ಪ್ರವಾಹ ಪರಿಸ್ಥಿತಿಗೆ ಕಣ್ಣೀರಿಟ್ಟ ಶಾಸಕ
Team Udayavani, Aug 11, 2019, 5:09 PM IST
ಗದಗ: ತೋಂಟದಾರ್ಯ ಕಲ್ಯಾಣ ಕೇಂದ್ರದ ಪರಿಹಾರ ಕೇಂದ್ರದಲ್ಲಿ ಶಾಸಕ ಸಿ.ಸಿ.ಪಾಟೀಲ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡುವಾಗ ಕಣ್ಣೀರಿಟ್ಟರು.
ಗದಗ: ಬೆಣ್ಣಿಹಳ್ಳ ಹಾಗೂ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಪೀಡಿತರ ದಯನೀಯ ಸ್ಥಿತಿಗೆ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಕಣ್ಣೀರಿಟ್ಟರು.
ಗದಗ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ, ಜನರ ಸಮಸ್ಯೆ ಹಾಗೂ ದುಃಖವನ್ನು ಆಲಿಸಿದರು. ಬಳಿಕ ನೆರೆ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡುವಾಗ ಪಾಟೀಲ ಗದ್ಗದಿತರಾದರು. ಮತ್ಯಾವತ್ತೂ ಜಿಲ್ಲೆಗೆ ಈ ಪರಿಸ್ಥಿತಿ ಬಾರದಿರಲಿ ಎನ್ನುತ್ತಲೇ, ಕೆಲಕಾಲ ಪುಟ್ಟಮಗುವಿನಂತೆ ಗಳಗಳನೇ ಅತ್ತರು.
ಬಳಿಕ ಮತ್ತೆ ಮಾತು ಆರಂಭಿಸಿದ ಅವರು, ಜಿಲ್ಲೆಯ ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಿಗೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಮನೆ ಕಲ್ಪಿಸುವುದರೊಂದಿಗೆ ಬೆಳೆ ಹಾನಿಗೆ ಪರಿಹಾರ ನೀಡಿ, ದಿನಬಳಕೆ ವಸ್ತುಗಳನ್ನೂ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ನೆರೆ ಸಂತ್ರಸ್ತರ ರಕ್ಷಣೆಗೆ ಜಿಲ್ಲಾಡಳಿತ ಸಕಲ ಕ್ರಮ ಜರುಗಿಸಿದೆ. ನೆರೆ ಪೀಡಿತ ಪ್ರದೇಶಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ವಿರಮಿಸುವುದಿಲ್ಲ ಎಂದು ಧೈರ್ಯ ತುಂಬಿದರು.
ಮಾಜಿ ಸಚಿವ ಎಸ್.ಎಸ್. ಪಾಟೀಲ, ಅನಿಲ್ ಮೆಣಸಿನಕಾಯಿ, ಮೋಹನ ಮಾಳಶೆಟ್ಟಿ, ಶ್ರೀಪತಿ ಉಡುಪಿ, ಎಂ.ಎಂ. ಹಿರೇಮಠ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ