ಬಹುತೇಕ ಶಾಲೆಗಳಲ್ಲಿ ಇಲ್ಲ ಪಿಟಿ ಮಾಸ್ತರ್‌

•ದೈಹಿಕ ಶಿಕ್ಷಕರು ಹುದ್ದೆಗಳು ಖಾಲಿಖಾಲಿ•ಕಾಡುತ್ತಿದೆ ಆಟದ ಮೈದಾನಗಳ ಕೊರತೆ

Team Udayavani, Jul 24, 2019, 11:35 AM IST

gadaga-tdy-1

ರೋಣ: ಆಟದಲ್ಲಿ ತೊಡಗಿದ್ದ ಮುಶಿಗೇರಿ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು.

ರೋಣ: ಗಜೇಂದ್ರಗಡ ಮತ್ತು ರೋಣ ತಾಲೂಕು ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಮೈದಾನದ ಅಭಾವದಿಂದ ಮಕ್ಕಳು ಕ್ರೀಡಾ ಚಟುವಟಿಕೆಗಳಿಂದ ವಂಚಿತರಾಗುವಂತಾಗಿದೆ.

ಈ ಎರಡೂ ತಾಲೂಕುಗಳಲ್ಲಿ 158 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, 35 ಸರಕಾರಿ ಪ್ರೌಢಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಸೌಲಭ್ಯಗಳು ಸಿಗದೇ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ವಲಯ ಮಟ್ಟದಿಂದ ಹಿಡಿದು ರಾಜ್ಯಮಟ್ಟದವರೆಗಿನ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ತೊಡಕು ಉಂಟಾಗಿದೆ. ಕ್ರೀಡಾಪಟುಗಳು ಕ್ರೀಡೆಯಿಂದ ದೂರ ಉಳಿಯುವಂತಾಗಿದೆ.

ಕ್ರೀಡಾಪಟುಗಳಿಗೆ ತೊಂದರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಪಠ್ಯಕ್ರಮ ಇದ್ದು, ಮಕ್ಕಳ ಭವಿಷ್ಯ ರೂಪಿಸಲು ಕತ್ತರಿ ಬಿದ್ದಿದೆ. ಶಾಲೆಯಲ್ಲಿ ಮಕ್ಕಳಿಗೆ ಖೋಖೋ, ಕಬ್ಬಡ್ಡಿ, ವಾಲಿಬಾಲ್, ಓಟ, ಎತ್ತರ ಜಿಗಿತ, ಉದ್ದ ಜಿಗಿತ, ವಿದ್ಯಾರ್ಥಿನಿಯರಿಗೆ ಥ್ರೋಬಾಲ್, ಚೆಸ್‌, ಯೋಗ, ಬ್ಯಾಡ್ಮಿಟನ್‌, ಶೆಟ್ಲಕಾಕ್‌ ಇನ್ನಿತರ ಕ್ರೀಡಾಪಟುಗಳಿಗೆ ಸರಿಯಾಗಿ (ಕೋಚ್)ಮಾರ್ಗದರ್ಶನ ದೊರೆಯದಂತಾಗಿದೆ.

ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ: ತಾಲೂಕಿನ ಪ್ರೈಮರಿ ಹಾಗೂ ಹೈಸ್ಕೂಲ್ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಅಂದಾಜು ಆರೇಳು ವರ್ಷಗಳಿಂದ ಖಾಲಿಯಿದ್ದು, ಸರಕಾರ ಭರ್ತಿಗೊಳಿಸುವ ಗೋಜಿಗೆ ಹೋದಂತಿಲ್ಲ. ತಾಲೂಕಿನಲ್ಲಿ ಜಿ.ಎಚ್.ಎಸ್‌.ಶಾಂತಗೇರಿ, ಜಿ.ಎಚ್.ಎಸ್‌.ರೋಣ, ಜಿ.ಎಚ್.ಎಸ್‌.ಮುಗಳಿ, ಜಿ.ಎಚ್.ಎಸ್‌.ಮುಶಿಗೇರಿ ಸೇರಿದಂತೆ ನಾಲ್ಕು ಸರಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರು ಇಲ್ಲದಂತಾಗಿದೆ. ಹಿಳೆಮಣ್ಣೂರ, ರಾಜೂರ, ಮುಗಳಿ, ಬಮ್ಮಸಾಗರ, ನರೇಗಲ್, ಶಾಂತಗೇರಿ, ಮುದೇನಗುಡಿ, ಕಳಕಾಪೂರ, ಜಿಗಳೂರ ಸೇರಿದಂತೆ ಇನ್ನು ಅನೇಕ ಸರಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಮತ್ತು ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳ ಹುದ್ದೆ ಖಾಲಿ ಇರುವುದರಿಂದ ಭರ್ತಿಗೊಳಿಸಲು ಸರಕಾರ ಮೀನಾಮೇಷ ಎಣಿಸುತ್ತಿದೆ.

ಆಟದ ಮೈದಾನಗಳೇ ಇಲ್ಲ: ತಾಲೂಕಿನ ಮಾಡಲಗೇರಿ, ಇಟಗಿ, ಕಳಕಾಪೂರ,ಹೊನ್ನಿಗನೂರ, ಬಳಗೋಡ, ಕುರಮನಾಳ,ರುದ್ರಾಪೂರ ಸೇರಿದಂತೆ ಇನ್ನು ಅನೇಕ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆಟದ ಮೈದಾನ ಅಭಾವ ಇದೆ. ಆಟೋಟಕ್ಕೆ ಅಡಚಣೆ ಎದುರಿಸುವ ಶಾಲೆಗಳಿಗೆ ಮೈದಾನ ವ್ಯವಸ್ಥೆ ಕಲ್ಪಿಸಬೇಕಾಗಿದೆ.

ತಾಲೂಕಿನ 15ಕ್ಕೂ ಹೆಚ್ಚು ಸರಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ. ಕೆಲವು ಶಾಲೆಗಳಲ್ಲಿ ಆಟದ ಮೈದಾನ ಇಲ್ಲ. ವಿದ್ಯಾರ್ಥಿಗಳಿಗೆ ಕ್ರೀಡಾ ಕೋಚ್ ಸಿಗದ ಪರಿಣಾಮ ತೊಂದರೆ ಉಂಟಾಗಿದೆ. ಸರಕಾರ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಗೊಳಿಸಬೇಕು.• ನಂಜುಂಡಯ್ಯ ಎನ್‌., ಕ್ಷೇತ್ರ ಶಿಕ್ಷಣಾಧಿಕಾರಿ.

ನಮಗೆ ದೈಹಿಕ ಶಿಕ್ಷಕರು ಇಲ್ಲ. ನಮ್ಮ ಶಾಲೆಯಲ್ಲಿ ಇರುವ ಗುರುಗಳೇ ಹೇಳಿಕೊಡುತ್ತಿದ್ದಾರೆ.ಆದರೆ ಮೇಲಿನ ಸಾಹೇಬರು ನಮಗೆ ಆಟದ ಮೈದಾನ ಹಾಗೂ ದೈಹಿಕ ಶಿಕ್ಷಕರನ್ನು ನೇಮಿಸಿದರೆ ನಮಗೆ ಇನ್ನೂ ಹೆಚ್ಚು ಅನಕೂಲವಾಗುತ್ತದೆ.•ಸ್ವರಸ್ವತಿ ಗಡ್ಡಿ, ಮಾಡಲಗೇರಿ ವಿದ್ಯಾರ್ಥಿನಿ

 

•ಯಚ್ಚರಗೌಡ ವೆಂ ಗೋವಿಂದಗೌಡ್ರ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.