ಗ್ರಾಮೀಣರಿಗೆ ಖಾತ್ರಿ ಯೋಜನೆಯೇ ಜೀವಾಳ
ಕೋವಿಡ್ ದಿಂದ ಉದ್ಯೋಗವಿಲ್ಲದೇ ಕಂಗಾಲಾದ ಗ್ರಾಮೀಣ ಜನರಿಗೆ ಆಸರೆ
Team Udayavani, Apr 17, 2021, 7:43 PM IST
ರೋಣ: ಕಳೆದ 14 ತಿಂಗಳಿಂದ ಕೊರೊನಾ ಕರಿ ನೆರಳಲ್ಲಿ ಉದ್ಯೋಗವಿಲ್ಲದೇ ಕಂಗಾಲಾಗಿರುವ ಗ್ರಾಮೀಣ ಬಡ ಕುಟುಂಬಗಳಿಗೆ ಮತ್ತು ರಾಜ್ಯದ ವಿವಿಧ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸದ್ಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯೇ ಜೀವಾಳವಾಗಿದೆ. ಖಾತ್ರಿ ಯೋಜನೆಯಡಿ ಸದ್ಯ ತಾಲೂಕಿನಾದ್ಯಂತ ಕಳೆದ 7 ದಿನಗಳಿಂದ ರೈತರ ಹೊಲಗಳಲ್ಲಿ ಬದು ನಿಮಾರ್ಣ ಕಾಮಗಾರಿ ಭರದಿಂದ ಸಾಗಿದೆ.
ದಿನಕ್ಕೆ 289ರೂ. ಪಗಾರ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಡಿ ನಡೆಯುವ ನರೇಗಾ ಯೋಜನೆಯಲ್ಲಿ ಗಂಡು-ಹೆಣ್ಣು ಎಂಬ ಭೇದವಿಲ್ಲದೇ ತಲಾ ಒಬ್ಬರಿಗೆ 289 ರೂ. ಸಮಾನ ವೇತನ ನೀಡಲಾಗುತ್ತಿದ್ದಾರೆ. ದೊಡ್ಡ ದೊಡ್ಡ ರೈತರ ಜಮೀನಿನಲ್ಲಿ ಬೆಳಗ್ಗೆಯಿಂದ ಸಾಯಂಕಾಲದವರೆಗೆ ಕೆಲಸ ಮಾಡಿದರೆ 200ರೂ. ಸಂಬಳ ನೀಡುತ್ತಾರೆ. ಆದರೆ ನರೇಗಾ ಯೋಜನೆಯಲ್ಲಿ ಫಲಾನುಭವಿಗಳಿಗೆ ನೀಡಿದ ಅಳತೆಯಷ್ಟು ತೆಗ್ಗು ತೆಗೆದರೆ ಸಾಕು ಒಂದು ದಿನದ ವೇತನ 289 ರೂ.ಜಮಾ ಮಾಡಲಾಗುತ್ತಿದೆ.
ರೈತರಿಗೂ ಲಾಭ: ಹೌದು, ನರೇಗಾ ಯೋಜನೆ ಕೇವಲ ದುಡಿಯುವ ಕಾರ್ಮಿಕರಿಗಷ್ಟೇ ಲಾಭಲಾದಯಕವಾಗಿಲ್ಲ. ಬದಲಾಗಿ ಗ್ರಾಮೀಣ ಭಾಗದ ರೈತರಿಗೂ ಲಾಭದಾಯಕವಾಗಿದೆ. ಒಂದು ಎಕರೆ ಪ್ರದೇಶಕ್ಕೆ ಸುಮಾರು 10 ಸಾವಿರ ರೂ. ವೆಚ್ಚದಲ್ಲಿ ಬದು ನಿಮಾರ್ಣ ಮಾಡಲಾಗುತ್ತಿದೆ. ಇದರಿಂದ ರೈತರ ಜಮೀನಿನಲ್ಲಿ 10/10 ಅಳತೆಯ ತೆಗ್ಗು ತೆಗೆಯುವುದರಿಂದ ಅಲ್ಲಿ ಬರುವ ಮಣ್ಣನ್ನು ಬದುವಿಗೆ ಹಾಕುತ್ತಾರೆ. ರೈತರ ಜಮೀನುಗಳಿಂದ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ರೈತರ ಹೊಲಗಳಲ್ಲಿ ಉಳಿಯುವಂತೆ ಮಾಡುವ ಮಹತ್ವದ ಯೋಜನೆ ಇದಾಗಿದೆ.
1050 ಕಾರ್ಮಿಕರಿಗೆ ಉದ್ಯೋಗ: ಪ್ರತಿ ಗ್ರಾಪಂ ಮಟ್ಟದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ಭರದಿಂದ ಸಾಗಿವೆ. ತಾಲೂಕಿನ ಮಾಡಲಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಏಳು ದಿನಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಆರಂಭವಾಗಿದೆ. ಪ್ರತಿನಿತ್ಯ ಗಂಡು-ಹೆಣ್ಣು ಸೇರಿ ಸುಮಾರು 1050 ಜನರಿಗೆ ಉದ್ಯೋಗ ನೀಡುತ್ತಿದ್ದಾರೆ. ಗ್ರಾಮದಲ್ಲಿ ಇರುವ ಜನಸಂಖ್ಯೆಯಲ್ಲಿ ಶೇ.90ರಷ್ಟು ಜನರಿಗೆ ಉದ್ಯೋಗ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ