ಸಮರ್ಪಕ ನೀರು ಪೂರೈಸಲು ಜಿಲ್ಲಾಧಿಕಾರಿ ಸೂಚನೆ
ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಿಸಿ
Team Udayavani, Apr 15, 2020, 6:35 PM IST
ನರೇಗಲ್ಲ: ಪಪಂ ಕಾರ್ಯಾಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನರೇಗಲ್ಲ: ಸ್ಥಳೀಯ ಪಪಂ ಕಾರ್ಯಾಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ, ಕುಡಿಯುವ ನೀರು ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ ಹಾಗೂ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮುಖ್ಯಾಧಿಕಾರಿ ಎಂ.ಎ. ನುರಾಲ್ಲಾಖಾನ ಅವರನ್ನು ತರಾಟೆಗೆ ತಗೆದುಕೊಂಡು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಮೇಲಿಂದ ಮೇಲೆ ಜಿಲ್ಲಾದಳಿತ ಕಚೇರಿಗೆ ದೂರುಗಳು ಬರುತ್ತಿವೆ. ಈಗಾಗಲೇ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಯೋಜನೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಸಮರ್ಪಕವಾಗಿ ಬಳಕೆ ಮಾಡಬೇಕು. ಪಟ್ಟಣದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ನಿರ್ಲಕ್ಷ್ಯ
ಧೋರಣೆ ಸಲ್ಲದು. ಕೂಡಲೇ ಪಟ್ಟಣದಲ್ಲಿರುವ ಖಾಸಗಿ ಕೊಳವೆ ಬಾವಿಗಳ ಮಾಲೀಕರ ಸಭೆ ನಡೆಸಿ, ಅವರಿಂದ ಕೊಳವೆಬಾವಿಗಳನ್ನ ಬೇಸಿಗೆ ಮುಗಿಯುವರೆಗೂ ಇಲಾಖೆಗೆ ಪಡೆದುಕೊಳ್ಳಿ. ಅದಕ್ಕೆ ಅನುದಾನವನ್ನು ನೀಡುವುದಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಅಲ್ಲದೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಾರದೊಳಗೆ ಸರಬರಾಜು ನೀರು ಮಾಡುವಂತೆ ಡಿಬಿಟಿಒ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು