ಮುಸ್ಲಿಂಮರೇ ಇಲ್ಲದ ಗ್ರಾಮದಲ್ಲಿ ಮೊಹರಂ

ಸಾಂಪ್ರದಾಯಿಕ ಹಬ್ಬ ಆಚರಿಸಿ ಭಾವೈಕ್ಯತೆ ಮೆರೆದ ಹಿಂದೂಗಳು ; ಶಾಗೋಟಿಯಲ್ಲಿ ತಲೆತಲಾಂತರಗಳಿಂದ ನಡೆದು ಬಂದ ಸಂಪ್ರದಾಯ

Team Udayavani, Aug 9, 2022, 11:48 AM IST

6

ಗದಗ: ಸಾಮಾನ್ಯವಾಗಿ ಆಯಾ ಸಮುದಾಯದವರು ಅವರವರ ಸಮುದಾಯದ ಹಬ್ಬಗಳನ್ನು ಆಚರಿಸುವುದು ವಾಡಿಕೆ. ಆದರೆ ಮುಸ್ಲಿಮರೇ ಇಲ್ಲದ ಗ್ರಾಮವೊಂದರಲ್ಲಿ ಹಿಂದೂಗಳು ಮೊಹರಂ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸುವ ಮೂಲಕ ಭಾವೈಕ್ಯ ಸಾರುತ್ತಿರುವುದು ವಿಶೇಷ.

ಹೌದು. ಇದಕ್ಕೆ ಸಾಕ್ಷಿಯಾದದ್ದು ಜಿಲ್ಲಾ ಕೇಂದ್ರದಿಂದ ಕೇವಲ ಇಪ್ಪತ್ತು ಕಿಲೋ ಮೀಟರ್‌ ದೂರದಲ್ಲಿರುವ ಶಾಗೋಟಿ ಗ್ರಾಮ. ಇಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಆದರೆ ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬಗಳೇ ಇಲ್ಲ.

ಈ ಗ್ರಾಮದಲ್ಲಿ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳೇ ಒಂದು ಸುಂದರ ಮಸೀದಿ ನಿರ್ಮಿಸಿದ್ದಾರೆ. ಲಕ್ಷಾಂತರ ರೂ. ಖರ್ಚು ಮಾಡಿ ಸಾಗವಾಣಿ ಕಟ್ಟಿಗೆಯಿಂದ 1954 ರಲ್ಲೇ ಡೋಲಿ-ಪಾಂಜಾ ತಯಾರಿಸಿದ್ದಾರೆ. ಅಷ್ಟೇ ಅಲ್ಲ ಇಲ್ಲಿ ಪ್ರತಿ ವರ್ಷ ಮೊಹರಂ ಹಬ್ಬವನ್ನು ಶ್ರದ್ಧಾ- ಭಕ್ತಿಯಿಂದ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿದ್ದಾರೆ. ಗ್ರಾಮದಲ್ಲಿ ಶಾಲಾ ಮಕ್ಕಳಿಂದ ಹಿಡಿದು ಯುವಕರು, ವೃದ್ಧರು ತಮ್ಮ ಕೈಗಳಿಗೆ ಕೆಂಪು ಲಾಡಿ ಕಟ್ಟಿಕೊಳ್ಳುವ ಮೂಲಕ ಫಕೀರರಾಗುತ್ತಾರೆ.

ಐದು ದಿನಗಳ ಕಾಲ ನಡೆಯುವ ಈ ಹಬ್ಬದ ಸಂದರ್ಭದಲ್ಲಿ ಪಕ್ಕದ ಚಿಕ್ಕಹಂದಿಗೋಳ ಗ್ರಾಮದಿಂದ “ಮೌಲಾನಾ(ಧರ್ಮಗುರು)ರನ್ನು ಕರೆಯಿಸಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ. ಪ್ರತಿ ದಿನ ಬೆಳಿಗ್ಗೆ-ಸಂಜೆ ಎರಡೂ ಹೊತ್ತು ಗ್ರಾಮದ ಮಹಿಳೆಯರು ಮಡಿಯಿಂದ ದೇವರಿಗೆ ನೈವೇದ್ಯ ಸಲ್ಲಿಸಿ ಭಕ್ತಿಯಿಂದ ನಮಿಸುತ್ತಾರೆ.

ಗ್ರಾಮದಲ್ಲಿರುವ ಆಂಜನೇಯ, ಈಶ್ವರ, ಮೈಲಾರಲಿಂಗ ದೇವಸ್ಥಾನದ ಪಕ್ಕದಲ್ಲೇ ಈ ಮಸೀದಿ ನಿರ್ಮಿಸಿರುವುದು ಮತ್ತೂಂದು ವಿಶೇಷ.

ಮುಸ್ಲಿಮರಿಲ್ಲದಿದ್ದರೂ ಮೊಹರಂ ಆಚರಣೆ ಮುಂದುವರಿಸಿಕೊಡು ಧರ್ಮ ಸಾಮರಸ್ಯ, ಕೋಮು ಸೌಹಾರ್ದತೆ ಮೆರೆಯುವ ಇಂಥ ಹಳ್ಳಿಗಳು ಇಂದಿನ ದಿನಗಳಲ್ಲಿ ದೇಶದಲ್ಲಿ ವಿರಳಾತಿವಿರಳ ಎನ್ನಬಹುದು.

ಶಾಗೋಟಿ ಗ್ರಾಮದಲ್ಲಿ ನನ್ನ ತಾತ-ಮುತ್ತಜ್ಜ ಪ್ರತಿ ವರ್ಷ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದರು. ಐದು ದಿನಗಳ ಕಾಲ ಗ್ರಾಮದಲ್ಲೇ ಉಳಿದುಕೊಂಡು ಪೂಜೆ ನೆರವೇರಿಸಲಾಗುತ್ತದೆ. ಪ್ರತಿದಿನ ಭಕ್ತರು ತಮ್ಮ ಮನೆಗೆ ಆಹ್ವಾನಿಸಿ ಊಟೋಪಚಾರ ಮಾಡುತ್ತಾರೆ. ಗ್ರಾಮಸ್ಥರು ಅಣ್ಣ-ತಮ್ಮಂದಿರಂತೆ ನೋಡಿಕೊಳ್ಳುತ್ತಾರೆ. –ಮುಕ್ತುಂಸಾಬ್‌ ಮುಲ್ಲಾನವರ, ಮೌಲಾನಾ, ಚಿಕ್ಕಹಂದಿಗೋಳ ಗ್ರಾಮ

ಈ ಸಂಪ್ರದಾಯ ನಮ್ಮ ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು ಬಂದಿದೆ. ನಮಗೆ ಆ ಧರ್ಮ, ಈ ಧರ್ಮ ಅಂತ ಭೇದಭಾವ ಇಲ್ಲ. ಎಲ್ಲರೂ ಒಂದೇ. ಈ ಕಾರಣಕ್ಕಾಗಿ ಇಲ್ಲಿ ಮುಸ್ಲಿಂ ಸಮಾಜದ ಯಾರೂ ಇರದಿದ್ದರೂ ನಾವೇ ಮೊಹರಂ ಹಬ್ಬ ಆಚರಿಸಿಕೊಂಡು ಹೋಗುತ್ತಿದ್ದೇವೆ. –ಮಾರ್ತಾಂಡಗೌಡ ನೀಲಪ್ಪಗೌಡರ, ಶಾಗೋಟಿ ಗ್ರಾಮದ ಹಿರಿಯರು

ಮೊಹರಂ ಹಬ್ಬದಂದು ಡೋಲಿ ಪಾಂಜಾಗಳ ಅದ್ಧೂರಿ ಮೆರವಣಿಗೆ ನಡೆಯುತ್ತದೆ. ಊರಿನ ಪ್ರತಿಯೊಬ್ಬರೂ ಹಬ್ಬದಲ್ಲಿ ಪಾಲ್ಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಮಜಲು, ಅಲಾವಿ ಕುಣಿತದ ಮೂಲಕ ಮೆರವಣಿಗೆ ನಡೆಸಿ ದೇವರನ್ನು ಹೊಳೆಗೆ ಕಳುಹಿಸಲಾಗುತ್ತದೆ. –ಮಂಜುನಾಥ ಕೊರ್ಲಹಳ್ಳಿ, ಶಾಗೋಟಿ ಗ್ರಾಮಸ್ಥ.

-ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.