ನೂರಾರು ಎಕರೆ ಪ್ರದೇಶ ಬೆಳೆ ಹಾನಿ
ರೈತರಿಗೆ ಗಾಯದ ಮೇಲೆ ಬರೆ ಎಳೆದ ವರುಣ
Team Udayavani, Apr 8, 2020, 1:48 PM IST
ಮುಂಡರಗಿ: ತಾಲೂಕಿನಲ್ಲಿ ರವಿವಾರ ರಾತ್ರಿ ಬೀಸಿದ ಗಾಳಿ, ಮಳೆಯಿಂದಾಗಿ ನೂರಾರು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ನೆಲಕ್ಕೆ ಉರುಳಿದೆ. ಇದರಿಂದಾಗಿ ಭತ್ತ ಬೆಳೆದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಭತ್ತದ ಬೆಳೆ ನೆಲಕ್ಕೆ ಉರುಳಿರುವುದರಿಂದಾಗಿ ಭತ್ತದ ಇಳುವರಿ ಕುಂಠಿತಗೊಳ್ಳುವ ಆತಂಕದಲ್ಲಿ ರೈತರು ಇದ್ದಾರೆ.
ಇದರಿಂದ ಭತ್ತದ ಬೆಳೆಯಿಂದ ಲಾಭದ ನಿರೀಕ್ಷೆಯಲ್ಲಿದ್ದ ರೈತರು ನಷ್ಟ ಅನುಭವಿಸುವಂತಾಗಿದೆ. ತಾಲೂಕಿನ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ 400 ಎಕರೆ, ಹಮ್ಮಿಗಿಯಲ್ಲಿ 500 ಎಕರೆ, ಶಿಂಗಟಾಲೂರಿನಲ್ಲಿ 800 ಎಕರೆಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಭತ್ತದ ಬೆಳೆ ನೆಲಕ್ಕುರುಳಿದೆ. ಇದರಿಂದಾಗಿ ಭತ್ತದ ಬೆಳೆಯಲ್ಲಿ ಶೇ.75ರಷ್ಟು ಇಳುವರಿಯಲ್ಲಿ ಹಾನಿ ಉಂಟಾಗಲಿದೆ. ಭತ್ತದ ಬೆಳೆಯಲ್ಲಿ ಬರೀ ರೈತರಿಗೆ ಶೇ. 25ರಷ್ಟು ಮಾತ್ರ ಇಳುವರಿ ಬರಲಿದ್ದು, ಇದರಿಂದ ಭತ್ತ ಬೆಳೆ ರೈತರು ನಷ್ಟ ಅನುಭವಿಸುವಂತೆ ಆಗಿದೆ.
ನಮ್ಮ ಗದ್ದೆಯಲ್ಲಿ ಬೆಳೆದ ಭತ್ತ ಮಳೆ ಗಾಳಿಯಿಂದ ನೆಲಕ್ಕುರುಳಿದೆ. ನಲವತ್ತು ಎಕರೇ ಪ್ರದೇಶದಲ್ಲಿ ಇದ್ದ ಬೆಳೆ ನೆಲಕ್ಕೆ ಮಲಗಿದ್ದು, ಅಂದಾಜು 10 ಲಕ್ಷ ರೂ. ನಷ್ಟ ಆಗಿದೆ ಎಂದು ಕೋರ್ಲಹಳ್ಳಿ ರೈತ ವೀರಣ್ಣ ಮಜ್ಜಗಿ ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ