ಮಲಪ್ರಭಾ ತಟದಲ್ಲಿ ಗಂಗಾ-ಪರಮೇಶ್ವರ ಪೂಜೆ


Team Udayavani, Jan 15, 2019, 10:04 AM IST

15-january-17.jpg

ನರಗುಂದ: ಮಕರ ಸಂಕ್ರಮಣ ಅಂಗವಾಗಿ ಕೊಣ್ಣೂರ ಹಾಗೂ ಸುತ್ತ ಗ್ರಾಮಗಳ ಗಂಗಾಮತಸ್ಥ ಸಮಾಜದಿಂದ ಗ್ರಾಮದ ಬಳಿ ಮಲಪ್ರಭಾ ನದಿ ತೀರದಲ್ಲಿ ಸೋಮವಾರ ಮರಳಿನಿಂದ ವಿಶೇಷವಾಗಿ ತಯಾರಿಸಿದ ಗಂಗಾ-ಪರಮೇಶ್ವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಂಕ್ರಮಣವನ್ನು ಸಡಗರದಿಂದ ಆಚರಿಸಲಾಯಿತು.

ಪ್ರಾಚೀನ ರಾಮೇಶ್ವರ ದೇವಸ್ಥಾನ ಬಳಿ ಮಲಪ್ರಭಾ ದಂಡೆಯಲ್ಲಿ ಕಲಾವಿದನ ಕೈಚಳಕದಲ್ಲಿ ಸುಂದರವಾಗಿ ತಯಾರಿಸಿದ ಗಂಗಾ ಪರಮೇಶ್ವರಿ ಮೂರ್ತಿಗೆ ಪೂಜಾ ಕೈಂಕರ್ಯದಲ್ಲಿ ಬೆಳಗ್ಗೆಯಿಂದ ಕೊಣ್ಣೂರು, ವಾಸನ,ಬೆಳ್ಳೇರಿ, ಲಖಮಾಪುರ ಗ್ರಾಮಗಳ ಎಲ್ಲ ಸಮಾಜ ಬಾಂಧವರು, ಯುವಕ-ಯುವತಿಯರು ಪಾಲ್ಗೊಂಡು ಗಂಗಾ ಪರಮೇಶ್ವರಗೆ ಪೂಜೆ ಸಲ್ಲಿಸಿ ಸೂರ್ಯ ನಮಸ್ಕಾರ ಹಾಕಿದರು.

ಬೆಳ್ಳೇರಿ ಶಿವಾನಂದ ಮಠದ ಸಚ್ಚಿದಾನಂದ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಅಥಣಿ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಿತು. ಗಂಗಾಮತಸ್ಥ ಸಮಾಜ ಅಧ್ಯಕ್ಷ ಬಸಪ್ಪ ಶಿರಹಟ್ಟಿ, ತಾಪಂ ಸದಸ್ಯ ಟಿ.ಬಿ. ಶಿರಿಯಪ್ಪಗೌಡ್ರ, ಎಪಿಎಂಸಿ ಸದಸ್ಯ ಶಂಕರಗೌಡ ಯಲ್ಲಪ್ಪಗೌಡ್ರ, ವಾಸನ ಗ್ರಾಪಂ ಅಧ್ಯಕ್ಷ ಶ್ರೀಕಾಂತಯ್ಯ ಹಿರೇಮಠ, ಮುರಗಯ್ಯ ಹಿರೇಮಠ, ತುಳಸೀಗೇರಿ ಸೋಮಾಪುರ, ಮಲ್ಲಪ್ಪ ಕರಿಯಪ್ಪನವರ, ಈರಣ್ಣ ಶಿರಸಂಗಿ, ಅರವಿಂದ ದೀಕ್ಷಿತ, ಭರಮ್ಮ ಬಾರಕೇರ, ಯಲ್ಲಪ್ಪ ಕಾಣಿಕರ, ಹನಮಂತ ಕಟ್ಟಿಮನಿ, ಬಸಪ್ಪ ಕಟ್ಟಿಮನಿ, ಫಕೀರಪ್ಪ ಸುಣಗಾರ, ಬಸವರಾಜ ಅಂಬಿಗೇರ, ಚನ್ನಪ್ಪ ಶಿರಹಟ್ಟಿ, ನಿಂಗಪ್ಪ ಹಿರೇಹೊಳಿ, ಬಸವರಾಜ ಬಾರಕೇರ, ಹನಮಂತ ಅಂಬಿಗೇರ, ತಾಪಂ ಮಾಜಿ ಅಧ್ಯಕ್ಷೆ ಭೀಮವ್ವ ಶಿರಹಟ್ಟಿ ಮುಂತಾದವರು ಪಾಲ್ಗೊಂಡಿದ್ದರು. ಅಚ್ಚುಕಟ್ಟು ಪ್ರದೇಶದ ಜೀವನಾಡಿ ಮಲಪ್ರಭೆಗೆ ಪೂಜೆ ಸಲ್ಲಿಸಿದ ಬಳಿಕವೇ ನಾವಿಕ ವೃತ್ತಿ ನಡೆಸುತ್ತಿದ್ದ ವಿಶಿಷ್ಟ ಹಿನ್ನೆಲೆ ಇಲ್ಲಿನ ಗಂಗಾಮತಸ್ಥ ಸಮಾಜಕ್ಕಿದೆ. ಹೀಗಾಗಿ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜೀವನದಿ ಮಲಪ್ರಭೆ ತಟದಲ್ಲಿ ಗಂಗಾ ಪರಮೇಶ್ವರ ಪೂಜೆಗೆ ದಶಕಗಳ ಇತಿಹಾಸವಿದೆ.

ಮೂಲತಃ ನಾವಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಸಮಾಜ ಬಾಂಧವರು ಪ್ರತಿವರ್ಷ ಸಂಕ್ರಮಣ ದಿನ ಗಂಗಾ ಪರಮೇಶ್ವರಗೆ ಪೂಜಿಸಿದ ಬಳಿಕ ನದಿಯಲ್ಲಿ ನಾವಿಕ ವೃತ್ತಿ ಪ್ರಾರಂಭಿಸುತ್ತಿದ್ದರು ಎನ್ನಲಾಗಿದೆ. ಕಳೆದ 14 ವರ್ಷದಿಂದ ಈ ಕಾರ್ಯಕ್ರಮ ಸಂಭ್ರಮದಿಂದ ಆಚರಿಸುತ್ತಿದ್ದು, ಎಲ್ಲ ಸಮಾಜ ಬಾಂಧವರು ಒಗ್ಗಟ್ಟಿನಿಂದ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.

ಕಳಸಾ-ಬಂಡೂರಿಗೆ ಹರಕೆ
ಗಂಗಾಮತಸ್ಥ ಸಮಾಜದಿಂದ ಈ ಬಾರಿ ವಿಶೇಷವಾಗಿ ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಶೀಘ್ರ ಅನುಷ್ಠಾನಗೊಂಡು ಮಲಪ್ರಭೆ ಒಡಲು ತುಂಬಲಿ, ಇದರಿಂದ ಈ ಭಾಗದ ಸಮಸ್ತ ರೈತ ಬಾಂಧವರ ಬದುಕು ಹಸನಾಗಲಿ ಎಂದು ಮಲಪ್ರಭೆಯ ಗಂಗಾ ಮಾತೆಗೆ ಹರಕೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.