ಕಡಕೋಳದ ಪವಿತ್ರಾಗೆ ಕಂಚಿನ ಪದಕ
Team Udayavani, Feb 20, 2021, 2:46 PM IST
ಗದಗ: ಇಲ್ಲಿನ ಬಿಂಕದಕಟ್ಟಿ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನಡೆಯುತ್ತಿರುವ 17ನೇ ರಾಷ್ಟಿÅàಯ ಸೀನಿಯರ್, ಜ್ಯೂನಿಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ನ ಮೊದಲ ದಿನವಾದ ಶುಕ್ರವಾರ 5 ವಿಭಾಗಗಳಲ್ಲಿ ಸ್ಪರ್ಧೆ ನಡೆದಿದ್ದು, 10 ಸ್ಪರ್ಧಾಳುಗಳು ಜಯ ಸಾಧಿಸಿದ್ದಾರೆ.
ಅಲ್ಲದೇ, ಗದಗ ಜಿಲ್ಲೆ, ಶಿರಹಟ್ಟಿ ತಾಲೂಕು ಕಡಕೋಳ ಗ್ರಾಮದ ಪವಿತ್ರಾ ಕುರ್ತಕೋಟಿ ಇಂಡಿವಿಜುವಲ್ ಟೈಮ್ ಟ್ರಯಲ್ 10ಕಿ.ಮೀ. ದೂರದ 16ವರ್ಷದೊಳಿಗಿನ ಬಾಲಕಿಯರ ವಿಭಾಗದಲ್ಲಿ ತೃತೀಯರಾಗಿ ಗುರಿ ಮುಟ್ಟುವ ಮೂಲಕ ಕಂಚಿನ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿವಿಜುವಲ್ ಟೈಮ್ ಟ್ರಯಲ್ 10ಕಿ.ಮೀ. ದೂರದ 14 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಮಹಾರಾಷ್ಟ್ರದ ಅದೀಪ ವಘಾ(ಪ್ರಥಮ), ಕರ್ನಾಟಕದ ಸಮರ್ಪಣ ಜೈನ್(ದ್ವಿತೀಯ), ಅಸ್ಸಾಂ ರಾಜ್ಯದ ಮಲವ ದತ್ತಾ(ತೃತೀಯ) ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.
ಇಂಡಿವಿಜುವಲ್ ಟೈಮ್ ಟ್ರಯಲ್ 10ಕಿ. ಮೀ. ದೂರದ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರ ಸಿದ್ಧಿ ಶಿರ್ಕೇ(ಪ್ರಥಮ), ಶರವನಿ ಪರಿತ್(ದ್ವಿತೀಯ), ಕರ್ನಾಟಕ ಚಾಯಾ ನಾಗಶೇಟ್ಟಿ ತೃತೀಯರಾಗಿ ಗುರಿ ತಲುಪಿದ್ದಾರೆ. ಇಂಡಿವಿಜುವಲ್ ಟೈಮ್ ಟ್ರಯಲ್ 10ಕಿ. ಮೀ. ದೂರದ 16 ವರ್ಷದೊಳಿಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಕರಿನ್ ಮರ್ಶಲ್
(ಪ್ರಥಮ), ಕೇರಳದ ಅಗಸಾ ಅನ್ನ ಥೊಮಸ್ (ದ್ವಿತೀಯ), ಕರ್ನಾಟಕದ ಗದಗ ಜಿಲ್ಲೆ, ಶಿರಹಟ್ಟಿ ತಾಲೂಕು ಕಡಕೋಳ ಗ್ರಾಮದ ಪವಿತ್ರಾ ಕುರ್ತಕೋಟಿ ತೃತೀಯರಾಗಿ ಗುರಿ ಮುಟ್ಟಿದರು.
ಇಂಡಿಜ್ವಲ್ ಟೈಮ್ ಟ್ರಯಲ್ 10ಕಿ.ಮೀ. ದೂರದ 16 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಕರ್ನಾಟಕದ ಚರಿತ ಗೌಡ(ಪ್ರಥಮ), ಕೇರಳದ ಅದೈಥ್ ಸನ್ಕರ್(ದ್ವಿತೀಯ), ಪಶ್ಚಿಮ ಬಂಗಾಳದ ಸುಧನಸು ಲಿಮಬು(ತೃತೀಯ) ಸ್ಥಾನದಲ್ಲಿ ಗೆಲುವು ಸಾಧಿಸಿದರು.
ಇಂಡಿಜ್ವಲ್ ಟೈಮ್ ಟ್ರಯಲ್ 10ಕಿ.ಮೀ. ದೂರದ 18 ವರ್ಷದೊಳಿಗಿನ ಬಾಲಕರ ವಿಭಾಗದಲ್ಲಿ ಕರ್ನಾಟಕದ ಅಡೋನಿಸ್ ತನಗ್ಪು(ಪ್ರಥಮ), ಕರ್ನಾಟಕ ಹರ್ಷಿತ ಕೆ.ಜೆ.(ದ್ವಿತೀಯ), ಪಶ್ಚಿಮ ಬಂಗಾಳ ರಾಜಕುಮಾರ ರಾಯ್ ತೃತೀಯ ಸ್ಥಾನದಲ್ಲಿ ಗುರಿ ಮುಟ್ಟಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ