ಗದಗ ಜಿಮ್ಸ್‌-ರೋಣ ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಕಳೆದ ಒಂದು ವರ್ಷದಿಂದ ಪುನಃ ಜಿಮ್ಸ್‌ ಆಸ್ಪತ್ರೆ ಗದಗ ಇಲ್ಲಿಗೆ ಸ್ಥಳಾಂತರಿಸಲಾಯಿತು.

Team Udayavani, May 23, 2023, 6:39 PM IST

ಗದಗ ಜಿಮ್ಸ್‌-ರೋಣ ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಗದಗ: ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವಲ್ಲಿ ಹೆಸರುವಾಸಿಯಾದ ಗದಗ ಜಿಮ್ಸ್‌ ಆಸ್ಪತ್ರೆ ಹಾಗೂ ರೋಣ ಪಟ್ಟಣದ ಡಾ| ಪಂಡಿತ್‌ ಭೀಮಸೇನ್‌ ಜೋಶಿ ತಾಲೂಕು ಆಸ್ಪತ್ರೆಯು ಲಕ್ಷ್ಯ ಕಾರ್ಯಕ್ರಮದಡಿ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತ ಸರ್ಕಾರದ ಅಧೀನದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಮಕ್ಕಳ ಅಧಿಕಾರಿಗಳು ಗದಗ ಜಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದನ್ವಯ ಹೆರಿಗೆ ಕೊಠಡಿಯ ಗುಣಮಟ್ಟದಲ್ಲಿ ಶೇ. 93ರಷ್ಟು ಹಾಗೂ ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಶೇ. 90ರಷ್ಟು ಗುರಿ ತಲುಪಿದ್ದರಿಂದ ಹೆರಿಗೆ ಕೊಠಡಿ ಮತ್ತು ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗಕ್ಕೆ ತಲಾ 6 ಲಕ್ಷ ರೂ. ದಂತೆ ಒಟ್ಟು 12 ಲಕ್ಷ ರೂ. ಬಹುಮಾನ ಪಡೆದುಕೊಂಡಿದೆ. ಈ ಪ್ರಶಸ್ತಿಗೆ ಆಸ್ಪತ್ರೆಯ
ಅಧಿಕಾರಿಗಳು ಹಾಗೂ ಸಿಬ್ಬಂದಿಯ ಶ್ರಮ ಹಾಗೂ ರೋಗಿಗಳ ಕುರಿತು ಅವರ ಕಾಳಜಿ ಹಾಗೂ ಆಸ್ಪತ್ರೆಯ ಸೌಲಭ್ಯಕ್ಕೆ ಸಂದ ಗೌರವವಾಗಿದೆ.

ಈ ಹಿಂದೆ ಕೋವೀಡ್‌-19 ಸಂದರ್ಭದಲ್ಲಿ ಹೆರಿಗೆಗೆ ಸಂಬಂಧಿಸಿದ ರೋಗಿಗಳಿಗೆ ಸ್ಥಳೀಯ ದಂಡಪ್ಪ ಮಾನ್ವಿ ಆಸ್ಪತ್ರೆ ಗದಗದಲ್ಲಿ ಸೇವೆ ನೀಡಲಾಗುತ್ತಿತ್ತು. ಕಳೆದ ಒಂದು ವರ್ಷದಿಂದ ಪುನಃ ಜಿಮ್ಸ್‌ ಆಸ್ಪತ್ರೆ ಗದಗ ಇಲ್ಲಿಗೆ ಸ್ಥಳಾಂತರಿಸಲಾಯಿತು.

24×7 ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯು ಲಭ್ಯವಿದ್ದು, ದೇಶ ಮಟ್ಟದಲ್ಲಿ ಗುಣಮಟ್ಟದ ಸೇವೆಗಳಿಂದ ಗುರುತಿಸಿಕೊಳ್ಳುವಂತಾಗಿದೆ. ಗದಗ ಜಿಲ್ಲೆಯ 6 ತಾಲೂಕುಗಳಿಂದ ಹಾಗೂ ಪಕ್ಕದ ಜಿಲ್ಲೆಗಳಿಂದಲೂ ಗರ್ಭಿಣಿಯರು ಮತ್ತು
ಮಕ್ಕಳು ದಾಖಲಾಗುತ್ತಿದ್ದಾರೆ. ತಿಂಗಳಿಗೆ ಅಂದಾಜು 400ರಿಂದ 500 ಹೆರಿಗೆ ಆಗುತ್ತಿದ್ದು, ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿರುವುದು ಗಮನಾರ್ಹ ವಿಷಯವಾಗಿದೆ. ದಿನನಿತ್ಯ ಸುಮಾರು 1,200ಕ್ಕಿಂತ ಹೆಚ್ಚು ರೋಗಿಗಳನ್ನು ಪರೀಕ್ಷಿಸಲಾಗುತ್ತಿದ್ದು, ಎಲ್ಲ ರೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೌರವದೊಂದಿಗೆ ವೈದ್ಯೋಪಚಾರ ನೀಡುತ್ತಿರುವುದು ಕೂಡ ಪ್ರಶಸ್ತಿ ದೊರೆಯಲು ಕಾರಣವಾಗಿದೆ.

ಡಾ| ಪಂಡಿತ್‌ ಭೀಮಸೇನ್‌ ಜೋಶಿ ತಾಲೂಕು ಆಸ್ಪತ್ರೆ

ಗದಗ ಜಿಲ್ಲೆಯ ರೋಣ ಪಟ್ಟಣದ 100 ಹಾಸಿಗೆಯ ಡಾ| ಪಂಡಿತ್‌ ಭೀಮಸೇನ್‌ ಜೋಶಿ ತಾಲೂಕು ಆಸ್ಪತ್ರೆಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತ ಸರ್ಕಾರದ ಅಧೀನದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಮಕ್ಕಳ ಅಧಿ ಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರನ್ವಯ ಹೆರಿಗೆ ಕೊಠಡಿಯ ಗುಣಮಟ್ಟದಲ್ಲಿ ಶೇ. 93ರಷ್ಟು ಹಾಗೂ ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಶೇ. 90ರಷ್ಟು ಗುರಿ ತಲುಪಿದ್ದರಿಂದ ಹೆರಿಗೆ ಕೊಠಡಿ ಮತ್ತು ಹೆರಿಗೆ ಶಸ್ತ್ರ ಚಿಕಿತ್ಸಾ ವಿಭಾಗಕ್ಕೆ ತಲಾ 2 ಲಕ್ಷ ರೂ.ದಂತೆ ಒಟ್ಟು 4 ಲಕ್ಷ ಬಹುಮಾನ ಪಡೆದುಕೊಂಡಿದೆ.

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೆರಿಗೆ ವಿಭಾಗದಲ್ಲಿ ರೋಗಿಗಳಿಗೆ ಕೊಡಲಾಗುತ್ತಿರುವ ಸೇವೆಗೆ ರಾಷ್ಟ್ರೀಯ ಲಕ್ಷ್ಯ ಕಾರ್ಯಕ್ರಮದಡಿ ಉತ್ತಮ ಗುಣಮಟ್ಟಕ್ಕೆ ಪ್ರಮಾಣಿಕರಣಗೊಂಡಿದೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೌಲಭ್ಯಗಳು ಹಾಗೂ ಸೇವೆಗಳು ದೊರೆಯುತ್ತಿವೆ. ಜಿಲ್ಲಾಸ್ಪತ್ರೆಯ ವೈದ್ಯಕೀಯ ಅ ಧೀಕ್ಷಕರು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಹಯೋಗದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ಪಾತ್ರ ಬಹು ಮುಖ್ಯವಾಗಿದೆ. ನಮ್ಮಲ್ಲಿ ಅನೇಕ ಸೌಲಭ್ಯಗಳು ಈಗಾಗಲೇ ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಸೌಲಭ್ಯಗಳು ಹಾಗೂ ಸೇವೆಗಳು ರೋಗಿಗಳಿಗೆ ದೊರಕಿಸಿಕೊಡಲು ನಿರಂತರ ಪ್ರಯತ್ನಿಸುತ್ತೇವೆ.
*ಡಾ| ಬಸವರಾಜ ಬೊಮ್ಮನಹಳ್ಳಿ, ನಿರ್ದೇಶಕರು ಜಿಮ್ಸ್‌, ಗದಗ

ಗದಗ ಜಿಲ್ಲೆಯ ಜಿಮ್ಸ್‌ ಆಸ್ಪತ್ರೆ ಮತ್ತು ರೋಣ ಪಟ್ಟಣದ ಡಾ| ಪಂಡಿತ್‌ ಭೀಮಸೇನ್‌ ಜೋಶಿ ತಾಲೂಕು ಆಸ್ಪತ್ರೆ ಲಕ್ಷ್ಯ ಕಾರ್ಯಕ್ರಮದಡಿ ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಶ್ರಮ ನಿಜಕ್ಕೂ ಶ್ಲಾಘನೀಯವಾಗಿದೆ.
ವೈಶಾಲಿ ಎಂ.ಎಲ್‌., ಜಿಲ್ಲಾಧಿಕಾರಿ

ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದೊಂದಿಗೆ ಲಕ್ಷ್ಯ ಕಾರ್ಯಕ್ರಮದಡಿ ಜಿಮ್ಸ್‌ ಹಾಗೂ ರೋಣ ಪಟ್ಟಣದ ತಾಲೂಕು ಆಸ್ಪತ್ರೆಯ ಹೆರಿಗೆ ವಿಭಾಗ ಮತ್ತು ಹೆರಿಗೆ ಶಸ್ತಚಿಕಿತ್ಸಾ ವಿಭಾಗದ ಲ್ಲಿ ಪ್ರಶಸ್ತಿ ಪಡೆದಿದ್ದು, ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿಯ ಕಾರ್ಯವೈಖರಿ ಮೂಲ ಕಾರಣ. ಮುಂದಿನ ದಿನಗಳಲ್ಲಿ ಜಿಲ್ಲೆಯ ಉಳಿದ 3 ತಾಲೂಕು ಮಟ್ಟದ ಆಸ್ಪತ್ರೆಗಳನ್ನೂ ಲಕ್ಷ್ಯ ಮೌಲ್ಯಮಾಪನಕ್ಕೆ ಒಳಪಡಿಸಲಾಗುವುದು.
*ಡಾ| ಸುಶೀಲಾ ಬಿ., ಜಿಪಂ ಸಿಇಒ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.