ಮೊಹರಂ ಆಚರಣೆ: ಖರೀದಿ ಜೋರು
Team Udayavani, Sep 9, 2019, 11:03 AM IST
ಗಜೇಂದ್ರಗಡ: ಮೊಹರಂ ಹಬ್ಬದ ಪ್ರಯುಕ್ತ ಅಲೆ ದೇವರಿಗೆ ಮಕಾನ್ ಖರೀದಿಸಿದ ಭಕ್ತರು.
ಗಜೇಂದ್ರಗಡ: ಪಟ್ಟಣದ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸರ್ವ ಧರ್ಮಿಯರ ಭಾವೈಕ್ಯತೆ ಹಬ್ಬವಾದ ಮೊಹರಂ ಆಚರಣೆ ಪ್ರಯುಕ್ತ ಪಟ್ಟಣದ ಮಾರುಕಟ್ಟೆಯಲ್ಲಿ ರವಿವಾರ ಖರೀದಿ ಜೋರಾಗಿ ನಡೆಯಿತು.
ನಭಿಯವರ ಮೊಮ್ಮಗ ಇಮಾಮ್ ಹುಸೇನ್ ಅವರ ಕುಟುಂಬದವರು ಇಸ್ಲಾಂ ಧರ್ಮದ ಕಟ್ಟುಪಾಡುಗಳನ್ನು ಪಾಲಿಸಲು ಎಂದು ಪ್ರಾಣತ್ಯಾಗ ಮಾಡಿದ ಸ್ಮರಣಾರ್ಥ, ಮುಸ್ಲಿಮರು ಶೋಕದ ಹಬ್ಬವಾಗಿ ಆಚರಿಸಿದರೆ, ಹಿಂದೂಗಳು ಪಂಚಾ ದೇವರನ್ನು ಮಸೀದಿಯಲ್ಲಿ ಕೂರಿಸಿ ಭಾವೈಕ್ಯತೆಯಿಂದ ಆಚರಿಸುವ ಮೊಹರಂ ಹಬ್ಬದ ಪ್ರಯುಕ್ತ ಪಟ್ಟಣದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾಗುವ ಧವಸ ಧಾನ್ಯ ಸೇರಿ, ಲಾಡಿ, ಹೂವಿನ ಸರ, ಮಕ್ತುಂ ಸಕ್ಕರೆ, ಮಕಾನ್ ಮಾರಾಟ ಜೋರಾಗಿತ್ತು. ಸ್ಥಳೀಯ ಜೋಡು ರಸ್ತೆ, ದುರ್ಗಾ ವೃತ್ತ, ಕಾಲಕಾಲೇಶ್ವರ ವೃತ್ತ, ಸರಾಫ್ ಬಜಾರನಲ್ಲಿನ ಅಂಗಡಿಗಳಲ್ಲಿ ಹಬ್ಬಕ್ಕೆ ಬೇಕಾಗುವ ಸಾಮಗ್ರಿಗಳ ಖರೀದಿ ಜೋರಾಗಿತ್ತು.
ಇನ್ನೊಂದೆಡೆ ಜೋಡು ರಸ್ತೆಗಳುದ್ದಕ್ಕೂ ಹುಲಿ ವೇಷಧಾರಿಗಳ ಮಾಲೆ, ಲಾಡಿ ಮತ್ತು ನವಿಲು ಗರಿಗಳ ಹೆಚ್ಚಾಗಿತ್ತು. ಇದಲ್ಲದೇ ಕಾಲಕಾಲೇಶ್ವರ ವೃತ್ತದಲ್ಲಿ ಮಕಾನ್ ಮಾರಾಟವು ನಡೆಯಿತು. ಜತೆಗೆ ಕುಂಬಾರರು ಮಣ್ಣಿನಿಂದ ಸಿದ್ದಪಡಿಸಿದ್ದ ಮಡಿಕೆ, ಕುಡಿಕೆಗಳನ್ನು ಖರೀದಿಸಲು ಜನರು ಮುಗಿ ಬಿದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್