ಮುಂಡರಗಿ ಪುರಸಭೆ ಬಿಜೆಪಿ ತೆಕ್ಕೆಗೆ: ಲಮಾಣಿ
•ನಗರ ಸ್ಥಳೀಯ ಸಂಸ್ಥೆ ಚುನಾವಣೆ ಕಣದಲ್ಲಿ ಪ್ರಚಾರ ಜೋರು•ಮನೆ ಮನೆಗೆ ತೆರಳಿ ಮತಯಾಚನೆ
Team Udayavani, May 23, 2019, 10:14 AM IST
ಮುಂಡರಗಿ: ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶಾಸಕ ರಾಮಣ್ಣ ಲಮಾಣಿ ಮತ್ತಿತರರು ಪ್ರಚಾರ ನಡೆಸಿದರು.
ಮುಂಡರಗಿ: ಸ್ಥಳೀಯ ಪುರಸಭೆಯ ಚುನಾವಣೆಯಲ್ಲಿ ಬಿಜೆಪಿಯ 20 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಬಿಜೆಪಿ ಕೈವಶವಾಗಲಿದೆ ಎಂದು ಶಾಸಕ ರಾಮಣ್ಣ ಲಮಾಣಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ 17ನೇ ವಾರ್ಡ್ನ ಹೆಸರೂರು ರಸ್ತೆಯ ಆಶ್ರಯ ಪ್ಲಾಟ್ದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬುಧವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.
ಬಿಜೆಪಿಯ ಆಡಳಿತದ ಅವಧಿಯಲ್ಲಿ ಪುರಸಭೆಯು ಎಲ್ಲ ರೀತಿಯಿಂದ ಅಭಿವೃದ್ಧಿ ಹೊಂದಿರುವುದನ್ನು ಮತದಾರರು ಮರೆತಿಲ್ಲ. ಮತ್ತೆ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಂದಾಗಲಿದ್ದಾರೆ. ಪುರಸಭೆ ಆಡಳಿತವು ಬಿಜೆಪಿ ವಶಕ್ಕೆ ಬರಲಿದೆ. ಪಕ್ಷದ ಬಹುತೇಕ ಅಭ್ಯರ್ಥಿಗಳು ವಿದ್ಯಾವಂತರಾಗಿದ್ದು, ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಮಾದರಿ ಪುರಸಭೆ ಆಗುವಂತೆ ಮಾಡಲಿದ್ದಾರೆ. ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗಳು ಸೇರಿದಂತೆ ಲೋಕಸಭೆಯ ಫಲಿತಾಂಶಗಳು ಬಿಜೆಪಿ ಪರವಾಗಿ ಬರಲಿವೆ. ನರೇಂದ್ರ ಮೋದಿಯವರು ಮತ್ತೂಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ದೇಶ ಮುನ್ನಡೆಸುವರು. ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತವು ಮುಂದುವರಿಯಲಿದೆ ಎಂದರು.
ಕರಬಸಪ್ಪ ಹಂಚಿನಾಳ, ಶಿವಾನಂದ ಬಾರಕೇರ, ರಜನಿಕಾಂತ ದೇಸಾಯಿ, ರಂಗಪ್ಪ ಕೋಳಿ, ವೆಂಕಟೇಶ ತಳವಾರ, ಪ್ರಶಾಂತ ಗುಡದಪ್ಪನವರ, ಸದ್ದಾಂ ಶಿರಗುಪ್ಪ, ಕರಿಯಪ್ಪ ಸೀಮಣ್ಣ, ಬಸವರಾಜ ದೇಸಾಯಿ ಮತ್ತಿತರರು ಪಾಲ್ಗೊಂಡಿದ್ದರು. ನಂತರ ಶಾಸಕರು ಹಾಗೂ ಬಿಜೆಪಿ ಮುಖಂಡರು ಪಟ್ಟಣದ 14, 15ನೇ ವಾರ್ಡ್ಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ