ಗದಗ ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ
Team Udayavani, Feb 1, 2021, 1:58 PM IST
ಗದಗ: ಈಗಾಗಲೇ ಗದಗ ಜಿಲ್ಲೆ ಬಿಂಕದಕಟ್ಟಿ ಮೃಗಾಲಯ, ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಹಾಗೂ ಭೀಷ್ಮ ಕೆರೆ ಆವರಣದಲ್ಲಿರುವ 111 ಅಡಿ ಮುಗಿಲೆತ್ತರದ ಬಸವೇಶ್ವರ ಮೂರ್ತಿಯಿಂದಾಗಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಇನ್ನು ಈ ಸಾಲಿಗೆ ಇದೀಗ ಗದಗ ರೈಲ್ವೆ ನಿಲ್ದಾಣ ಹೊಸದಾಗಿ ಸೇರ್ಪಡೆಯಾಗಿದೆ. ಗದಗ ಜಂಕ್ಷನ್ನಲ್ಲಿ ಇತ್ತೀಚೆಗೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.
ಅದರೊಂದಿಗೆ ರೈಲ್ವೆ ಇಲಾಖೆ ಕಾರ್ಯವೈಖರಿ ಸಾರುವ ಪ್ರಾತ್ಯಕ್ಷಿಕೆ, ಕಿರು ಉದ್ಯಾನ ಹಾಗೂ ವರ್ಣರಂಜಿತ ವನ್ಯಜೀವಿಗಳಚಿತ್ರಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಗದಗ ರೈಲ್ವೆ ನಿಲ್ದಾಣದ ಮೊದಲನೇ ಪ್ಲಾಟ್ ಫಾರಂಗೆ ಹೊಂದಿಕೊಂಡಂತೆ ಸುಮಾರು ಮೂರು ಗುಂಟೆ ಜಾಗೆಯಲ್ಲಿ ಅತ್ಯಾಕರ್ಷಕವಾಗಿ ಕಿರು ಉದ್ಯಾನ ನಿರ್ಮಿಸಲಾಗಿದೆ.
ಉದ್ಯಾನದಲ್ಲಿ ಸ್ವರ ಮಾಂತ್ರಿಕ ಪಂ| ಭೀಮಸೇನ್ ಜೋಶಿ ಅವರ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ಅದರ ಹಿಂಭಾಗದ ಗೋಡೆಯಲ್ಲಿ ಪಂ| ಪುಟ್ಟರಾಜ ಕವಿ ಗವಾಯಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು, ಸಂಗೀತ ಪರಿಕರ ಚಿತ್ರಿಸಲಾಗಿದೆ. ಈ ಮೂಲಕ ಸಂಗೀತ ಲೋಕಕ್ಕೆ ಗದಗಿನ ಕೊಡುಗೆ ಸಾರುವ ಪ್ರಯತ್ನ ಮಾಡಲಾಗಿದೆ.
ಜೊತೆಗೆ ಪ್ರಯಾಣಿಕರು ಕೂರಲು ಹುಲ್ಲಿನ ಹಾಸಿಗೆ, ಹೂವಿನ ಗಿಡಗಳು, ರಾತ್ರಿ ವೇಳೆ ಇಲ್ಲಿನ ಪರಿಸರದ ಅಂದ ಹೆಚ್ಚಿಸಲು ಹೊಸ ಮಾದರಿಯ ವಿದ್ಯುತ್ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ರೈಲ್ವೆ ಹಳಿಗೆ ಬಳಸಿದ ಹಳೆಯ ಕಟ್ಟಿಗೆಗಳಿಂದ ನಿಲ್ಲಿಸಿ, ರೈಲ್ವೆ ಲಾಂಚನ ನಿರ್ಮಿಸಿರುವುದು ಸೆಲ್ಫಿ ಸ್ಪಾಟ್ ಆಗಿ ಪರಿವರ್ತಿಸಲಾಗಿದೆ.
ಇದನ್ನೂ ಓದಿ:ಚರ್ಚೆಗೆ ಕಾರಣವಾದ ಅರವಿಂದ ಪಾಟೀಲ ಮೌನ
ಪ್ರಮುಖ ಆಕರ್ಷಣೆ
ರೈಲ್ವೆ ಇಲಾಖೆ ಕಾರ್ಯವೈಖರಿ ಸಾರು ರೈಲ್ವೆ ಪ್ರಾತ್ಯಕ್ಷಿಕೆ ಗದಗ ನಿಲ್ದಾಣದ ಪ್ರಮುಖ ಆಕರ್ಷಣೆಯಾಗಿದೆ. ಸುಮಾರು 5×3 ಅಡಿ ವಿಸ್ತ್ರೀರ್ಣದಲ್ಲಿ ಅಚ್ಚುಕಟ್ಟಾದ ಪ್ರಾತ್ಯಕ್ಷಿಕೆ ನಿರ್ಮಿಸಲಾಗಿದೆ. ಒಂದು ನಿಲ್ದಾಣದಿಂದ ಮತ್ತೂಂದು ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹಳಿಗಳು, ಪುಟ್ಟ ರೈಲು, ಸುಸ್ಸಜ್ಜಿತ ನಿಲ್ದಾಣ, ರೈಲ್ವೆ ಹಳಿಗಳನ್ನು ಸಂಧಿಸುವ ರಸ್ತೆ, ರೈಲ್ವೆ ಗೇಟ್, ಬೆಟ್ಟಗುಡ್ಡ, ಅರಣ್ಯದಲ್ಲಿ ಸ್ವತ್ಛಂದವಾಗಿ ವಿಹರಿಸುವ ವನ್ಯಜೀವಿಗಳ ಆಟಿಕೆಗಳಿಂದ ಆಕರ್ಷಣೀಯವಾಗಿ ಪ್ರಾತ್ಯಕ್ಷಿಕೆ ನಿರ್ಮಿಸಲಾಗಿದೆ. ರೈಲ್ವೆ ಇಲಾಖೆ ಕಾರ್ಯಕ್ಷಮತೆ ಹಾಗೂ ಪ್ರಯಾಣಿಕರ ಜವಾಬ್ದಾರಿಯನ್ನೂ ಮನವರಿಕೆ ಮಾಡಿಕೊಡುವುದು ಇದರ ಉದ್ದೇಶ ಎನ್ನುತ್ತಾರೆ ಇಲಾಖೆ ಅಧಿ ಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು