ಮುಂಗಾರು ಪೂರ್ವ ಮಳೆಯಬ್ಬರಕ್ಕೆ ಜನ ತತ್ತರ
ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಗೆ 148 ಮನೆಗಳಿಗೆ ಹಾನಿ
Team Udayavani, May 19, 2022, 4:30 PM IST
ಗದಗ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಮಾರು 88.9 ಹೆಕ್ಟೇರ್ ಬೆಳೆ ಹಾನಿಯಾಗಿದೆ. 148 ಮನೆಗಳು ಹಾನಿಯಾಗಿದ್ದು, ನೂರಾರು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದೆ. ಸಿಡಿಲಿಗೆ 6 ಜನರು ಬಲಿಯಾದರೆ, 48 ಜಾನುವಾರುಗಳು ಅಸುನೀಗಿವೆ. ಕಳೆದ ನಾಲ್ಕೈದು ವರ್ಷಗಳಿಂದ ಮುಂಗಾರು ಪೂರ್ವದಲ್ಲೇ ಭರ್ಜರಿ ಮಳೆ ದಾಖಲಾಗುತ್ತಿದೆ.
ಅದರಂತೆ ಈ ಬಾರಿಯೂ ಮುಂಗಾರು ಪೂರ್ವದಲ್ಲೇ ಮಳೆ ಚುರುಕು ಪಡೆದಿದೆ. ವಾರ್ಷಿಕ 641.1 ಮಿ.ಮೀ. ಮಳೆಯಾಗುತ್ತದೆ. ಈ ಪೈಕಿ ಜನವರಿಯಿಂದ ಮೇ ಅಂತ್ಯದ ವರೆಗೆ 75.5 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಮೇ 17ರ ವರೆಗೆ 78.4 ಮಿ.ಮೀ. ಮಳೆಯಾಗಿದೆ. ಇದರಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲೇ ಹೆಚ್ಚು ಮಳೆ ದಾಖಲಾಗಿದೆ. ಮಳೆಯೊಂದಿಗೆ ಬೀಸುವ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಹಲವು ಅನಾಹುತಗಳಿಗೆ ಕಾರಣವಾಗಿದೆ.
ಸಿಡಿಲಿಗೆ 6 ಜನ-ಹತ್ತಾರು ಕುರಿ ಬಲಿ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಮಳೆಯಿಂದ ಸೃಷ್ಟಿಯಾದ ಅನಾಹುತಕ್ಕೆ 6 ಜನರು ಪ್ರಾಣ ತೆತ್ತಿದ್ದಾರೆ. ಮುಂಡರಗಿ, ಶಿರಹಟ್ಟಿ ತಾಲೂಕಿನ ತಲಾ ಇಬ್ಬರು, ರೋಣ ತಾಲೂಕಿನ ಒಬ್ಬರು ಸಿಡಿಲಿಗೆ ಬಲಿಯಾಗಿದ್ದರೆ, ನರಗುಂದ ತಾಲೂಕಿನಲ್ಲಿ ಮನೆ ಕುಸಿದು ಒಬ್ಬರು ಮೃತಪಟ್ಟಿದ್ದಾರೆ.
ಅದರಂತೆ ಸಿಡಿಲಿಗೆ 6 ಎತ್ತು, ಎಮ್ಮೆಗಳು ಹಾಗೂ 42 ಕುರಿ, ಮೇಕೆಗಳು ಮೃತಪಟ್ಟಿವೆ. 148 ಮನೆಗಳಿಗೆ ಹಾನಿ: ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದೆ. ಅದರೊಂದಿಗೆ ಕಚ್ಚಾ ಹಾಗೂ ಪಕ್ಕಾ ಸೇರಿದಂತೆ ಒಟ್ಟು 148 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಈ ಪೈಕಿ ಗದಗ ತಾಲೂಕಿನಲ್ಲಿ ಗರಿಷ್ಠ 52 ಮನೆಗಳು ಧರೆಗುರುಳಿವೆ. ನರಗುಂದ ತಾಲೂಕಿನ 36, ಲಕ್ಷ್ಮೇಶ್ವರದಲ್ಲಿ 24, ರೋಣದದಲ್ಲಿ 15, ಶಿರಹಟ್ಟಿಯಲ್ಲಿ 12, ಮುಂಡರಗಿ 8 ಹಾಗೂ ಗಜೇಂದ್ರಗಡದಲ್ಲಿ 1 ಮನೆಗಳು ಭಾಗಶಃ ಹಾನಿಗೊಳಗಿದೆ. ಈ ಪೈಕಿ ಶೇ.95 ರಷ್ಟು ಮನೆಗಳಿಗೆ ಎನ್ಡಿಆರ್ಎಫ್ ನಿಯಮಾವಳಿಂತೆ ಪರಿಹಾರ ವಿತರಿಸಲಾಗಿದೆಂದು ಆಯಾ ತಾಲೂಕು ತಹಶೀಲ್ದಾರ್ರು ಮಾಹಿತಿ ನೀಡಿದ್ದಾರೆ.
88.9 ಹೆಕ್ಟೇರ್ ಬೆಳೆ ಹಾನಿ: ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಗಾಳಿಗೆ ಸುಮಾರು 88.9 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ನೆಲ ಕಚ್ಚಿವೆ. ಗದಗ ತಾಲೂಕಿನ ಮುಗುಂದ, ಲಕ್ಷ್ಮೇಶ್ವರ, ಮುಂಡರಗಿ ಮತ್ತು ರೋಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕಾ ಬೆಳೆಗಳು ನೆಲಕಚ್ಚಿವೆ. ಈ ಪೈಕಿ ಪೇರಲ, ಬಾಳೆ ಗಿಡಗಳು ಮತ್ತಿತರೆ ಬೆಳೆಗಳು ಹಾನಿಗೀಡಾಗಿದ್ದು, ರೈತರು ಕಣ್ಣೀರಿಡುವಂತಾಗಿದೆ.
ಗದಗ ತಾಲೂಕಿನ 52 ಮನೆಗಳು ಹಾನಿಗೊಳಗಾಗಿದ್ದು, 45 ಮನೆಗಳಿಗೆ ಎನ್ ಡಿಆರ್ಎಫ್ ನಿಯಮಾವಳಿಯಂತೆ ತಲಾ 3,200 ರೂ. ಪರಿಹಾರ ವಿತರಿಸಲಾಗಿದೆ. ಇನ್ನುಳಿದವುಗಳಲ್ಲಿ ಕೆಲ ಮನೆಗಳ ಸಮೀಕ್ಷೆ ನಡೆಯಬೇಕಿದೆ. ಇನ್ನೂ, ಕೆಲವು ಎನ್ ಡಿಆರ್ಎಫ್ ನಿಯಮದಲ್ಲಿ ಬರುತ್ತಿಲ್ಲ. ಸಿಡಿಲಿಗೆ 32 ಜಾನುವಾರುಗಳು ಬಲಿಯಾಗಿದ್ದು, ಸಂಬಂಧಿಸಿದವರಿಗೆ ಸುಮಾರು 96 ಸಾವಿರ ರೂ. ಪರಿಹಾರ ವಿತರಿಸಲಾಗಿದೆ. –ಕಿಶನ್ ಕಲಾಲ್, ಗದಗ ತಹಶೀಲ್ದಾರ್
ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬೆಟಗೇರಿ ಹೋಬಳಿ ವ್ಯಾಪ್ತಿಯಲ್ಲಿ ನಮ್ಮ ಪರಿಚಯ ಸ್ಥರ ಮನೆ ಕುಸಿದಿದೆ. ಅದಕ್ಕೆ ಕೇವಲ 3,500 ರೂ. ಪರಿ ಹಾರ ದೊರಕಿದೆ. ಅದರಿಂದ ಮನೆ ದುರಸ್ತಿ ಮಾಡಿ ಕೊಳ್ಳಲು ಸಾಧ್ಯವಿಲ್ಲ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಸರಕಾರ ನಿಯಮಾವಳಿ ಪರಿಷ್ಕರಿಸಿ, ಕನಿಷ್ಟ 10 ಸಾವಿರ ರೂ. ಪರಿಹಾರ ನೀಡಬೇಕು. –ರಾಘವೇಂದ್ರ ಯಳವತ್ತಿ, ನಗರಸಭೆ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ