ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ
Team Udayavani, Sep 11, 2019, 10:44 AM IST
ಗದಗ: ಮೊಹರಂ ಕೊನೆ ದಿನದ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಪಾಂಜಾಗಳು ಮುಖಾಮುಖೀಯಾದವು.
ಗದಗ: ಭಾವೈಕ್ಯತೆ ಸಂಕೇತವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಮಂಗಳವಾರ ಹಿಂದೂ- ಮುಸ್ಲಿಮರು ಒಟ್ಟಾಗಿ ಶ್ರದ್ಧಾ- ಭಕ್ತಿಯಿಂದ ಆಚರಿಸಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಮೊಮ್ಮಕ್ಕಳಾದ ಹಜರತ್ ಹಸನ್-ಹುಸೇನ್ ಅವರ ತ್ಯಾಗ, ಬಲಿದಾನ ಸ್ಮರಿಸುವ ಮೂಲಕ ನಮನ ಸಲ್ಲಿಸಲಾಯಿತು.
ನಗರದ ಮಾಬುಸುಬಾನಿ ಕಟ್ಟೆ, ಜುಮ್ಮಾ ಮಸೀದಿ, ದಖನಿ ಗಲ್ಲಿ, ಒಕ್ಕಲಗೇರಿ ಓಣಿ, ಖಾನ್ತೋಟ, ಮುಕ್ತುಂ ಗರಡಿ, ಹಳೇ ಕಚೇರಿ, ಹನುಮನ ಗರಡಿ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಪವಿತ್ರ ಪಂಜಾ ಹಾಗೂ ಡೋಲಿಗಳ ಮೆರವಣಿಗೆ ನಡೆಯಿತು.
ನಗರದ ಕಾಗದಗೇರಿ ಓಣಿಯಲ್ಲಿರುವ ಬಾವಿ ಹಾಗೂ ಮುಕ್ತುಮ್ ಬಾವಡಿಯಲ್ಲಿ ಮೊಹರಂ ಆಚರಣೆ ಭಾಗವಾಗಿ ಹತ್ತಾರು ಪವಿತ್ರ ತಾಬೂತ್ಗಳು ಸಮಾವೇಶಗೊಂಡವು. ಬಳಿಕ ವಿಧಿವತ್ತಾಗಿ ಪಾಂಜಾಗಳನ್ನು ಹೊಳೆಗೆ ಕಳುಹಿಸಲಾಯಿತು. ಈ ವೇಳೆ ನಡೆದ ಝುಲೂಸ್ನಲ್ಲಿ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳು ಹಾಗೂ ಕಲಾ ತಂಡಗಳ ಕುಣಿತ ಮೆರವಣಿಗೆಗೆ ಮೆರಗು ನೀಡಿತು.
ತಾಲೂಕಿನ ಶ್ಯಾಗೋಟಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಹುತೇಕ ಹಿಂದೂಗಳು ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆದರು.
ಗ್ರಾಮೀಣ ಭಾಗದ ಹಲವೆಡೆ ಕೆಂಡ ಹಾಯುವ ಧಾರ್ಮಿಕ ಕಾರ್ಯಕ್ರಮವು ನೆರವೇರಿಸಲಾಯಿತು. ಈ ಸಂದರ್ಭ ಅನೇಕರು ಯ್ಯೋಮೆ ಅಶುರಾ (ಉಪವಾಸ) ಆಚರಿಸಿದರು. ಕಳೆದೈದು ದಿನಗಳಿಂದ ಹಸನ್-ಹುಸೇನ್ರ ತ್ಯಾಗ-ಬಲಿದಾನ ಸ್ಮರಿಸುವ ಕಾರ್ಯಕ್ರಮ ನಡೆದವು.
ಪಂಜಾ ಕೂರಿಸಿದ್ದ ಕಟ್ಟೆಗಳಲ್ಲಿ ಕವಡೆ-ಊದು ಹಾಕಿ, ಹೂವಿನಿಂದ ಅಲಂಕರಿಸಿ, ಮಗ್ದುಮ್ ಸಕ್ಕರೆ ಫಾತೆಹಾ ಅರ್ಪಿಸಲಾಯಿತು. ಯುವಕರು ಹಾಗೂ ಬಾಲಕರು ಕೈಗೆ ದಾರ ಕಟ್ಟಿಕೊಂಡು ಫಕೀರರಾಗಿ, ಅಳ್ಳೊಳ್ಳಿ ಬಾವಾ, ಹುಲಿ ವೇಷ ಧರಿಸಿ ಅಲಾಹಿ ಕುಣಿತದಲ್ಲಿ ಪಾಲ್ಗೊಳ್ಳುವ ಮೂಲಕ ಮೊಹರಂ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ