ಮುಂಡರಗಿ: ಆದಾಯ ತೆರಿಗೆಯಿಂದ ದೇಶದ ಆರ್ಥಿಕ ಬೆಳವಣಿಗೆ

ಯಾವುದೇ ವಸ್ತುವಿಗೆ ತೆರಿಗೆ ಹಾಕುವಾಗ ಅದು ಜನತೆಗೆ ಹೊರೆ ಆಗುವಂತೆ ಇರಬಾರದು.

Team Udayavani, Jun 30, 2023, 2:11 PM IST

ಮುಂಡರಗಿ: ಆದಾಯ ತೆರಿಗೆಯಿಂದ ದೇಶದ ಆರ್ಥಿಕ ಬೆಳವಣಿಗೆ

ಮುಂಡರಗಿ: ರೈತರು ದೇಶದ ಬೆನ್ನೆಲುಬು. ಅದರಂತೆ, ತೆರಿಗೆದಾರರು ಕೂಡಾ ಈ ದೇಶದ ಬೆನ್ನೆಲುಬು ಇದ್ದಂತೆ. ವ್ಯಾಪಾರಸ್ಥರು,
ಉದ್ಯೋಗಿಗಳು ಆದಾಯ ತೆರಿಗೆ, ಜಿಎಸ್‌ಟಿ ಕಟ್ಟಿದರೆ ಮಾತ್ರ ದೇಶದ ಆರ್ಥಿಕ ಬೆಳವಣಿಗೆಯಾಗಲಿದೆ ಎಂದು ಗದಗ
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಧುಸೂದನ್‌ ಪುಣೇಕರ ಹೇಳಿದರು.

ಪಟ್ಟಣದ ಕ.ರಾ.ಬೆಲ್ಲದ ಕಾಲೇಜಿನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಲಾಗಿದ್ದ ಭಾರತದಲ್ಲಿ ವಿವಿಧ ತೆರಿಗೆ ಪದ್ಧತಿಗಳು ಎನ್ನುವ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವ್ಯಾಪಾರ ವಹಿವಾಟು ನಡೆಸುವವರು ಸರ್ಕಾರಕ್ಕೆ ತೆರಿಗೆ ಕಟ್ಟಲೇಬೇಕು. ವಿವಿಧ ವ್ಯಾಪಾರಗಳಿಗೆ ವಿವಿಧ ರೀತಿಯ
ತೆರಿಗೆಗಳಿರುತ್ತವೆ. ಅವುಗಳನ್ನು ಸಂಬಂಧಪಟ್ಟವರು ತಪ್ಪದೇ ಕಟ್ಟಬೇಕು. ಎಲ್ಲರೂ ತೆರಿಗೆ ಕಟ್ಟುವುದರಿಂದ ನಮ್ಮ ದೇಶದ
ಆರ್ಥಿಕ ಅಭಿವೃದ್ಧಿಗೆ ಮುಖ್ಯವಾಗುತ್ತದೆ.

ಮುಂಬರುವ ದಿನಗಳಲ್ಲಿ ಎಲ್ಲರೂ ದೊಡ್ಡ ದೊಡ್ಡ ಉದ್ಯೋಗಿಗಳಾಗಿ, ದೇಶಕ್ಕೆ ತೆರಿಗೆ ಕಟ್ಟುವ ಮೂಲಕ ದೇಶದ ಅಭಿವೃದ್ಧಿಗೆ
ಮುಂದಾಗಬೇಕಾಗಿದೆ. ಮುಂಡರಗಿ ಪಟ್ಟಣದಲ್ಲಿ ತಾಲೂಕು ಮಟ್ಟದ ವಾಣಿಜ್ಯೋದ್ಯಮ ಸಂಸ್ಥೆ ತೆರೆಯಲು ಇಲ್ಲಿನ
ವ್ಯಾಪಾರಸ್ಥರು, ಮುಖಂಡರು ಆಸಕ್ತಿ ತೋರಿದ್ದು, ಅದಕ್ಕಾಗಿ ಒಂದು ಕಚೇರಿ ಮಾಡಲು ಸ್ಥಳಾವಕಾಶ ಮಾಡಿಕೊಟ್ಟರೆ, ಶೀಘ್ರ ಪ್ರಾರಂಭಿಸಿ ಉದ್ಘಾಟಿಸಬಹುದು ಎಂದರು.

ಆಡಳಿತಾಧಿಕಾರಿ ಡಾ|ಬಿ.ಜಿ.ಜವಳಿ ಮಾತನಾಡಿ, ನಾಗರಿಕತೆಯ ಕುರುಹು ಎಂದರೆ ತೆರಿಗೆ. ಸಾರ್ವಜನಿಕರು ಕಟ್ಟಿದ ತೆರಿಗೆಯನ್ನು ಸರ್ಕಾರ ಮತ್ತೆ ಸಾರ್ವಜನಿಕರ ಅಭಿವೃದ್ಧಿಗಾಗಿಯೇ ನೀಡುತ್ತದೆ. ಸಾರ್ವಜನಿಕರ ಒಳಿತಿಗಾಗಿ ತೆರಿಗೆ ಸಂಗ್ರಹ ಮಾಡುವುದು
ಪುರಾತನ ಕಾಲದಿಂದಲೂ ಜಾರಿಯಲ್ಲಿದೆ.

2 ಸಾವಿರ ವರ್ಷಗಳ ಹಿಂದೆಯೇ ತೆರಿಗೆ ಪ್ರಾರಂಭಿಸಲಾಗಿದೆ. ಯಾವುದೇ ವಸ್ತುವಿಗೆ ತೆರಿಗೆ ಹಾಕುವಾಗ ಅದು ಜನತೆಗೆ ಹೊರೆ
ಆಗುವಂತೆ ಇರಬಾರದು. ಭಾರತೀಯ ತೆರಿಗೆ ಪದ್ಧತಿ ಬಹಳಷ್ಟು ಸಂಕೀರ್ಣವಾಗಿದ್ದು, ಅದನ್ನು ಒಂದಿಷ್ಟು ಸರಳೀಕರಣ ಮಾಡಬೇಕು. ಅಂದಾಗ ಜನತೆ ತೆರಿಗೆ ಕಟ್ಟಲು ಅನುಕೂಲವಾಗುತ್ತದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಜ|ನಾಡೋಜ ಡಾ|ಅನ್ನದಾನೀಶ್ವರ ಮಹಾಶಿವಯೋಗಿಗಳು ಮಾತನಾಡಿ, ಪ್ರತಿಯೊಬ್ಬರೂ ಸಹ ತೆರಿಗೆ
ಕೊಡುವಂತಹ ಪದ್ಧತಿ ನಿರಂತರವಾಗಿ ಮುಂದುವರೆಯಬೇಕು. ಯಾರೂ ಅದರಿಂದ ತಪ್ಪಿಸಿಕೊಳ್ಳಬಾರದು. ನಾವು ಮಾಡುವ
ಕಾರ್ಯಗಳಿಗೆ ಅನುಗುಣವಾಗಿ ಸರ್ಕಾರಕ್ಕೆ ತೆರಿಗೆ ಸಲ್ಲಿಸಬೇಕಾಗುತ್ತದೆ. ಮೊದಲು ನಾವು ಸರ್ಕಾರಕ್ಕೆ ತೆರಿಗೆ ಕಟ್ಟುವುದು, ನಂತರ ನಮಗೆ ಸರ್ಕಾರ ಮತ್ತೆ ಅದೇ ಹಣವನ್ನು ಅಭಿವೃದ್ಧಿಗಾಗಿ ನೀಡುವುದು ಈ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು ಎಂದರು.

ಆರ್‌.ಎಲ್‌.ಪೊಲೀಸ್‌ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಕುಂದ್‌ ಪೋತ್ನಿàಸ್‌, ಡಿ.ಬಿ.ಸಜ್ಜನರ, ಕರಬಸಪ್ಪ
ಹಂಚಿನಾಳ, ನಾಗೇಶ ಹುಬ್ಬಳ್ಳಿ, ಪ್ರಾ.ಡಿ.ಸಿ.ಮಠ, ವೀರನಗೌಡ ಗುಡದಪ್ಪನವರ, ತಿಮ್ಮಪ್ಪ ದಂಡೀನ, ಡಾ.ಅಮರೇಶ ಶಿವಶೆಟ್ಟರ, ಅಶೋಕ ಅಂಗಡಿ, ಎಂ.ಎಸ್‌.ಶಿವಶೆಟ್ಟರ,ಅಮೀನಸಾಬ್‌ ಬಿಸನಳ್ಳಿ, ಪ್ರೊ.ಎನ್‌.ಹನುಮಂತಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪ್ರಾ.ಆರ್‌. ಎಚ್‌.ಜಂಗನವಾರಿ ಸ್ವಾಗತಿಸಿ, ಡಾ.ಸಂತೋಷ ಹಿರೇಮಠ ನಿರೂಪಿಸಿದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.