ಲಿಂ|ತೋಂಟದ ಸಿದ್ಧಲಿಂಗ ಶ್ರೀ ಕಂಚಿನ ಪುತ್ಥಳಿ ಅನಾವರಣ ಇಂದು

ಸ್ವಾಮೀಜಿ ನಾಲ್ಕನೇ ಪುಣ್ಯಸ್ಮರಣೆ ಪ್ರಯುಕ್ತ ಲಿಂಗಾಯತ ಷಟಸ್ಥಲ ತತ್ವದ ಶಿಲಾಮಂಟಪ ನಿರ್ಮಾಣ

Team Udayavani, Oct 6, 2022, 11:59 AM IST

10

ಮುಂಡರಗಿ: ತಾಲೂಕಿನ ಡಂಬಳ ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ 19ನೇ ಪೀಠಾಧಿ ಪತಿಯಾಗಿದ್ದ ಲಿಂ|ಡಾ|ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ನಾಲ್ಕನೇ ಪುಣ್ಯಸ್ಮರಣೆ ಅಂಗವಾಗಿ ಲಿಂಗಾಯತ್‌ ಷಟ್‌ಸ್ಥಲ ತತ್ವದ ಆಧಾರದ ಮೇಲೆ ನಿರ್ಮಿಸಿರುವ ಶಿಲಾಮಂಟಪದಲ್ಲಿ ಲಿಂ.ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ಕಂಚಿನ ಪುತ್ಥಳಿ ಸಾಂಕೇತಿಕವಾಗಿ ಅ.6ರಂದು ಗುರುವಾರ ಮುಂಜಾನೆ ಅನಾವರಣಗೊಳ್ಳಲಿದೆ.

ಡಂಬಳದಲ್ಲಿ ತೋಂಟದಾರ್ಯ ಮಠದ ಸಮೀಪ ಬಸ್‌ ನಿಲ್ದಾಣದ ಪಕ್ಷದಲ್ಲಿಯೇ ಶಿಲಾಮಂಟಪ ನಿರ್ಮಿಸಲಾಗಿದೆ. ಈ ಶಿಲಾಮಂಟಪವದಲ್ಲಿ ಲಿಂ.ಶ್ರೀ ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ಕಂಚಿನ ಪುತ್ಥಳಿಯನ್ನು ಡಾ.ತೋಂಟದ ಸಿದ್ದರಾಮ ಮಹಾಸ್ವಾಮೀಜಿ ನೇತೃತ್ವದಲ್ಲಿ ನಾಡಿನ ಹರಗುರುಚರಮೂರ್ತಿಗಳು ಸಾಂಕೇತಿಕವಾಗಿ ಲೋಕಾರ್ಪಣೆಗೊಳಿಸಲಿದ್ದಾರೆ. ಕನ್ನಡ ನಾಡಿನ ಸಾಕ್ಷಿಪ್ರಜ್ಞೆಯಾಗಿ ಜನಮಾನಸದಲ್ಲಿ ಜನಪ್ರಿಯರಾಗಿ ಜನಮಾನಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ಲಿಂ.ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ನೆನಪು ಜನರು, ಭಕ್ತ ಸಮೂಹದ ಮಧ್ಯೆ ಶಾಶ್ವತಗೊಳಿಸಲು ತೋಂಟದಾರ್ಯ ಮಠದ ವತಿಯಿಂದ ನಿರ್ಮಿಸಲಾಗಿರುವ ಕಂಚಿನ ಪ್ರತಿಮೆ ಸಾಂಕೇತಿಕವಾಗಿ ಉದ್ಘಾಟನೆಗೊಳ್ಳಲಿದೆ.

ಲಿಂಗಾಯತ ತಾತ್ವಿಕತೆಯ ಶಿಲಾ ಮಂಟಪ: ಡಂಬಳದಲ್ಲಿ ಭಕ್ತರ ಇಚ್ಛೆಯ ಮೇರೆಗೆ ಲಿಂಗಾಯತ ತತ್ವದ ಷಟಸ್ಥಲಗಳ ಆಧಾರದ ಮೇಲೆ ಶಿಲಾ ಮಂಟಪ ನಿರ್ಮಾಣಗೊಂಡಿದೆ. ಲಿಂಗಾಯತ ಮೂಲಾ ಧಾರಗಳಾದ ಷಟಸ್ಥಲದ ಭಕ್ತ, ಮಹೇಶ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯಸ್ಥಲ ಸೂಚಿಸುವ ಆರು ಶಿಲಾಕಂಬಗಳ ಆಧಾರದ ಮೇಲೆ ಶಿಲಾಮಂಟಪ ನಿರ್ಮಾಣಗೊಂಡಿದೆ. ಈ ಶಿಲಾಮಂಟ ಪದ ಮಧ್ಯೆದಲ್ಲಿ ಲಿಂ.ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ನಿಂತಿರುವ ಭಂಗಿಯಲ್ಲಿ ಇರುವ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ.

ಕಂಚಿನ ಪುತ್ಥಳಿ: ಬೆಂಗಳೂರಿನಲ್ಲಿ 14 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕಂಚಿನಲ್ಲಿ ನಿರ್ಮಾಣಗೊಂಡಿರುವ ಲಿಂ.ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿಯವರ ನಿಂತಿರುವ ಭಂಗಿಯಲ್ಲಿ ಇರುವ ಕಂಚಿನ ಪುತ್ಥಳಿ 8.50 ಕ್ವಿಂಟಲ್‌ ಭಾರವಿದೆ. ಈ ಕಂಚಿನ ಪುತ್ಥಳಿ ಲಿಂ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿಯವರು ನಿಂತಿರುವ ಭಂಗಿಯಲ್ಲಿ 7 .4 ಫೂಟ್‌ ಎತ್ತರವಾಗಿದೆ. ಈ ಪುತ್ಥಳಿಯನ್ನು 16/16 ಫೂಟ್‌ಗಳ ಮೇಲೆ ನಿರ್ಮಿಸಿರುವ ಸಿಮೆಂಟಿನ ಬುನಾದಿಯ ಮೇಲೆ 21ಫೂಟ್‌ ಎತ್ತರದ ಶಿಲಾಮಂಟಪ ನಿಂತಿದೆ. ಮುಂಬರುವ ದಿನಗಳಲ್ಲಿ ನಾಡಿನ ಸಾಕ್ಷಿಪ್ರಜ್ಞೆ, ಸೌಹಾರ್ದಯತೆಯ ಹರಿಕಾರರು, ಲಿಂಗಾಯತದ ನಿಜ ಸಾಕಾರದಲ್ಲಿ ಮೈದಳೆದ ಲಿಂ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿಯವರ ನೆನಪು ಭಕ್ತರ ಮನದಲ್ಲಿ ಶಾಶ್ವತವಾಗಿ ಉಳಿಯುವಂತೆ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳ್ಳಲಿದೆ.

ಕನ್ನಡ ನಾಡು ಕಂಡ ಅಪರೂಪದ ಮಹಾಸ್ವಾಮೀಜಿ ಲಿಂ|ಡಾ|ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಕಂಚಿನ ಪುತ್ಥಳಿ ಸಾಂಕೇತಿಕವಾಗಿ ಲೋಕಾರ್ಪಣೆಗೊಳ್ಳುತ್ತಿರುವುದು ಭಕ್ತರ ಮನದಲ್ಲಿ ಹರ್ಷವನ್ನುಂಟು ಮಾಡಿದೆ. ಲಿಂಗಾಯತ ಆಶಯದ ಷಟಸ್ಥಲದ ಮೇಲೆ ಕಂಚಿನ ಪುತ್ಥಳಿ ಶಿಲಾಮಂಟಪದಲ್ಲಿ ಶಾಶ್ವತವಾಗಿ ನೆಲೆಗೊಳ್ಳಲಿದೆ.  – ಜಿ.ವಿ.ಹಿರೇಮಠ, ಡಂಬಳ ತೋಂಟದಾರ್ಯ ಮಠದ ವ್ಯವಸ್ಥಾಪಕರು

-ಹು.ಬಾ.ವಡ್ಡಟ್ಟಿ

 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.