ಅಜಿತ್ ಪವಾರ್ ಗೆ ತಲೆನೇ ಇಲ್ಲ, ಅವನೊಬ್ಬ ಡಬಲ್ ಗೇಮ್ ವ್ಯಕ್ತಿ: ಸಚಿವ ಪ್ರಭು ಚವ್ಹಾಣ್
Team Udayavani, Nov 20, 2020, 1:59 PM IST
ಗದಗ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪಶುಸಂಗೋಪನೆ ಹಾಗೂ ವಕ್ಫ್ ಇಲಾಖೆ ಸಚಿವ ಪ್ರಭು ಚವ್ಹಾಣ್, ಅಜಿತ್ ಪವಾರ್ ಗೆ ತಲೆನೇ ಇಲ್ಲ, ಅವನೊಬ್ಬ ಡಬಲ್ ಗೇಮ್ ವ್ಯಕ್ತಿ ಎಂದು ಲೇವಡಿ ಮಾಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜಾಗ ನಮ್ಮದು ಎನ್ನುವುದು ಅಜಿತ್ ಪವಾರ್ ಅವರ ದಡ್ಡತನದ ಪರಮಾವಧಿ. ರಾತ್ರೋರಾತ್ರಿ ನಾಯಕನಾದವನು ಕರ್ನಾಟಕದ ಗಡಿ ಬಗ್ಗೆ ಸಾಂಗ್ಲಿ, ಸೊಲ್ಲಾಪುರಕ್ಕೆ ಬಂದು ಮಾತನಾಡುತ್ತೇನೆ ಎನ್ನುತ್ತಿದ್ದಾರೆ. ಧೈರ್ಯವಿದ್ದರೆ ಕರ್ನಾಟಕಕ್ಕೆ ಬಂದು ಮಾತನಾಡಲಿ ಎಂದು ಸವಾಲು ಹಾಕಿದರು.
ಪವಾರ್ ಅವರದ್ದು ಸದಾ ಬೆಂಕಿ ಹಚ್ಚುವ ಕೆಲಸ. ಅದೇ ಅವರ ಉದ್ಯೋಗವಾಗಿದೆ. ಕನ್ನಡ ನೆಲದ ಒಂದಿಂಚೂ ನೆಲವನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಸಂಪುಟದ ಸಂಕಟದ ಮಧ್ಯೆ ಬಿ.ಎಲ್.ಸಂತೋಷ್ ಭೇಟಿಯಾದ ರಮೇಶ್ ಜಾರಕಿಹೊಳಿ!
ಮುಖ್ಯಮಂತ್ರಿ ಬದಲಾವಣೆ ಅಲ್ಲ. ಈ ಅವಧಿಯಷ್ಟೇ ಅಲ್ಲ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಯಡಿಯೂರಪ್ಪ ಅವರೇ ಸಿಎಂ ಆಗುವರು ಎಂದು ಹೇಳಿದರು.
ಸಂಪುಟ ಪುನರ್ ರಚನೆಯೋ, ವಿಸ್ತರಣೆಯೋ ಎನ್ನುವುದು ಮುಖ್ಯಮಂತ್ರಿ, ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಪಕ್ಷದಿಂದ ಯಾವುದೇ ಸೂಚನೆ ನೀಡಿದರೆ, ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ