ನರಗುಂದ: ಸಾಹಿತ್ಯ ಲೋಕದ ಮಿನುಗುತಾರೆ ಬೇಂದ್ರೆ-ಶ್ರೀ ಶಾಂತಲಿಂಗ ಸ್ವಾಮಿ


Team Udayavani, Feb 3, 2024, 5:55 PM IST

ನರಗುಂದ:ಸಾಹಿತ್ಯ ಲೋಕದ ಮಿನುಗುತಾರೆ ಬೇಂದ್ರೆ-ಶ್ರೀ ಶಾಂತಲಿಂಗ ಸ್ವಾಮಿ

ಉದಯವಾಣಿ ಸಮಾಚಾರ
ನರಗುಂದ: ಬೇಂದ್ರೆಯವರು ಸಾಹಿತ್ಯದ ಮೂಲಕ ಸಾಮಾಜಿಕ ಸಮನ್ವಯತೆ ಪರಿಕಲ್ಪನೆಯನ್ನು ನೀಡಿದ ಸಾಮರಸ್ಯದ ಕವಿ ಎಂದು ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ವರಕವಿ ಡಾ| ದ.ರಾ. ಬೇಂದ್ರೆ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ನರಬಲಿ ಕವನದ ಮೂಲಕ ಸ್ವಾತಂತ್ರ್ಯ ಜಾಗೃತಿ ಮೂಡಿಸಿ ಸ್ವಾತಂತ್ರ್ಯಚಳವಳಿಗೆ ಪುಷ್ಟಿ ನೀಡಿದರು ಎಂದರು.

ಬ್ರಿಟಿಷರ ಕೋಪಕ್ಕೆ ಬಲಿಯಾಗಿ ಜೈಲುವಾಸ ಅನುಭವಿಸಿದ್ದ ಬೇಂದ್ರೆಯವರು ಕಷ್ಟಗಳ ಕುಲುಮೆಯಲ್ಲಿ ಬೆಂದು ಅರಳಿನಿಂತ ಅಪೂರ್ವ ಪ್ರತಿಭೆ. ಅಪ್ಪಟ ಗ್ರಾಮೀಣ ಸೊಗಡಿನಲ್ಲಿ ರಚಿಸಿದ ಅವರ ಸಾಹಿತ್ಯ ಎಲ್ಲವನ್ನೂ ಒಳಗೊಂಡಿದೆ.

ಕಿತ್ತು ತಿನ್ನುವ ಬಡತನದಲ್ಲಿ ಸಾಧನೆ ಶಿಖರವನ್ನೇರಿದ ಬೇಂದ್ರೆಯವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ಕಷ್ಟಗಳನ್ನು ಸಾಹಿತ್ಯದ ಮೂಲಕ ಹೊರಹಾಕಿದ್ದಾರೆ ಎಂದು ಅಭಿಪ್ರಾಯ ಪಟ್ಟರು. ಅವರ ಸಾಹಿತ್ಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಬೇಂದ್ರೆಯವರ ಸಾಹಿತ್ಯ ಪ್ರತಿಯೊಬ್ಬರು ಓದಲೇಬೇಕು. ಸಾಧನಕೇರಿ ಪರಿಸರ ಬೇಂದ್ರೆ ಅವರ ಸಾಧನೆಯಿಂದ ಸಾಧನೆಕೇರಿಯಾಗಿದೆ.

ಹೀಗಾಗಿ ಅವರನ್ನು ಕನ್ನಡ ಸಾಹಿತ್ಯ ಲೋಕದ ಮಿನುಗುತಾರೆ ಎಂದು ಶ್ರೀಗಳು ಬಣ್ಣಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಗುರುನಾಥ ಹೂಗಾರ ಮಾತನಾಡಿ, ಬೇಂದ್ರೆಯವರ ಮಾತೃಭಾಷೆ ಮರಾಠಿಯಾಗಿದ್ದರೂ ನಿರೀಕ್ಷೆಗೂ ಮೀರಿ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಸಾಮಾನ್ಯರ ಜನಜೀವನ, ನೋವು-ನಲಿವು, ಮಿಡಿತ-ತುಡಿತಗಳನ್ನು ಕವನಗಳಲ್ಲಿ ಮೂಡಿಸಿದ
ಮಹತ್ವದ ಕವಿಗಳಲ್ಲಿ ಬೇಂದ್ರೆ ಅಗ್ರಗಣ್ಯರು ಎಂದು ಹೇಳಿದರು.

ಇಂತಹ ಕವಿಗಳ ಕವನಗಳನ್ನು ವಿದ್ಯಾರ್ಥಿಗಳು ಹೆಚ್ಚಾಗಿ ಓದಬೇಕಾಗಿದೆ. ಬದುಕಿನಲ್ಲಿ ಎದುರಾಗುವ ಕಷ್ಟಗಳೊಂದಿಗೆ ಚೆನ್ನಾಗಿ ಬೆಂದರೆ ಮಾತ್ರ ಬೇಂದ್ರೆ ಆಗಲು ಸಾಧ್ಯ. ಅಂಬಿಕಾತನಯದತ್ತ ಎಂಬ ಕಾವ್ಯನಾಮದಿಂದ ಕನ್ನಡ ಸಾಹಿತ್ಯವನ್ನು ರಾಷ್ಟ್ರಮಟ್ಟದಲ್ಲಿ ಉತ್ತುಂಗಕ್ಕೇರಿಸಿದ ಕೀರ್ತಿ ಅಂಬಿಕಾತಯನದತ್ತ ಸಲ್ಲುತ್ತದೆ ಎಂದರು.

ಕೇತ್ರ ಸಮನ್ವಯಾಧಿಕಾರಿ ಬಿ.ಎಫ್‌. ಮಜ್ಜಗಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎನ್‌. ಆರ್‌. ನಿಡಗುಂದಿ ಹಾಗೂ ಶಿಕ್ಷಕರಾದ ಝೆಡ್‌. ಎಮ್‌. ಖಾಜಿ, ಪಿ.ಸಿ. ಕಲಹಾಳ, ಎಸ್‌.ಜಿ. ಮಣ್ಣೂರಮಠ, ವೀರಭದ್ರಪ್ಪ ಅಣ್ಣಿಗೇರಿ, ಎಸ್‌. ಎಲ್‌. ಮರಿಗೌಡ್ರ, ನಿವೃತ್ತ ಮುಖ್ಯ ಶಿಕ್ಷಕ ವೀರಯ್ಯ ಸಾಲಿಮಠ ಇದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.