ಬೆಂಬಲ ಬೆಲೆ ಖರೀದಿ ನಿಯಮದಲ್ಲೇ ಗೊಂದಲ
ದೃಢೀಕರಣ ಮಾಡುವವರ ಯಡವಟ್ಟಿನಿಂದ ತೊಂದರೆ ರೈತರಿಗೆ ಅಲೆದಾಡುವ ಪರಿಸ್ಥಿತಿ
Team Udayavani, Feb 13, 2020, 1:53 PM IST
ಮುಳಗುಂದ: ಉತ್ಪನ್ನಗಳನ್ನು ಸರ್ಕಾರ ಸಹಕಾರಿ ಸಂಘಗಳ ಮೂಲಕ ಖರೀದಿ ಮಾಡುವ ಪ್ರಕ್ರಿಯೆಯಲ್ಲಿ ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವಾಗ ಹಲವು ಲೋಪದೋಷಗಳು ಉಂಟಾಗಿ ಗೊಂದಲ ಮೂಡಿಸಿದೆ. ಹೀಗಾಗಿ ಇತ್ತ ಮಾರಲು ಆಗದೆ, ಅತ್ತ ಸಂಗ್ರಹಣೆ ಮಾಡಿ ಇಟ್ಟುಕೊಳ್ಳಲು ಆಗದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಬಲ ಬೆಲೆ ಕೇಂದ್ರದಲ್ಲಿ ಮಾರಾಟ ಮಾಡಲು ರೈತರು ಬೆಳೆ ದೃಢೀಕರಣ ಪತ್ರವನ್ನು ಸಲ್ಲಿಸಬೇಕಾಗಿದ್ದು, ಇದಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಪ್ರೂಟ್ ಆ್ಯಪ್ ಮೂಲಕ ರೈತರು ತಮ್ಮ ಬೆಳೆ ದೃಢೀಕರಣ ಪತ್ರ ಸಲ್ಲಿಸಬೇಕಾಗಿದ್ದು, ಆದರೆ ಹಲವು ರೈತರು ಜಮೀನುಗಳಲ್ಲಿ ಬೆಳೆ ದೃಢೀಕರಣ ಮಾಹಿತಿ ತಪ್ಪಾಗಿ ನಮೂದಾಗಿದೆ. ಶೇಂಗಾ, ಕಡಲೆ ಬದಲು ಹತ್ತಿ, ಮೆಣಸಿನಕಾಯಿ, ಇರುಳ್ಳಿ,ಗೋವಿನಜೋಳ ಎಂದು ನಮೂದಾಗಿದ್ದು, ದೃಢೀಕರಣ ಮಾಡುವವರ ಯಡವಟ್ಟಿನಿಂದಾಗಿ ರೈತರು ಬೆಂಬಲ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಲು ನಿಯಮ ಅಡ್ಡಿಯಾಗಿದೆ.
ಬೆಂಬಲ ಬೆಲೆಯಲ್ಲಿ ಬಳ್ಳಿ ಶೇಂಗಾವನ್ನು ಪ್ರತಿಯೊಬ್ಬ ರೈತ 15 ಕ್ವಿಂಟಾಲ್ ಮಾತ್ರ ಮಾರಾಟ ಮಾಡಲು ಅವಕಾಶವಿದ್ದು, ಹೆಚ್ಚಿನ ಉತ್ಪನ್ನ ಬೆಳೆದ ರೈತರು ಬೆಂಬಲ ಬೆಲೆಯ ಲಾಭ ಪಡೆಯಲು ಅವಕಾಶವಿಲ್ಲದಂತಾಗಿದೆ. ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಶೇಂಗಾ ಹಾಗೂ ಹಿಂಗಾರು ಹಂಗಾಮಿನ ಕಡಲೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ರೈತರು ಸರ್ಕಾರದ ಈ ನಿಯಮಗಳಿಂದ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ