ಅವಳಿ ನಗರದಲ್ಲಿ ಒಂದು ಗಂಟೆಗೂ ಅಧಿಕ ಮಳೆ
Team Udayavani, Jul 12, 2020, 12:22 PM IST
ಗದಗ: ಅವಳಿ ನಗರದಲ್ಲಿ ವರುಣನ ಆರ್ಭಟ ಶನಿವಾರವೂ ಮುಂದುವರಿದಿದೆ. ಅವಳಿ ನಗರದಲ್ಲಿ ಒಂದೂವರೆ ಗಂಟೆ ಕಾಲ ಬಿರುಸಿನ ಮಳೆ ಸುರಿಯಿತು.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಸುಮಾರು ಒಂದೂವರೆ ಗಂಟೆಗಳ ಕಾಲ ಬಿಟ್ಟು ಬಿಡದಂತೆ ಬಿರುಸಿನಿಂದ ಮಳೆಯಾಯಿತು. ಮಳೆಯಿಂದ ಇಲ್ಲಿನ ಹೊಂಬಳ ನಾಕಾ ಜನತಾ ಕಾಲೋನಿ, ಎಸ್.ಎಂ. ಕೃಷ್ಣಾ ನಗರ, ಅಂಬೇಡ್ಕರ್ ನಗರ, ಸಿದ್ರಾಮೆಶ್ವರ ನಗರ, ಕಂಬಾರ ಸಾಲ, ಜವಳಗಲಿ ಹಾಗೂ ಬೆಟಗೇರಿ ವ್ಯಾಪ್ತಿಯ ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಮಳೆ ನೀರು ಮನೆಗೆ ನುಗ್ಗಿದ್ದರಿಂದ ಜನರು ಅಗತ್ಯ ವಸ್ತುಗಳು ಹಾಗೂ ಪಾತ್ರೆಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಯಿತು. ಇದೇ ವೇಳೆ ಭಾರಿ ಮಳೆಯಿಂದಾಗಿ ಇಲ್ಲಿನ ಜನರಲ್ ಕಾರ್ಯಪ್ಪ ವೃತ್ತ, ಮಹೇಂದ್ರಕರ ಸರ್ಕಲ್ ಹಾಗೂ ರೈಲ್ವೇ ಬ್ರಿಡ್ಜ್ ಮತ್ತಿತರೆ ಭಾಗದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಅದರಂತೆ ತಾಲೂಕಿನ ಹುಲಕೋಟಿ, ಕುರ್ತಕೋಟಿ, ಹರ್ತಿ ಹಾಗೂ ನಾಗಾವಿ ಭಾಗದಲ್ಲೂ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ