ನರಗುಂದ: ಸೌಹಾರ್ದತೆ ಗಟ್ಟಿಗೊಳಿಸಿದ “ರೊಟ್ಟಿ ಜಾತ್ರೆ’

ಸಂಕಲ್ಪದಂತೆ ಜಾತ್ರೆ ಹಲವಾರು ಜನೋಪಯೋಗಿ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದೆ.

Team Udayavani, Jan 31, 2024, 6:05 PM IST

ನರಗುಂದ: ಸೌಹಾರ್ದತೆ ಗಟ್ಟಿಗೊಳಿಸಿದ “ರೊಟ್ಟಿ ಜಾತ್ರೆ’

ಉದಯವಾಣಿ ಸಮಾಚಾರ
ನರಗುಂದ: ಉತ್ತರ ಕರ್ನಾಟಕದಲ್ಲಿ “ರೊಟ್ಟಿಜಾತ್ರೆ’ ಎಂದೇ ಖ್ಯಾತಿ ಹೊಂದಿದ ಶಿರೋಳ ತೋಂಟದಾರ್ಯಮಠದ ಜಾತ್ರಾ
ಮಹೋತ್ಸವವು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ತಾವೂ ಉಂಡು, ಇತರರಿಗೂ ಉಣಿಸುವ ದಾಸೋಹ ಪರಂಪರೆ ಬೆಳೆಸಿದೆ.
ಹತ್ತಾರು ಸಾವಿರ ಜನರು ಬಿಳಿಜೋಳದ ಖಡಕ್‌ ರೊಟ್ಟಿ, ಎಳ್ಳು ಹಚ್ಚಿದ ಸಜ್ಜಿ ರೊಟ್ಟಿ, ಬಾನ, ವಿವಿಧ ತರಕಾರಿಗಳಿಂದ ತಯಾರಿಸಿದ ಕರಿ ಹಿಂಡಿ ಹೀಗೆ ವಿವಿಧ ಪದಾರ್ಥಗಳಿರುವ ರೊಟ್ಟಿ ಊಟದ ಪ್ರಸಾದ ಸೇವಿಸಿ ಸಂಭ್ರಮಿಸುವುದು ವಾಡಿಕೆ.

ರೊಟ್ಟಿ ಊಟ ಜನಪ್ರಿಯ: ಮೊದ ಮೊದಲು ಸಣ್ಣ ಪ್ರಮಾಣದಲ್ಲಿ ಆರಂಭಗೊಂಡ ರೊಟ್ಟಿ ಊಟದ ಜಾತ್ರೆ ಈಗ ಜನಪ್ರಿಯಗೊಂಡಿದೆ. ಸುಮಾರು 15ಕ್ಕೂ ಹೆಚ್ಚು ಚೀಲ ಜೋಳದಿಂದ ತಯಾರಿಸಿದ 50 ರಿಂದ 70 ಸಾವಿರಕ್ಕೂ ಹೆಚ್ಚು ಜೋಳದ ರೊಟ್ಟಿಗಳು ಖರ್ಚಾಗುತ್ತವೆ. ಜಾತ್ರೆ 2ನೇ ದಿನ ರೊಟ್ಟಿ ಊಟದ ಜಾತ್ರೆಗೆ 15 ದಿನಗಳಿಂದ ತಯಾರಿ ನಡೆದಿರುತ್ತದೆ. ಕೊಡುಗೈ ದಾನಿಗಳಿಂದ ಸಂಗ್ರಹಿಸಿ ಜೋಳ, ಸಜ್ಜಿ ಹಿಟ್ಟು ಮಾಡಿಸಿ ಶಿರೋಳ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಜಾತಿ ಭೇದ ಎನಿಸದೇ ಮನೆ
ಮನೆಗೆ ರೊಟ್ಟಿ ಹಿಟ್ಟು ಹಾಕಲಾಗುತ್ತದೆ. ಹಿಟ್ಟು ಹಾಕಿಸಿಕೊಂಡವರೆಲ್ಲ ತಮ್ಮಿಷ್ಟದಂತೆ ತಮ್ಮವೂ ಹತ್ತಿಪ್ಪತ್ತು ರೊಟ್ಟಿ ಸೇರಿಸಿ ಶ್ರೀಮಠಕ್ಕೆ ತಲುಪಿಸುತ್ತಾರೆ.

ಶ್ರೀಮಠದ ರೊಟ್ಟಿ ಜಾತ್ರೆ ಪರಂಪರೆಯನ್ನು ಲಿಂ|ತೋಂಟದ ಡಾ|ಸಿದ್ಧಲಿಂಗ ಶ್ರೀಗಳ ಮಾರ್ಗದರ್ಶನದಲ್ಲಿ ಲಿಂ| ಗುರುಬಸವ
ಸ್ವಾಮಿಗಳು ಮುನ್ನಡೆಸಿಕೊಂಡು ಬಂದರು. ಗುರುಬಸವ ಜನಕಲ್ಯಾಣ ಸಂಸ್ಥೆ ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದೆ. ಪೂಜ್ಯರೀರ್ವರು ಲಿಂಗೈಕ್ಯರಾದ ನಂತರ ಇಂದಿನ ಡಾ|ತೋಂಟದ  ಸಿದ್ಧರಾಮ ಶ್ರೀಗಳು ಮುಂದುವರಿಸಿಕೊಂಡು ಬಂದರು.ಸದ್ಯ ಶಿರೋಳ ತೋಂಟದಾರ್ಯ ಮಠಕ್ಕೆ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ
ಶ್ರೀ ಶಾಂತಲಿಂಗ ಶ್ರೀಗಳನ್ನು ಪೀಠಾಧಿಪತಿಯಾಗಿ ನೇಮಿಸಿ ಅಧಿಕಾರ ಹಸ್ತಾಂತರಿಸಿ ಮಾರ್ಗದರ್ಶನ ನೀಡುತ್ತಿದ್ದಾರೆ.

ಇಡೀ ಉತ್ತರ ಕರ್ನಾಟಕದಲ್ಲೇ ಭಾವೈಕ್ಯತೆ ಬೀಜ ಬಿತ್ತುವ ಜತೆಗೆ ಸೌಹಾರ್ದತೆಗೆ ಹೆಸರಾದ ರೊಟ್ಟಿಜಾತ್ರೆ ತೋಂಟದ ಡಾ|ಸಿದ್ಧರಾಮ ಸ್ವಾಮಿಗಳ ಸಾನ್ನಿಧ್ಯದಲ್ಲಿ ಜರಗುತ್ತಿದೆ. ಶಿರೋಳ ಸದ್ಭಕ್ತರ ಸಂಕಲ್ಪದಂತೆ ಜಾತ್ರೆ ಹಲವಾರು ಜನೋಪಯೋಗಿ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದೆ.
ಶ್ರೀ ಶಾಂತಲಿಂಗ ಸ್ವಾಮಿಗಳು,
ತೋಂಟದಾರ್ಯ ಮಠ, ಶಿರೋಳ

*ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.