ಚನ್ನಮ್ಮ ಪಡೆಯಿಂದ ಅಣಕು ಪ್ರದರ್ಶನ
Team Udayavani, Dec 9, 2019, 2:41 PM IST
ಗದಗ: ಇಲ್ಲಿನ ಎಸ್.ಎಂ. ಕೃಷ್ಣಾ ನಗರದ ಸರಕಾರಿ ಪ್ರೌಢ ಶಾಲೆಯ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಗದಗ ಶಹರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಇಲಾಖೆ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಚನ್ನಮ್ಮ ಮಹಿಳಾ ತಂಡ ಎನ್ನೆಸ್ಸೆಸ್ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಕುರಿತು ಅಣಕು ಪ್ರದರ್ಶನ ನೀಡಿದರು.
ಜಿಲ್ಲಾ ಮಹಿಳಾ ಪೊಲೀಸ್ ಚನ್ನಮ್ಮ ಪಡೆಯ ಮುಖ್ಯಸ್ಥೆ ಮಾಲತಿ ಶೀಗಿಹಳ್ಳಿ ಮಾತನಾಡಿ, ವಿಶೇಷವಾಗಿ ಯುವತಿಯರು ಕರಾಟೆ, ಆತ್ಮ ರಕ್ಷಣಾ ಕಲೆ ಅರಿತಿರಬೇಕು. ಇಂದಿನ ದಿನಗಳಲ್ಲಿ ಮಹಿಳೆಯರು, ಯುವತಿಯರು ಹಾಗೂ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಸಂಚರಿಸುವುದು ಅನಿವಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಧರಿಸಿದ ಆಭರಣ ಕಳ್ಳತನ, ಹಲ್ಲೆ, ಕೊಲೆ, ಅತ್ಯಾಚಾರ ಮಾಡುವ ಅಪಾಯದ ಸನ್ನಿವೇಶಗಳು ಎದುರಾಗಬಹುದು.
ಅಂತಹ ಸಂದರ್ಭಗಳಲ್ಲಿ ಮಹಿಳೆಯರು ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಅನಿವಾರ್ಯ. ಅದಕ್ಕಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸಲಹೆ ನೀಡಿದರು. ಗದಗ ಶಹರ ಪೊಲೀಸ್ ಠಾಣೆ ಪಿಎಸ್ಐ ಉಮಾ ವಗ್ಗರ ಮಾತನಾಡಿ, ದುಷ್ಟ ವ್ಯಕ್ತಿಗಳಿಂದ ರಕ್ಷಿಸಿಕೊಳ್ಳಲು ಮಹಿಳೆಯರು ಸ್ವಯಂ ರಕ್ಷಣಾ ಕಲೆಗಳನ್ನು ಕರಗತ ಮಾಡಿಕೊಳ್ಳುವುದು ಅವಶ್ಯ ಎಂದರು. ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಎನ್ನೆಸ್ಸೆಸ್ ಅಧಿಕಾರಿ ಮಂಜುಳಾ ಚುಂಚಾ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ