ಗುರು ಪುಟ್ಟರಾಜರ ಜಯಂತಿ ಅಂಗವಾಗಿ ಮೂವರು ಶ್ರೀಗಳ ಗದ್ದುಗೆಗಳನ್ನು ತರಹೇವಾರಿ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದಲೇ ನೂರಾರು ಭಕ್ತರು ಪುಣ್ಯಾಶ್ರಮಕ್ಕೆ ಆಗಮಿಸಿ ಗುರುಗಳ ಗದ್ದುಗೆಗಳ ದರ್ಶನಾ ಶೀರ್ವಾದ ಪಡೆದರು.
ನಾನಾ ಭಾಗದಿಂದ ಆಗಮಿಸಿದ್ದ ಕಲಾವಿದರಿಂದ ಆಶ್ರಮದಲ್ಲಿ ಸಂಗೀತ ಸುಧೆ ಹರಿಸಿ, ಭಕ್ತಿ ಅರ್ಪಿಸಿದರು. ಇದೇ ವೇಳೆ ನಗರದ ವಿವಿಧೆಡೆ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳ ಮುಂದೆ ಶ್ರೀಗುರು ಪುಟ್ಟರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಹಣ್ಣು, ಶರಬತ್ ವಿತರಿಸಿ ಧನ್ಯತೆ ಮೆರೆದರು.
ಬೃಹತ್ ಪೂರ್ಣ ಕುಂಭ ಮೆರವಣಿಗೆ: ಪಂ| ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ಮಂಗಳವಾರ ಸಂಜೆ ನಗರದಲ್ಲಿ ಒಂದು ಸಾವಿರ ಕುಂಭದೊಂದಿಗೆ ಪುಷ್ಪಗಳಿಂದ ಅಲಂಕೃತ ವಾಹನದಲ್ಲಿ ಪಂ|ಪುಟ್ಟರಾಜಕವಿ ಗವಾಯಿಗಳ ಭಾವಚಿತ್ರದ ಭವ್ಯಮೆರವಣಿಗೆ ನಡೆಯಿತು. ವೀರೇಶ್ವರ ಪುಣ್ಯಾಶ್ರಮದಿಂದ ಆರಂಭಗೊಂಡ ಬೃಹತ್ ಕುಂಭ ಮೇಳ ಮೆರವಣಿಗೆ ಭೂಮರೆಡ್ಡಿ ಸರ್ಕಲ್, ಕೆ.ಎಚ್. ಪಾಟೀಲ್ ಸರ್ಕಲ್, ಹತ್ತಿಕಾಳ ಕೂಟ, ಟಾಂಗಾಕೂಟ್, ಗಾಂಧಿ ಸರ್ಕಲ್, ಕೆ.ಸಿ. ರಾಣಿ ರಸ್ತೆ ಮಾರ್ಗವಾಗಿ ಪುನಃ ಪುಣ್ಯಾಶ್ರಮ ತಲುಪಿತು.
ಮೆರವಣಿಗೆಯುದ್ದಕ್ಕೂ ವೀರಗಾಸೆ, ವೀರಭದ್ರ ಕುಣಿತ, ಡೊಣ್ಣು ಕುಣಿತ, ರಗ್ಗಲಿಗಿ, ವಿವಿಧ ಭಜನಾ ತಂಡಗಳು ಭಕ್ತಿ ಸುಧೆ ಹರಿಸಿ, ಮೆರವಣಿಗೆಗೆ ಮೆರುಗು ನೀಡಿವು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ಹಾಗೂ ಚಿಣ್ಣರು, ಕುಣಿದು ಕುಪ್ಪಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು