‘ಕಳಕಾಪುರ’ದತ್ತ ಇಲ್ಲ ‘ಕಾಳಜಿ’
ಚುನಾವಣೆ ಬಂದಾಗ ಗ್ರಾಮದ ನೆನಪು ಗ್ರಾಮಕ್ಕಿಲ್ಲ ಸಮರ್ಪಕ ಸಾರಿಗೆ ವ್ಯವಸ್ಥೆ
Team Udayavani, Mar 28, 2019, 5:42 PM IST
ನರೇಗಲ್ಲ: ಕಳಕಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಚರಂಡಿ ನೀರು ನಿಂತಿರುವುದು
ನರೇಗಲ್ಲ: ಚುನಾವಣೆ ಸಮಯದಲ್ಲಿ ಮತದಾರರಿಗೆ ಹಲವು ರೀತಿಯ ಆಶ್ವಾಸನೆನೀಡಿ ಮತ ಪಡೆಯುವ ಜನಪ್ರತಿನಿಧಿಗಳು ಗೆದ್ದ ಮೇಲೆ ಅತ್ತ ಕಡೆ ತಲೆಯೂ ಹಾಕುವುದಿಲ್ಲ ಎಂಬುದಕ್ಕೆ ಕಳಕಾಪುರ ಗ್ರಾಮವೇ ಸಾಕ್ಷಿಯಾಗಿದೆ.
ಹೊಸಳ್ಳಿ ಗ್ರಾಮ ಪಂಚಾಯತ್ಗೆ ಒಳಪಡುವ ಈ ಗ್ರಾಮ ಮೂವರು ಗ್ರಾಪಂ ಸದಸ್ಯರನ್ನು ಹೊಂದಿದೆ. ಈ ಗ್ರಾಮ ಇಟಗಿ ತಾಪಂ ಕ್ಷೇತ್ರ ಹಾಗೂ ನಿಡಗುಂದಿ ಜಿಪಂ ವಿಭಾಗಕ್ಕೆ ಒಳಪಟ್ಟಿದ್ದು, ಮೂಲ ಸೌಲಭ್ಯ ಮಾತ್ರ ಮರೀಚಿಕೆಯಾಗಿದೆ.
1200 ಮತದಾರರನ್ನು ಹೊಂದಿರುವ ಗ್ರಾಮ ಸರ್ಕಾರಿ ಪ್ರೌಢಶಾಲೆ ಇದೆ. ಗ್ರಾಮದಲ್ಲಿ ಅ ಧಿಕ ಕುಟುಂಬಗಳು ಕೃಷಿ ಅವಲಂಬಿಸಿವೆ. ಗ್ರಾಮಸ್ಥರಿಗೆ ಮಾರುಕಟ್ಟೆ ಅನಿವಾರ್ಯತೆ ಇದೆ. ಆದರೆ ಇಂದಿಗೂ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸಂಚಾರವಿಲ್ಲ. ಹೀಗಾಗಿ ಇಲ್ಲಿನ ನಿವಾಸಿಗಳಿಗೆ
ಕಾಲ್ನಡಿಗೆಯೇ ಅನಿವಾರ್ಯವಾದಂತಾಗಿದೆ. ಅಧಿಕಾರಿಗಳು-ಜನಪ್ರತಿನಿಧಿಗಳು ಸಾರಿಗೆ ಸೌಲಭ್ಯ ನೀಡುವ ಗೋಜಿಗೆ ಹೋಗಿಲ್ಲ.
ಚರಂಡಿ ದುರ್ವಾಸನೆ: ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಅನೇಕ ಗ್ರಾಮಗಳು ಅಭಿವೃದ್ಧಿಯತ್ತ ಹೆಜ್ಜೆ ಹಾಕಿದ್ದು, ಈ ಗ್ರಾಮವು ಇದಕ್ಕೆ ವಿರುದ್ಧ ಎನ್ನುವಂತಿದೆ. ಮುಖ್ಯವಾಗಿ ಗ್ರಾಮವನ್ನು ಸಂಪರ್ಕಿಸುತ್ತಿದ್ದಂತೆ ಚರಂಡಿ ದುರ್ವಾಸನೆ ಬೀರುತ್ತದೆ. ಇಲ್ಲಿ ರಸ್ತೆ ಯಾವುದೋ.. ಚರಂಡಿ ಯಾವುದೋ ಎಂಬುದೇ
ತಿಳಿಯದಂತಾಗಿದೆ. ರಸ್ತೆಯಲ್ಲಿ ಅಳವಾದ ತಗ್ಗುಗಳು ಬಿದ್ದಿದ್ದರೂ ಇತ್ತ ಯಾರೂ ಗಮನ ಹರಿಸಿಲ್ಲ.
ಹೆಸರಿಗೆ ಮಾತ್ರ ಶುದ್ಧ ಕುಡಿವ ನೀರಿನ ಘಟಕ: ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹೆಸರಿಗೆ ಮಾತ್ರ ಇದ್ದು, ಇಂದಿಗೂ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದು, ನಿರ್ವಹಣೆಯಿಲ್ಲದೆ ಶುದ್ಧ ನೀರು ಪೂರೈಕೆ ಸ್ಥಗಿತಗೊಂಡಿದೆ. ಇದರ ಜವಾಬ್ದಾರಿ ವಹಿಸಿಕೊಂಡಿರುವ ಭೂ ಸೇನಾ ನಿಗಮವು ನಮಗೂ ಘಟಕಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದೆ.
ಗ್ರಾಮದ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅ ಧಿಕಾರಿಗಳಿಗೆ ತಿಳಿಸಿದ್ದೇವೆ. ಇಲ್ಲಿಯವರೆಗೂ ಯಾರೂ ಗ್ರಾಮದತ್ತ ಬಂದಿಲ್ಲ. ಚುನಾವಣೆಗಳು ಬಂದಾಗ ಮಾತ್ರ ಜನಪ್ರತಿನಿಧಿಗಳಿಗೆ ಕಳಕಾಪುರ ನೆನಪಾಗುತ್ತದೆ. ನಂತರ ಯಾರೂ ಇತ್ತ ನೋಡುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಕಳೆದ ಒಂದೂವರೆ ತಿಂಗಳಿಂದ ಹೊಸಳ್ಳಿ ಗ್ರಾಪಂ ಅಧಿಕಾರ ವಹಿಸಿಕೊಂಡಿದ್ದೇನೆ. ಕೂಡಲೇ
ಕಳಕಾಪುರ ಗ್ರಾಮಕ್ಕೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಬಗ್ಗೆಹರಿಸಲು ಪ್ರಯತ್ನಿಸುತ್ತೇನೆ.
ಲೋಹಿತ್, ಗ್ರಾಪಂ ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ