ದಿಂಡಿ ಪಾದಯಾತ್ರಿಗಳಿಗೆ ಭೈರನಹಟಿಯಲ್ಲಿ ಆತಿಥ್ಯ

ವಾರಿ ಸಂಪ್ರದಾಯದ ಪಂಢರಪುರ ವಿಠ್ಠಲನ ಭಕ್ತರಿಗೆ ವಿರಕ್ತಮಠದಲ್ಲಿ ಆಶ್ರಯ-ಅನ್ನದಾಸೋಹ

Team Udayavani, Oct 29, 2022, 3:27 PM IST

16

ನರಗುಂದ: ಪಂಢರಪುರಕ್ಕೆ ಪಾದಯಾತ್ರೆ ಕೈಗೊಂಡ ವಾರಿ ಸಂಪ್ರದಾಯದ ದಿಂಡಿ ಪಾದಯಾತ್ರಿಗಳಿಗೆ ಮಾರ್ಗಮಧ್ಯೆ ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಆದರಾತಿಥ್ಯ ನೀಡಲಾಯಿತು.

ವಿರಕ್ತಮಠಕ್ಕೆ ಆಗಮಿಸಿದ ದಿಂಡಿ ಪಾದಯಾತ್ರಿಗಳು ಕಥಾ-ಕೀರ್ತನ-ಅಭಂಗಗಳನ್ನು ಪಠಿಸಿ, ಶ್ರೀಮಠದಲ್ಲಿ ಸಿದ್ಧಪಡಿಸಿದ್ದ ಪ್ರಸಾದ ಸ್ವೀಕರಿಸಿದ ನಂತರ ಕೆಲಕಾಲ ವಿಶ್ರಮಿಸಿ ಮುಂದೆ ಸಾಗಿದರು. ಇದು ಪ್ರತಿವರ್ಷ ಪಂಢರಪುರ ಯಾತ್ರಾರ್ಥಿಗಳಿಗೆ ಶ್ರೀಮಠದಿಂದ ನೀಡಲಾಗುವ ಸಾಂಪ್ರದಾಯಿಕ ಆದರಾತಿಥ್ಯ.

ಇಲ್ಲಿ ಪ್ರತಿ ವರ್ಷ ಲಕ್ಷ್ಮೇಶ್ವರ, ಕೋಣನ ತಂಬಿಗೆ, ಹಲುವಾಗಲು, ಅಲ್ಲಾಪೂರ, ಹರಪ್ಪನಹಳ್ಳಿ, ಯಲ್ಲಾಪೂರ ಹೀಗೆ ಇನ್ನೂ ಅನೇಕ ದಿಂಡಿ ಪಾದಯಾತ್ರಿಗಳು, ಹಾಗೆಯೇ, ಹುಬ್ಬಳ್ಳಿ ಸಿದ್ಧಾರೂಡಮಠ, ಯಲ್ಲಮ್ಮನಗುಡ್ಡ, ಬನಶಂಕರಿ ಮುಂತಾದ ಅನೇಕ ಪುಣ್ಯ ಕ್ಷೇತ್ರಗಳಿಗೆ ಪಾದಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ದಶಕಗಳಿಂದ ಶ್ರೀಮಠ ಅನ್ನದಾಸೋಹದ ಮೂಲಕ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿದೆ.

ವಾರಕರಿ ಸಂಪ್ರದಾಯ ಮಹಾರಾಷ್ಟ್ರದಲ್ಲಿ ಪ್ರಾರಂಭವಾದ ಹಿಂದೂ ಸಂಸ್ಕೃತಿಯ ಒಂದು ಭಾಗ. ಭಕ್ತಿ ಚಳವಳಿಯಾಗಿ ರೂಪುಗೊಂಡು 13ನೇ ಶತಮಾನದಿಂದ 18ನೇ ಶತಮಾನದವರೆಗೆ 600 ವರ್ಷಗಳ ಕಾಲ ಮಹಾರಾಷ್ಟ್ರ ಜನಸಾಮಾನ್ಯರ ಜೀವನದಲ್ಲಿ ಅಗಾಧ ಪರಿಣಾಮ ಬೀರಿದ ಆಧ್ಯಾತ್ಮಿಕ ಸಂಪ್ರದಾಯ ವಾರಕರಿ ಎಂದು ಹೇಳಲಾಗುತ್ತದೆ.

ವಾರಕರಿ ಎಂದರೆ ಸಾಮಾನ್ಯವಾಗಿ ಯಾತ್ರೆ ಮಾಡುವವರು ಎಂದರ್ಥ. ಭಕ್ತಿ ಮಾರ್ಗದಲ್ಲಿ ಯಾತ್ರೆ ಮಾಡುವವರೆಲ್ಲರೂ ವಾರಕರಿ ಸಂಪ್ರದಾಯದವರು. ಇವರ ಆರಾಧ್ಯ ದೈವ ಪಂಢರಪುರದ ವಿಠ್ಠಲ. ಇದು ಶ್ರೀಕೃಷ್ಣನ ಇನ್ನೊಂದು ರೂಪ ಎಂದು ಪೌರಾಣಿಕ ಹಿನ್ನೆಲೆಯಿಂದ ತಿಳಿದು ಬರುತ್ತದೆ.

ದಿಂಡಿ ಪಾದಯಾತ್ರೆ ಉದ್ದೇಶ: ವಿಠ್ಠಲನ ಆರಾಧನೆಯೊಂದಿಗೆ ಜಾತೀಯತೆ ಮೀರಿ ಎಲ್ಲರೂ ಆ ದಿಂಡಿಯಲ್ಲಿ ಸಮಾನತೆ, ಮಾನವೀಯತೆ ಶಾಂತಿ, ಸಹಬಾಳ್ವೆ, ಅಹಿಂಸೆಯಿಂದ ಪರಸ್ಪರ ಒಬ್ಬರಿಗೊಬ್ಬರು ತಲೆಬಾಗುವಿಕೆಯಿಂದ ಎಲ್ಲರೂ ಸಮಾನರು ಎಂದು ತೋರಿಸುವ ಆಧ್ಯಾತ್ಮಿಕ ಚಳವಳಿ ಎನ್ನಲಾಗಿದೆ.

ನೈತಿಕ ನಡವಳಿಕೆ, ಮದ್ಯಪಾನ, ತಂಬಾಕು ದೂರವಿಡುವಲ್ಲಿ ಕಟ್ಟುನಿಟ್ಟಿನ ಆಚಾರ ವಿಚಾರಗಳನ್ನು ಪಾಲಿಸಲಾಗುತ್ತದೆ. ಮುಖ್ಯವಾಗಿ ಸಾತ್ವಿಕ ಆಹಾರ ಸೇವನೆ, ಏಕಾದಶಿ ದಿನದಂದು ಈರುಳ್ಳಿ, ಬೆಳ್ಳುಳ್ಳಿ ಸ್ವೀಕರಿಸದೇ ಇರುವುದು ಇವರು ಸಂಪ್ರದಾಯದ ಭಾಗವಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದ ಏಕಾದಶಿಯಂದು ಪಾದಯಾತ್ರೆ ಮೂಲಕ ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಾರೆ. ಇದು ಭಾರತೀಯ ಹಿಂದೂ ಸಂಸ್ಕೃತಿಯ ಬಹುದೊಡ್ಡ ಆಧ್ಯಾತ್ಮಿಕ ಪಾದಯಾತ್ರೆ.

ದೊರೆಸ್ವಾಮಿ ವಿರಕ್ತಮಠ ಸೇವೆ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ತಾಲೂಕಿನ ಭೈರನಹಟ್ಟಿ ಗ್ರಾಮದ ಚಿಕ್ಕ ಮಠ ದೊರೆಸ್ವಾಮಿ ವಿರಕ್ತಮಠ. ಹಲವಾರು ವರ್ಷಗಳಿಂದ ಗ್ರಾಮದಲ್ಲಿ ಆಧ್ಯಾತ್ಮಿಕ ಚಿಂತನೆಗಳೊಂದಿಗೆ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕನ್ನಡಪರ ಕೈಂಕರ್ಯಗಳೊಂದಿಗೆ ಶ್ರೀಮಠ ಜನಸಾಮಾನ್ಯರಿಗೆ ಜಾತಿ-ಮತ-ಪಂಥ ಭೇದವನ್ನರಿಯದೆ ಸರ್ವರನ್ನೂ ಸಮಾನವಾಗಿ ಕಾಣುತ್ತಿರುವ ಕೋಮು ಸೌಹಾರ್ದತೆಯ ಪ್ರತಿರೂಪದಂತೆ ಕಂಗೊಳಿಸುತ್ತಿದೆ. ಅಲ್ಲದೇ, ದಿಂಡಿ ಪಾದಯಾತ್ರಿಗಳಿಗೆ ಆದರಾತಿಥ್ಯ ನೀಡುವ ಮೂಲಕ ಭಕ್ತಸಾಗರದಲ್ಲಿ ವಿಶೇಷ ಛಾಪು ಮೂಡಿಸುತ್ತಿದೆ.

ವಾರಿ ಸಂಪ್ರದಾಯ 13ನೇ ಶತಮಾನದಲ್ಲಿ ಪ್ರಾರಂಭವಾದ ಒಂದು ಬಹುದೊಡ್ಡ ಆಧ್ಯಾತ್ಮಿಕ ಚಳವಳಿ. ಜಾತಿ, ವರ್ಗ, ವರ್ಣ ರಹಿತ ಯಾತ್ರೆ ಇದಾಗಿದೆ. ಇಂತಹ ವಿಶಿಷ್ಟ ಪರಂಪರೆ ಹೊಂದಿರುವ ವಾರಕರಿ ಸಂಪ್ರದಾಯದವರು ನೂರಾರು ವರ್ಷಗಳಿಂದ ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.  -ಶ್ರೀ ಶಾಂತಲಿಂಗ ಸ್ವಾಮೀಜಿ, ದೊರೆಸ್ವಾಮಿ ವಿರಕ್ತಮಠ, ಭೈರನಹಟ್ಟಿ

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.